Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಭಿಮಾನಿ ಸಾವು, ಅಂತಿಮ ದರ್ಶನದಲ್ಲಿ ಕಣ್ಣೀರು ಹಾಕಿದ ನಟ
ಅಭಿಮಾನಿಗಳ ಸಂಕಷ್ಟಕ್ಕೆ, ಕಷ್ಟಕ್ಕೆ ಮಿಡಿಯುವ ಕಲಾವಿದರು ಚಿತ್ರರಂಗದಲ್ಲಿದ್ದಾರೆ. ತಮಿಳು ನಟ ಕಾರ್ತಿ ಮತ್ತು ಸೂರ್ಯ ಸಹೋದರರು ಈ ವಿಚಾರದಲ್ಲಿ ಸದಾ ಒಂದು ಹೆಜ್ಜೆ ಮುಂದೆ ಇರ್ತಾರೆ. ಅಭಿಮಾನಿಗಳಿಗೆ ಒಳ್ಳೆಯದಾಗಲಿ ಎಂಬ ಕಾರಣಕ್ಕೆ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಿರುವ ಉದಾಹರಣೆ ಇದೆ.
ತಮ್ಮ ಮುಂದಿನ ಸಿನಿಮಾ 'ತಂಬಿ' ಬಿಡುಗಡೆಗಾಗಿ ಕಾಯುತ್ತಿರುವ ನಟ ಕಾರ್ತಿಗೆ ಬೇಸರದ ಸಂಗತಿಯೊಂದು ಆಘಾತ ತಂದಿದೆ. ಕಾರ್ತಿ ಅವರ ಅಭಿಮಾನಿ ವೈಸಾಯಿ ನಿತ್ಯಾ ಎಂಬುವವರು ಸಾವನ್ನಪ್ಪಿದ್ದಾರೆ. ವೈಸಾಯಿ ನಿತ್ಯಾ ಅವರು ಚೆನ್ನೈನ ಜಿಲ್ಲೆಯ ಕಾರ್ತಿ ಅಭಿಮಾನಿ ಸಂಘದ ಅಧ್ಯಕ್ಷರಾಗಿದ್ದರು.
ಅಂತೆ ಕಂತೆ ನಿಜವಾಯ್ತು: ಕಾರ್ತಿ ಜೊತೆ ರಶ್ಮಿಕಾ ಸಿನಿಮಾ ಶುರುವಾಯ್ತು
ಕಾರ್ತಿ ಅವರ ಹೆಸರಲ್ಲಿ ಹಲವು ಸಮಾಜಮುಖಿ ಕೆಲಸ ಮಾಡಿದ್ದರು. ರಸ್ತೆ ಅಪಘಾತದಲ್ಲಿ ಕಾರ್ತಿ ಅಭಿಮಾನಿ ಕೊನೆಯುಸಿರೆಳೆದಿದ್ದಾರೆ. ಈ ವಿಷಯ ತಿಳಿದ ಕಾರ್ತಿ ಇಂದು ಬೆಳಿಗ್ಗೆ ಉಲುಂದರ್ ಪೇಟೆಯಲ್ಲಿರುವ ಅಭಿಮಾನಿ ಮನೆಗೆ ದಾವಿಸಿ ಸಂತಾಪ ಸೂಚಿಸಿದ್ದಾರೆ. ಈ ವೇಳೆ ಭಾವುಕರಾದ ಕಾರ್ತಿ ಅಭಿಮಾನಿಯನ್ನು ನೆನೆದು ಕಣ್ಣೀರಿಟ್ಟಿದ್ದಾರೆ.
ಅಭಿಮಾನಿಯ ಅಂತಿಮ ದರ್ಶನ ಪಡೆದು ವಾಪಸ್ ಆದ ಕಾರ್ತಿ, ತಂಬಿ ಸಿನಿಮಾದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಪ್ರೆಸ್ ಮೀಟ್ ಆರಂಭಕ್ಕೂ ಮುನ್ನ 1 ನಿಮಿಷ ಮೌನ ಆಚರಣೆ ಮಾಡಿದ್ದು ಕಂಡು ಬಂತು.
ಸದ್ಯ, 'ಖೈದಿ' ಸಿನಿಮಾದ ಯಶಸ್ಸಿನಲ್ಲಿರುವ ಕಾರ್ತಿ, 'ತಂಬಿ' ಸಿನಿಮಾದ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ವಿಶೇಷ ಅಂದ್ರೆ ಈ ಚಿತ್ರದಲ್ಲಿ ಕಾರ್ತಿ ಅವರ ಅತ್ತಿಗೆ ಜ್ಯೋತಿಕಾ ನಟಿಸಿದ್ದಾರೆ.