Don't Miss!
- News ಹಿಂದೂ ಯುವತಿ ಬರ್ಬರ ಹತ್ಯೆ ಪ್ರಕರಣ; ಇದೊಂದು ಲಬ್ ಜಿಹಾದ್ ಎಂದ ಜೋಶಿ: ಸಿದ್ದರಾಮಯ್ಯ ಹೇಳಿದ್ದೇನು?
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಖ್ಯಾತ ನಟ ಮನ್ಸೂರ್ ಅಲಿ ಖಾನ್ ಆಸ್ಪತ್ರೆಗೆ ದಾಖಲು
ದಕ್ಷಿಣ ಭಾರತದ ಖ್ಯಾತ ನಟ ಮನ್ಸೂರ್ ಅಲಿ ಖಾನ್ ಅವರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾದ ಹಿನ್ನೆಲೆ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಮನ್ಸೂರ್ ಅಲಿ ಖಾನ್ ಅವರ ಮೂತ್ರಪಿಂಡದಲ್ಲಿ ಕಲ್ಲು ಪತ್ತೆಯಾಗಿದ್ದು, ಸೋಮವಾರ (ಮೇ 10) ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಗಾಗಲೇ ಹಲವು ಪರೀಕ್ಷೆಗಳನ್ನು ಮಾಡಲಾಗಿದ್ದು, ಶೀಘ್ರದಲ್ಲೇ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗುವುದು ಎಂದು ತಿಳಿದು ಬಂದಿದೆ.
ಕೊರೊನಾ ಲಸಿಕೆ ಬಗ್ಗೆ ತಪ್ಪು ಮಾಹಿತಿ ಹಬ್ಬಿಸಿದ ನಟನಿಗೆ 2 ಲಕ್ಷ ರೂ.ದಂಡ
ಕೋವಿಡ್ ವ್ಯಾಕ್ಸಿನ್ ವಿಚಾರದಲ್ಲಿ ಮನ್ಸೂರ್ ಅಲಿ ಖಾನ್ ಅವರು ಇತ್ತೀಚಿಗೆ ಭಾರಿ ಸುದ್ದಿಯಲ್ಲಿದ್ದರು. 'ಸರ್ಕಾರ ಬಲವಂತವಾಗಿ ಜನರಿಗೆ ವ್ಯಾಕ್ಸಿನ್ ನೀಡುತ್ತಿದೆ, ವ್ಯಾಕ್ಸಿನ್ ಪಡೆದ ನಂತರ ಜನರು ಸಾಯುತ್ತಿದ್ದಾರೆ, ಸರ್ಕಾರವೇ ಸಾರ್ವಜನಿಕರನ್ನು ಕೊಲ್ಲುತ್ತಿದೆ' ಎಂದು ಆರೋಪಿಸಿದ್ದರು.
ಇತ್ತೀಚಿಗಷ್ಟೆ ಸಾವನ್ನಪ್ಪಿದ್ದ ತಮಿಳು ಹಾಸ್ಯ ನಟ ವಿವೇಕ್ ಅವರ ಸಾವಿನ ಬಗ್ಗೆಯೂ ಟೀಕೆ ಮಾಡಿದ್ದ ಮನ್ಸೂರ್ ಅಲಿ ಖಾನ್, ''ವ್ಯಾಕ್ಸಿನ್ ಪಡೆದ ನಂತರವೇ ವಿವೇಕ್ ನಿಧನರಾದರು, ಅದಕ್ಕೂ ಮುಂಚೆ ಅವರು ಚೆನ್ನಾಗಿದ್ದರು'' ಎಂದು ಗಂಭೀರ ಆರೋಪ ಮಾಡಿದ್ದರು.
ಮನ್ಸೂರ್ ಅಲಿ ಖಾನ್ ಅವರ ಈ ಆರೋಪಗಳ ವಿರುದ್ಧ ಮದ್ರಾಸ್ ಹೈ ಕೋರ್ಟ್ನಲ್ಲಿ ದೂರು ದಾಖಲಾಗಿತ್ತು. ಕೋವಿಡ್ ವ್ಯಾಕ್ಸಿನ್ ಬಗ್ಗೆ ತಪ್ಪು ಪ್ರಚಾರ ಮಾಡುತ್ತಿದ್ದಾರೆ ಎಂದು ನ್ಯಾಯಾಲಯ 2 ಲಕ್ಷ ದಂಡ ವಿಧಿಸಿತ್ತು.
ಮನ್ಸೂರ್ ಅಲಿ ಖಾನ್ ಸಿನಿಮಾಗಳು ಕುರಿತು
Recommended Video
ಮನ್ಸೂರ್ ಅಲಿ ಖಾನ್ ಅವರು ತಮಿಳು, ಕನ್ನಡ, ತೆಲುಗು ಹಾಗೂ ಮಲಯಾಳಂ ಚಿತ್ರಗಳಲ್ಲಿ ನಟಿಸಿದ್ದಾರೆ. ತಮಿಳು ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಮನ್ಸೂರ್ ಅಲಿ ಖಾನ್ ಕನ್ನಡದಲ್ಲಿ ಬಾಸ್, ಯುವ ಶಕ್ತಿ, ದಿಗ್ಗಜರು, ಮಸ್ತಿ, ಲೇಡಿ ಕಮಿಷನರ್ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.