Don't Miss!
- Lifestyle 2024: ಮದುವೆ, ಗಾಡಿ ಖರೀದಿ, ಗೃಹ ಪ್ರವೇಶ ಹೀಗೆ ಶುಭ ಕಾರ್ಯಕ್ಕೆ ಏಪ್ರಿಲ್ನಲ್ಲಿರುವ ಶುಭ ದಿನಾಂಕಗಳಿವು
- Finance 2023 ಡಿಸೆಂಬರ್ ವೇಳೆಗೆ 160 ಲಕ್ಷ ಕೋಟಿ ರೂ. ದಾಟಿದ ಸರ್ಕಾರದ ಸಾಲ!
- Automobiles Vande Bharat: ವಂದೇ ಭಾರತ್ ಸ್ಲೀಪರ್ ವಿಶೇಷತೆಗಳು: ಇಂಟೀರಿಯರ್ಗೆ ಫಿದಾ ಆಗ್ತೀರ!
- News Karnataka Lok Sabha: 28 ಕ್ಷೇತ್ರಗಳ ಜಾತಿವಾರು ಅಭ್ಯರ್ಥಿಗಳು ಯಾರು? ಮಾಹಿತಿ ಇಲ್ಲಿದೆ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊಲೆ ಬೆದರಿಕೆ ಇದ್ದರೂ ಪೊಲೀಸ್ ಭದ್ರತೆ ಬೇಡವೆಂದ ನಟ ಸಿದ್ಧಾರ್ಥ್
ತಮಿಳು ನಟ ಸಿದ್ಧಾರ್ಥ್ಗೆ ಹಲವಾರು ಮಂದಿ ದೂರವಾಣಿ ಮೂಲಕ ಕೊಲೆ ಬೆದರಿಕೆಗಳನ್ನು ಹಾಕಿದ್ದಾರೆ. ಸಿದ್ಧಾರ್ಥ್ ಕುಟುಂಬಕ್ಕೆ ಅತ್ಯಾಚಾರ ಬೆದರಿಕೆಗಳನ್ನು ಸಹ ಹಾಕಿದ್ದಾರೆ.
Recommended Video
ಈ ಬಗ್ಗೆ ಟ್ವೀಟ್ ಮಾಡಿದ್ದ ಸಿದ್ಧಾರ್ಥ್, 'ಬಿಜೆಪಿ ಐಟಿ ಸೆಲ್ನವರು ನನ್ನ ಮೊಬೈಲ್ ಸಂಖ್ಯೆ ಬಹಿರಂಗಗೊಳಿಸಿದ್ದಾರೆ. ನೂರಾರು ಮಂದಿ ನನಗೆ ಕರೆ ಮಾಡಿ ಕೊಲೆ ಬೆದರಿಕೆಗಳು, ನನ್ನ ಕುಟುಂಬಕ್ಕೆ ಅತ್ಯಾಚಾರ ಬೆದರಿಕೆ ಹಾಕಿದ್ದಾರೆ. ಅವರ ಸಂಖ್ಯೆಗಳನ್ನೆಲ್ಲಾ ಸೇರಿಸಿ ಪೊಲೀಸರಿಗೆ ದೂರು ನೀಡುತ್ತೇನೆ' ಎಂದಿದ್ದರು.
ಸಿದ್ಧಾರ್ಥ್ಗೆ ಬೆದರಿಕೆ ಕರೆಗಳು ಬಂದ ಹಿನ್ನೆಲೆಯಲ್ಲಿ ತಮಿಳುನಾಡು ಪೊಲೀಸರು ಸಿದ್ಧಾರ್ಥ್ಗೆ ಭದ್ರತೆ ಒದಗಿಸುವುದಾಗಿ ಹೇಳಿದ್ದಾರೆ. ಆದರೆ ಸಿದ್ಧಾರ್ಥ್ ಅವರು ಭದ್ರತೆಯನ್ನು ನಿರಾಕರಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ಧಾರ್ಥ್, 'ಭದ್ರತೆ ಒದಗಿಸುತ್ತೇನೆ ಎಂದ ನಿಮ್ಮ ಆಫರ್ಗೆ ಧನ್ಯವಾದಗಳು ತಮಿಳುನಾಡು ಪೊಲೀಸ್. ನಮ್ಮ ಕುಟುಂಬದಲ್ಲಿ ಹೀಗೆ ಪೊಲೀಸ್ ಭದ್ರತೆ ಒದಗಿಸಲ್ಪಟ್ಟ ಮೊದಲ ವ್ಯಕ್ತಿ ನಾನೇ. ಆದರೆ ನನಗೆ ಭದ್ರತೆ ಬೇಡ, ನನಗೆ ಭದ್ರತೆ ಒದಗಿಸಲು ನಿಯೋಜಿಸುವ ಅಧಿಕಾರಿಗಳನ್ನು ಈ ಕೊರೊನಾದ ಸಂಕಷ್ಟದ ಪರಿಸ್ಥಿತಿಯಲ್ಲಿ ಜನರ ಸೇವೆಗೆ ಬಳಸಿಕೊಳ್ಳಿ' ಎಂದಿದ್ದಾರೆ ಸಿದ್ಧಾರ್ಥ್.
ಸಿದ್ಧಾರ್ಥ್ ಅವರು ಕೇಂದ್ರ ಸರ್ಕಾರವನ್ನು ಬಹುವಾಗಿ ಟೀಕಿಸುತ್ತಿರುತ್ತಾರೆ ಹಾಗಾಗಿ ಅವರ ವಿರುದ್ಧ ಬಿಜೆಪಿ ಪ್ರೇಮಿಗಳು ಮುಗಿಬಿದ್ದಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಿದ್ಧಾರ್ಥ್ ಅವರ ಮೊಬೈಲ್ ಸಂಖ್ಯೆ ಬಹಿರಂಗಗೊಂಡಿತ್ತು ಹಾಗಾಗಿ ಅವರಿಗೆ ನೂರಾರು ಬೆದರಿಕೆ ಕರೆಗಳು ಬಂದಿದ್ದವು.