Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಜೆಪಿ ಐಟಿ ಸೆಲ್ ನಿಂದ ನನ್ನ ನಂಬರ್ ಲೀಕ್, ಅತ್ಯಾಚಾರ ಬೆದರಿಕೆ ಕರೆಗಳು ಬರುತ್ತಿವೆ; ಸಿದ್ಧಾರ್ಥ್ ಆಕ್ರೋಶ
ದಕ್ಷಿಣ ಭಾರತದ ಖ್ಯಾತ ನಟ ಸಿದ್ಧಾರ್ಥ್ ತನ್ನ ಫೋನ್ ನಂಬರ್ ಅನ್ನು ತಮಿಳುನಾಡು ಬಿಜೆಪಿ ಸದಸ್ಯರು ಮತ್ತು ಬಿಜೆಪಿ ಐಟಿ ಸೆಲ್ ಲೀಕ್ ಮಾಡಿದೆ ಎಂದು ಆರೋಪ ಮಾಡಿದ್ದಾರೆ. ಇದರಿಂದ ನನಗೆ 500ಕ್ಕೂ ಹೆಚ್ಚು ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಟ ಸಿದ್ಧಾರ್ಥ, 'ನನ್ನ ಫೋನ್ ನಂಬರ್ ಅನ್ನು ತಮಿಳುನಾಡು ಬಿಜೆಪಿ ಸದಸ್ಯರು ಮತ್ತು ತಮಿಳುನಾಡು ಬಿಜೆಪಿ ಐಟಿ ಸೆಲ್ ಲೀಕ್ ಮಾಡಿದೆ. ಕಳೆದ 24 ಗಂಟೆಯಲ್ಲಿ ನನಗೆ 500ಕ್ಕೂ ಹೆಚ್ಚು ಕರೆಗಳು ಬಂದಿದ್ದು, ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಹಾಕಿದ್ದಾರೆ. ಎಲ್ಲಾ ನಂಬರ್ ಗಳ ದಾಖಲೆಗಳನ್ನು ಪೊಲೀಸರಿಗೆ ನೀಡುತ್ತಿದ್ದೀನಿ. ನಾನು ಬಾಯಿಮುಚ್ಚುಕೊಂಡು ಸುಮ್ಮನೆ ಇರಲ್ಲ. ನನ್ನ ಪ್ರಯತ್ನ ಮಾಡುತ್ತಿರುತ್ತೇನೆ' ಎಂದು ಹೇಳಿದ್ದಾರೆ.
ಮತ್ತೊಂದು ಟ್ವೀಟ್ ಮಾಡಿ, 'ತಮಿಳುನಾಡು ಬಿಜೆಪಿ ಸದಸ್ಯರು ನಿನ್ನೆ ನನ್ನ ಸಂಖ್ಯೆಯನ್ನು ಸೇರಿಕೆ ಮಾಡಿ, ನನ್ನ ಮೇಲೆ ಹಲ್ಲೆ ಮತ್ತು ಕಿರುಕುಳ ನೀಡುವಂತೆ ಹೇಳಿದ್ದಾರೆ. ನಾವು ಕೋವಿಂಡ್ ಯಿಂದ ಬದುಕಬಹುದು ಆದರೆ ಈ ಇಂಥ ಜನರಿಂದ ಬದುಕಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದ್ದಾರೆ. ಜೊತೆಗೆ 'ಈ ವ್ಯಕ್ತಿಯನ್ನು ಮತ್ತೆ ಬಾಯಿತೆರೆಯದಂತೆ ಮಾಡಬೇಕು' ಎಂದು ಕಾಮೆಂಟ್ ಮಾಡಿರುವ ಸಂದೇಶದ ಸ್ಕ್ರೀನ್ ಶಾಟ್ ಅನ್ನು ಶೇರ್ ಮಾಡಿದ್ದಾರೆ.
'ಸ್ಟ್ಯಾಂಡ್ ವಿತ್ ಸಿದ್ಧಾರ್ಥ್' ಟ್ರೆಂಡ್
ನಟ ಸಿದ್ಧಾರ್ಥ್ ಗೆ ಅನೇಕರು ಬೆಂಬಲ ಸೂಚಿಸಿದ್ದಾರೆ. ಟ್ವಿಟ್ಟರ್ ನಲ್ಲಿ 'ಐ ಸ್ಟ್ಯಾಂಡ್ ವಿತ್ ಸಿದ್ಧಾರ್ಥ್' ಎಂದು ಟ್ರೆಂಡ್ ಆಗುತ್ತಿದೆ. ಅನೇಕ ಜನ ಸೆಲೆಬ್ರಿಟಿಗಳು ಕಾಮೆಂಟ್ ಮಾಡಿ ಬೆಂಬಲ ನೀಡುತ್ತಿದ್ದಾರೆ. ಬಾಲಿವುಡ್ ನಟಿ ಅದಿತಿ ರಾವ್ ಕಾಮೆಂಟ್ ಮಾಡಿ, ನಿಮಗೆ ಹೆಚ್ಚು ಧೈರ್ಯ, ಶಕ್ತಿ ಬರಲಿ ಸಿದ್ಧಾರ್ಥ್ ಗೆ ನನ್ನ ಬೆಂಬಲ ಎಂದು ಹೇಳಿದ್ದಾರೆ.
Recommended Video
ನಟ ಸಿದ್ಧಾರ್ಥ್ ಆಡಳಿತ ಪಕ್ಷದ ನಿಲುವುಗಳನ್ನು ಪ್ರಶ್ನಿಸಿ ಯಾವಾಗಲು ಧ್ವನಿ ಎತ್ತುತ್ತಿರುತ್ತಾರೆ. ಇತ್ತೀಚಿಗಷ್ಟೆ ಕೋವಿಡ್ ನಿಯಂತ್ರಿಸಲು ವಿಫಲವಾಗಿರುವ ಕೇಂದ್ರ ಸರ್ಕಾರವನ್ನು ಸಿದ್ಧಾರ್ಥ್ ಟೀಕಿಸಿದ್ದರು.