Don't Miss!
- Finance mukesh ambaniಗೆ 67 ವರ್ಷ, ಅವರು ಹೊಂದಿರುವ ದುಬಾರಿ ವಸ್ತುಗಳು ಏನೇನು ಗೊತ್ತಾ?
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೇಜಸ್ವಿ ಸೂರ್ಯ ವಿರುದ್ಧ ಮತ್ತೊಮ್ಮೆ ಕಾಮೆಂಟ್ ಮಾಡಿದ ನಟ ಸಿದ್ಧಾರ್ಥ್
ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ವಿರುದ್ಧ ತಮಿಳು ನಟ ಸಿದ್ಧಾರ್ಥ್ ಮತ್ತೊಮ್ಮೆ ಟ್ವೀಟ್ ಮಾಡಿದ್ದಾರೆ. 'ಬೆಂಗಳೂರು ದಕ್ಷಿಣ ರೂಪಾಂತರಿ ವೈರಸ್ ತುಂಬಾ ಅಪಾಯ' ಎಂದು ತೇಜಸ್ವಿ ಸೂರ್ಯ ಅವರನ್ನು ಕುಟುಕಿದ್ದಾರೆ.
Recommended Video
ಬೆಡ್ ಬ್ಲಾಕಿಂಗ್ ದಂಧೆಯನ್ನು ಬಯಲಿಗೆಳೆದು ಕೇವಲ ಒಂದು ಸಮುದಾಯ ಹದಿನೇಳು ಜನರು ಹೆಸರನ್ನು ಚರ್ಚಿಸಿದ್ದ ತೇಜಸ್ವಿ ಸೂರ್ಯ ವಿರುದ್ಧ ಅಸಮಾಧಾನ ವ್ಯಕ್ತವಾಗಿತ್ತು. ಕೇವಲ ಒಂದು ಸಮುದಾಯದ ಜನರನ್ನು ಮಾತ್ರ ಟಾರ್ಗೆಟ್ ಮಾಡಿದ್ದಾರೆ ಎಂದು ವಿರೋಧ ಉಂಟಾಗಿತ್ತು.
ಸಂಸದ ತೇಜಸ್ವಿ ಸೂರ್ಯ ಬಗ್ಗೆ ಟ್ವೀಟ್ ಮಾಡಿ ಡಿಲೀಟ್ ಮಾಡಿದ ನಟ ಸಿದ್ಧಾರ್ಥ್
ಈ ಸಂಬಂಧ ತೇಜಸ್ವಿ ಸೂರ್ಯ ವಿರುದ್ಧ ಟ್ವೀಟ್ ಮಾಡಿದ್ದ ಸಿದ್ಧಾರ್ಥ್ ''ಅಜ್ಮಲ್ ಕಸಬ್ಗಿಂತಲೂ ತೇಜಸ್ವಿ ಸೂರ್ಯ ಅಪಾಯಕಾರಿ'' ಎಂದಿದ್ದರು. ಈ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆ ಈ ಟ್ವೀಟ್ ಡಿಲೀಟ್ ಮಾಡಲಾಯಿತು.
ಇದೀಗ, ತೇಜಸ್ವಿ ಸೂರ್ಯ ವಿರುದ್ಧ ಸಿದ್ಧಾರ್ಥ್ ಮತ್ತೊಮ್ಮೆ ಕಾಮೆಂಟ್ ಮಾಡಿದ್ದಾರೆ. ಬೆಡ್ ಬ್ಲಾಕಿಂಗ್ ದಂಧೆ ಕುರಿತು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ ತೇಜಸ್ವಿ ಸೂರ್ಯ ಅವರು, ಪತ್ರಕರ್ತರು ಕೇಳಿದ ಕೆಲವು ಪ್ರಶ್ನೆಗಳಿಗೆ ತಬ್ಬಿಬ್ಬಾಗಿ ಉತ್ತರ ನೀಡದೇ ಮುಂದಿನ ಪ್ರಶ್ನೆಗೆ ಹೋದ ಘಟನೆ ನಡೆಯಿತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ವಿಡಿಯೋಗೆ ಪ್ರತಿಕ್ರಿಯಿಸಿರುವ ಸಿದ್ಧಾರ್ಥ್ 'ಬೆಂಗಳೂರು ದಕ್ಷಿಣ ರೂಪಾಂತರಿ ವೈರಸ್ ತುಂಬಾ ಅಪಾಯ' ಎಂದು ಕಾಲೆಳೆದಿದ್ದಾರೆ.
ಬಿಜೆಪಿ ಪಕ್ಷ ಮತ್ತು ಬಿಜೆಪಿ ಸರ್ಕಾರಗಳ ವಿರುದ್ಧ ಸಿದ್ಧಾರ್ಥ್ ತಮ್ಮ ಅಭಿಪ್ರಾಯಗಳನ್ನು ಮಂಡಿಸುತ್ತಲೇ ಇದ್ದಾರೆ. ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಚುನಾವಣೆ ಫಲಿತಾಂಶ ಹಿನ್ನೆಲೆ ಬಿಜೆಪಿ ವಿರುದ್ಧ ಟ್ವೀಟ್ ಮಾಡಿದ್ದರು. ನಂತರ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಟ್ವಿಟ್ಟರ್ನಲ್ಲಿ ಆರೋಪಿಸಿದರು.
''ಬಿಜೆಪಿ ಐಟಿ ಸೆಲ್ ನನ್ನ ಖಾಸಗಿ ಮೊಬೈಲ್ ನಂಬರ್ ಸೋರಿಕೆ ಮಾಡಿದೆ. ಸುಮಾರು 500ಕ್ಕೂ ಹೆಚ್ಚು ಬೆದರಿಕೆ ಕರೆಗಳು ಬಂದಿವೆ'' ಎಂದು ಸಿದ್ಧಾರ್ಥ್ ಟ್ವೀಟ್ನಲ್ಲಿ ತಿಳಿಸಿದ್ದರು.