Don't Miss!
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- News KRS ಸುತ್ತಲಿನ ಪ್ರದೇಶದಲ್ಲಿ ಗಣಿಗಾರಿಕೆ: ಖಡಕ್ ಎಚ್ಚರಿಕೆ ನೀಡಿದ ಹೈಕೋರ್ಟ್
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಸ್ಪತ್ರೆಯಿಂದ ಮನೆಗೆ ಮರಳಿದ ನಟ ಸೂರ್ಯ: ಅಣ್ಣನ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ನಟ ಕಾರ್ತಿ
ತಮಿಳಿನ ಖ್ಯಾತ ನಟ ಸೂರ್ಯ ಇತ್ತೀಚಿಗಷ್ಟೆ ಕೊರೊನಾ ಸೋಂಕು ದೃಢಪಟ್ಟ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗ ಪಡಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ಸೂರ್ಯ ಸದ್ಯ ಚೇತರಿಸಿಕೊಳ್ಳುತ್ತಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.
ಸದ್ಯ ಮನೆಯಲ್ಲೇ ಕ್ವೇರಂಟೈನ್ ಆಗಿದ್ದು, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಮುಂದುವರೆಸಿದ್ದಾರೆ. ಕೊರೊನಾ ಸೋಂಕು ದೃಢಪಟ್ಟ ಬಗ್ಗೆ ನಟ ಸೂರ್ಯ ಸೂರ್ಯ ಟ್ವೀಟ್ ಮಾಡಿ, 'ನಾನು ಕೊರೊನಾ ಸೋಂಕಿನಿಂದ ಬಳಲುತ್ತಿದ್ದೇನೆ. ವೈದ್ಯರಿಂದ ಚಿಕಿತ್ಸೆಪಡೆಯುತ್ತಿದ್ದೇನೆ. ಜೀವನವೂ ಇನ್ನು ಸಹಜ ಸ್ಥಿತಿಗೆ ಬಂದಿಲ್ಲ ಎಂದು ನಾವು ಅರಿತುಕೊಳ್ಳಬೇಕು. ಸುರಕ್ಷತೆಯ ಕಡೆ ಗಮನಕೊಡಬೇಕು' ಎಂದು ಹೇಳಿದ್ದರು.
ತಮಿಳು ನಟ ಸೂರ್ಯಗೆ ಕೊರೊನಾ ಪಾಸಿಟಿವ್
ಸದ್ಯ ಮನೆಗೆ ಮರಳಿರುವ ನಟ ಸೂರ್ಯ ಬಗ್ಗೆ ಸಹೋದರ ಕಾರ್ತಿ ಮಾಹಿತಿ ನೀಡಿದ್ದಾರೆ. ಸೂರ್ಯ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಇನ್ನು ಕೆಲವು ದಿನಗಳು ಮನೆಯಲ್ಲೇ ಕ್ವಾರಂಟೈನ್ ಆಗಲಿದ್ದಾರೆ ಎಂದು ಹೇಳಿದ್ದಾರೆ. 'ಅಣ್ಣ ಮನೆಗೆ ಬಂದಿದ್ದಾರೆ, ಸುರಕ್ಷಿತರಾಗಿದ್ದಾರೆ. ಕೆಲವು ದಿನಗಳ ವರೆಗೆ ಮನೆಯಲ್ಲೇ ಇರಲಿದ್ದಾರೆ. ಅಣ್ಣನಿಗಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು' ಎಂದು ಟ್ವೀಟ್ ಮಾಡಿದ್ದಾರೆ.
ಸೂರ್ಯ ಆಸ್ಪತ್ರೆಗೆ ಸೇರುತ್ತಿದಂತೆ ಅಭಿಮಾನಿಗಳಲ್ಲಿ ಆತಂಕ ಮನೆಮಾಡಿತ್ತು. ಸದ್ಯ ಚೇತರಿಸಿಕೊಳ್ಳುತ್ತಿದ್ದು, ಆಸ್ಪತ್ರೆಯಿಂದ ಮನೆಗೆ ಮರಳಿರುವ ವಿಷಯ ತಿಳಿದು ಅಭಿಮಾನಿಗಳಲ್ಲಿ ಸಂತಸ ಮೂಡಿದೆ. ಬೇಗ ಗಣಮುಖರಾಗಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ.
ಸಿನಿಮಾ ವಿಚಾರಕ್ಕೆ ಬರುವುದಾದರೆ ಸೂರ್ಯ ಕೊನೆಯದಾಗಿ ಸೂರರೈ ಪೊಟ್ರು ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ಆಗಿದೆ. ಒಟಿಟಿಯಲ್ಲಿ ರಿಲೀಸ್ ಆಗಿದ್ದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಿನಿಮಾ ಆಸ್ಕರ್ ರೇಸ್ ನಲ್ಲಿ ಜಾಗ ಪಡೆದಿದೆ.
Recommended Video
ಇತ್ತೀಚಿಗಷ್ಟೆ ಸೂರ್ಯ ನಟನೆಯ 40ನೇ ಸಿನಿಮಾ ಅನೌನ್ಸ್ ಆಗಿದ್ದು, ಪಾಂಡಿರಾಜ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸೂರ್ಯಗೆ ನಾಯಕಿಯಾಗಿ ಪ್ರಿಯಾಂಕಾ ಮೋಹನ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಚಿತ್ರೀಕರಣಕ್ಕೆ ಸಿದ್ಧರಾಗಿದ್ದ ಸೂರ್ಯಗೆ ಈಗ ಕೊರೊನಾ ಸೋಂಕು ತಗುಲಿರುವುದರಿಂದ ಚಿತ್ರೀಕರಣ ತಡವಾಗುವ ಸಾಧ್ಯತೆ ಇದೆ.