Don't Miss!
- News Big Offer for Bengaluru Voters: ಮತದಾರರಿಗೆ ಗುಡ್ ನ್ಯೂಸ್.. ರಿಯಾಯಿತಿ ದರದಲ್ಲಿ ತಿಂಡಿ ವ್ಯವಸ್ಥೆ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ನೀಟ್' ಪರೀಕ್ಷೆ ವಿದ್ಯಾರ್ಥಿಗಳಿಗೆ ಬೆದರಿಕೆ; ನಟ ಸೂರ್ಯ
ತಮಿಳಿನ ಖ್ಯಾತ ನಟ ಸೂರ್ಯ ಮತ್ತೊಮ್ಮೆ ವಿದ್ಯಾರ್ಥಿಗಳ ಪರ ನಿಂತಿದ್ದಾರೆ. ನೀಟ್ ಪರೀಕ್ಷೆ ವಿರುದ್ಧ ನಟ ಸೂರ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಟ ಸೂರ್ಯ, ನೀಟ್ ಪರೀಕ್ಷೆ ವಿದ್ಯಾರ್ಥಿಗಳಿಗೆ ಬೆದರಿಕೆ ಎಂದು ಹೇಳಿದ್ದಾರೆ. ಇನ್ನು ಶಿಕ್ಷಣವು ರಾಜ್ಯದ ಜವಾಬ್ದಾರಿ ಮತ್ತು ಹಕ್ಕಾಗಬೇಕೆಂದು ಹೇಳಿದ್ದಾರೆ.
ನೀಟ್ ಪರೀಕ್ಷೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತೆ, ನೀಟ್ ಪರೀಕ್ಷೆ ರದ್ದಾಗಬೇಕೆಂದು ನಟ ಸೂರ್ಯ ಒತ್ತಾಯ ಮಾಡಿದ್ದಾರೆ. ವಿದ್ಯಾರ್ಥಿಗಳ ಸಹಾಯದ ಕಡೆ ಗಮನಹರಿಸುವ ತನ್ನ ಎನ್ ಜಿ ಒ ಅಗರಮ್ ಫೌಂಡೇಶನ್ ಪರವಾಗಿ ನಟ ಸೂರ್ಯ ನ್ಯಾಯಮೂರ್ತಿ ಎ.ಕೆ ರಾಜನ್ ನೇತೃತ್ವದ ಸಮಿತಿಗೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ವೈದ್ಯಕೀಯ ಪ್ರವೇಶದ ಮೇಲೆ ನೀಟ್ ಪ್ರಭಾವವನ್ನು ಅಧ್ಯಯನ ಮಾಡಲು ತಮಿಳುನಾಡು ಸರ್ಕಾರ ನೇಮಕ ಮಾಡಿದ ಸಮಿತಿಯಿದು.
''ನೀಟ್ ಪರೀಕ್ಷೆ ಬಗ್ಗೆ ಸರ್ಕಾರ ಮತ್ತು ಬದಲಾವಣೆ ತರುವವರಿಗೆ ನಾವು ಸರಿಯಾಗಿ ತಿಳಿಸುವುದು ಮುಖ್ಯವಾಗಿದೆ. ಇಲ್ಲದಿದ್ದರೆ ಇಂಥ ಪರೀಕ್ಷೆಗಳು ಮಕ್ಕಳ ಭವಿಷ್ಯವನ್ನು ಹಾಳುಮಾಡುತ್ತೆ," ಎಂದು ಹೇಳಿದ್ದಾರೆ.
Recommended Video
"ಭಾಷೆ ಮತ್ತು ಸಂಸ್ಕೃತಿಯಲ್ಲಿ ವೈವಿಧ್ಯಮಯವಾಗಿರುವ ಭಾರತದಂತಹ ದೇಶಕ್ಕೆ, ಶಿಕ್ಷಣ ವ್ಯವಸ್ಥೆಯು ತನ್ನ ರಾಜ್ಯದ ಕೈಯಲ್ಲಿ ಇದ್ದರೆ ಮಾತ್ರ ನ್ಯಾಯ. ಇದರ ಮೂಲಕ ನಾವು ಶಾಶ್ವತ ಪರಿಹಾರ ನೋಡಬಹುದು. ಎಲ್ಲಾ ರ್ಜಾಯ್ ರಾಜಕೀಯ ಪಕ್ಷಗಳು ಒಂದಾಗಲು ಮತ್ತು ಶಿಕ್ಷಣವನ್ನು ರಾಜ್ಯದ ಜವಾಬ್ದಾರಿ ಮತ್ತು ಹಕ್ಕನ್ನಾಗಿ ಮಾಡಲು ಕೆಲಸ ಮಾಡಬೇಕೆಂದು ನಾನು ವಿನಂತಿಸುತ್ತೇನೆ," ಎಂದು ಸೂರ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.