Don't Miss!
- News IT Company: ಐಟಿ-ಬಿಟಿ ಕಂಪನಿಗಳಿಗೆ ಜಲಮಂಡಳಿಯ ನೀರಿನ ಭರವಸೆ
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ನೀಟ್' ಪರೀಕ್ಷೆ ವಿದ್ಯಾರ್ಥಿಗಳಿಗೆ ಬೆದರಿಕೆ; ನಟ ಸೂರ್ಯ
ತಮಿಳಿನ ಖ್ಯಾತ ನಟ ಸೂರ್ಯ ಮತ್ತೊಮ್ಮೆ ವಿದ್ಯಾರ್ಥಿಗಳ ಪರ ನಿಂತಿದ್ದಾರೆ. ನೀಟ್ ಪರೀಕ್ಷೆ ವಿರುದ್ಧ ನಟ ಸೂರ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಟ ಸೂರ್ಯ, ನೀಟ್ ಪರೀಕ್ಷೆ ವಿದ್ಯಾರ್ಥಿಗಳಿಗೆ ಬೆದರಿಕೆ ಎಂದು ಹೇಳಿದ್ದಾರೆ. ಇನ್ನು ಶಿಕ್ಷಣವು ರಾಜ್ಯದ ಜವಾಬ್ದಾರಿ ಮತ್ತು ಹಕ್ಕಾಗಬೇಕೆಂದು ಹೇಳಿದ್ದಾರೆ.
ನೀಟ್ ಪರೀಕ್ಷೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತೆ, ನೀಟ್ ಪರೀಕ್ಷೆ ರದ್ದಾಗಬೇಕೆಂದು ನಟ ಸೂರ್ಯ ಒತ್ತಾಯ ಮಾಡಿದ್ದಾರೆ. ವಿದ್ಯಾರ್ಥಿಗಳ ಸಹಾಯದ ಕಡೆ ಗಮನಹರಿಸುವ ತನ್ನ ಎನ್ ಜಿ ಒ ಅಗರಮ್ ಫೌಂಡೇಶನ್ ಪರವಾಗಿ ನಟ ಸೂರ್ಯ ನ್ಯಾಯಮೂರ್ತಿ ಎ.ಕೆ ರಾಜನ್ ನೇತೃತ್ವದ ಸಮಿತಿಗೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ವೈದ್ಯಕೀಯ ಪ್ರವೇಶದ ಮೇಲೆ ನೀಟ್ ಪ್ರಭಾವವನ್ನು ಅಧ್ಯಯನ ಮಾಡಲು ತಮಿಳುನಾಡು ಸರ್ಕಾರ ನೇಮಕ ಮಾಡಿದ ಸಮಿತಿಯಿದು.
''ನೀಟ್ ಪರೀಕ್ಷೆ ಬಗ್ಗೆ ಸರ್ಕಾರ ಮತ್ತು ಬದಲಾವಣೆ ತರುವವರಿಗೆ ನಾವು ಸರಿಯಾಗಿ ತಿಳಿಸುವುದು ಮುಖ್ಯವಾಗಿದೆ. ಇಲ್ಲದಿದ್ದರೆ ಇಂಥ ಪರೀಕ್ಷೆಗಳು ಮಕ್ಕಳ ಭವಿಷ್ಯವನ್ನು ಹಾಳುಮಾಡುತ್ತೆ," ಎಂದು ಹೇಳಿದ್ದಾರೆ.
Recommended Video
"ಭಾಷೆ ಮತ್ತು ಸಂಸ್ಕೃತಿಯಲ್ಲಿ ವೈವಿಧ್ಯಮಯವಾಗಿರುವ ಭಾರತದಂತಹ ದೇಶಕ್ಕೆ, ಶಿಕ್ಷಣ ವ್ಯವಸ್ಥೆಯು ತನ್ನ ರಾಜ್ಯದ ಕೈಯಲ್ಲಿ ಇದ್ದರೆ ಮಾತ್ರ ನ್ಯಾಯ. ಇದರ ಮೂಲಕ ನಾವು ಶಾಶ್ವತ ಪರಿಹಾರ ನೋಡಬಹುದು. ಎಲ್ಲಾ ರ್ಜಾಯ್ ರಾಜಕೀಯ ಪಕ್ಷಗಳು ಒಂದಾಗಲು ಮತ್ತು ಶಿಕ್ಷಣವನ್ನು ರಾಜ್ಯದ ಜವಾಬ್ದಾರಿ ಮತ್ತು ಹಕ್ಕನ್ನಾಗಿ ಮಾಡಲು ಕೆಲಸ ಮಾಡಬೇಕೆಂದು ನಾನು ವಿನಂತಿಸುತ್ತೇನೆ," ಎಂದು ಸೂರ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.