Don't Miss!
- Sports ಲಾರೆಸ್ ವರ್ಲ್ಡ್ ಸ್ಪೋರ್ಟ್ಸ್ ಅವಾರ್ಡ್ಸ್ನಲ್ಲಿ ವಿರಾಟ್ ಕೊಹ್ಲಿಯ 50ನೇ ಏಕದಿನ ಶತಕ!
- News Namma Metro Blue Line: ಇತರ ಮಾರ್ಗಕ್ಕಿಂತಲೂ 'ನೀಲಿ' ಮಾರ್ಗದಲ್ಲಿ ವೇಗವಾಗಿ ಓಡಲಿವೆ ಮೆಟ್ರೋ, ಅಪ್ಡೇಟ್
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
"ವಿಜಯ್ ನಂ 1 ಸ್ಟಾರ್ ಹೆಚ್ಚು ಥಿಯೇಟರ್ ಕೊಡಿ" ಎಂದು ದಿಲ್ ರಾಜು: ಅಜಿತ್ ಫ್ಯಾನ್ಸ್ ಅಕ್ರೋಶ!
2023ಕ್ಕೆ ತಮಿಳುನಾಡಿನ ಬಾಕ್ಸಾಫೀಸ್ನಲ್ಲಿ ಮಹಾಯುದ್ಧವೇ ನಡೆಯಲಿದೆ. ದಳಪತಿ ವಿಜಯ್ ಸಿನಿಮಾ 'ವಾರಿಸು' ಹಾಗೂ ಅಜಿತ್ ಸಿನಿಮಾ 'ಥುನಿವು' ಸಂಕ್ರಾಂತಿ ಹಬ್ಬಕ್ಕೆ ಬಿಡುಗಡೆಯಾಗುತ್ತಿದೆ. ಇಬ್ಬರು ಸೂಪರ್ಸ್ಟಾರ್ ಸಿನಿಮಾಗಳು ಬಾಕ್ಸಾಫೀಸ್ನಲ್ಲಿ ನಂ 1 ಸ್ಥಾನಕ್ಕಾಗಿ ಫೈಟ್ ಮಾಡೋದು ಪಕ್ಕಾ ಆಗಿದೆ.
ತೆಲುಗಿನ ಸ್ಟಾರ್ ನಿರ್ಮಾಪಕ ದಿಲ್ ರಾಜು ತಮಿಳು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ದಳಪತಿ ವಿಜಯ್ ಅಭಿನಯದ 'ವಾರಿಸು' ಸಿನಿಮಾವನ್ನು ನಿರ್ಮಾಣ ಮಾಡಿದ್ದು, ಸಂಕ್ರಾಂತಿ ಹಬ್ಬಕ್ಕೆ ಅದ್ಧೂರಿಯಾಗಿ ಬಿಡುಗಡೆ ಮಾಡುವುದಕ್ಕೆ ಸಿದ್ಧತೆ ನಡೆಸಿದ್ದಾರೆ. ಇದೇ ವೇಳೆ ಅಜಿತ್ ಸಿನಿಮಾ 'ಥುನಿವು' ಕೂಡ ಇದೇ ವೇಳೆ ರಿಲೀಸ್ ಆಗುತ್ತಿರೋದ್ರಿಂದ ಥಿಯೇಟರ್ಗಾಗಿ ಪೈಪೋಟಿ ಹೆಚ್ಚಾಗಿದೆ.
'ವಾರಿಸು' ಆಡಿಯೋ ಲಾಂಚ್: ನಿರ್ಮಾಪಕರ ವಿರುದ್ಧ ಸಿಡಿದೆದ್ದ ವಿಜಯ್ ಅಭಿಮಾನಿಗಳು
ದಳಪತಿ ವಿಜಯ್ ಹೆಸರನ್ನು ಮುಂದಿಟ್ಟುಕೊಂಡು ದಿಲ್ ರಾಜ್ ಹೆಚ್ಚು ಥಿಯೇಟರ್ಗಳಿಗೆ ಬೇಡಿಕೆ ಇಡುತ್ತಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆ ಬಗ್ಗೆ ಅಜಿತ್ ಅಭಿಮಾನಿಗಳು ಕಿಡಿಕಾರುತ್ತಿದ್ದಾರೆ. ಅಷ್ಟಕ್ಕೂ ದಿಲ್ ರಾಜು ವಿರುದ್ಧ ಅಜಿತ್ ಫ್ಯಾನ್ಸ್ ಕೋಪಕೊಳ್ಳಲು ಅಸಲಿ ಕಾರಣವೇನು? ಅನ್ನೋದನ್ನು ತಿಳಿಯಲು ಮುಂದೆ ಓದಿ.
'ವಾರಿಸು' Vs 'ಥುನಿವು'
ದಳಪತಿ ವಿಜಯ್ ಅಭಿನಯದ 'ಬೀಸ್ಟ್' ಸಿನಿಮಾ ಬಳಿಕ 'ವಾರಿಸು' ರಿಲೀಸ್ಗೆ ರೆಡಿಯಾಗಿದೆ. ದಿಲ್ ರಾಜು ಸಿನಿಮಾವನ್ನು ನಿರ್ಮಾಣ ಮಾಡಿದ್ರೆ, ವಂಶಿ ಪೈಡಿಪಲ್ಲಿ ಆಕ್ಷನ್ ಕಟ್ ಹೇಳಿದ್ದಾರೆ. ಹೀಗಾಗಿ ದಳಪತಿ ವಿಜಯ್ ಅಭಿಮಾನಿಗಳಲ್ಲಿ ನಿರೀಕ್ಷೆಗಳು ಬೆಟ್ಟದಷ್ಟಿವೆ. ಇದೇ ವೇಳೆ ತಮಿಳಿನ ಮತ್ತೊಬ್ಬ ಸೂಪರ್ಸ್ಟಾರ್ ಅಜಿತ್ ಸಿನಿಮಾ 'ಥುನಿವು' ಕೂಡ ಬಿಡುಗಡೆಯಾಗುತ್ತಿರೋದ್ರಿಂದ ಇಬ್ಬರೂ ಅಭಿಮಾನಿಗಳು ಬಾಕ್ಸಾಫೀಸ್ನಲ್ಲಿ ಗೆಲ್ಲಿಸೋಕೆ ತುದಿಗಾಲಲ್ಲಿ ನಿಂತಿದ್ದಾರೆ. ಈ ಹೊತ್ತಲ್ಲಿ ದಿಲ್ ರಾಜು ಹೇಳಿಕೆಗಳು ಅಜಿತ್ ಅಭಿಮಾನಿಗಳ ನಿದ್ದೆ ಕೆಡಿಸುತ್ತಿವೆ.
ಹೆಚ್ಚು ಥಿಯೇಟರ್ಗೆ ಬೇಡಿಕೆ ಇಟ್ಟ ವಿಜಯ್
ಇಬ್ಬರು ಸೂಪರ್ಸ್ಟಾರ್ ಸಿನಿಮಾಗಳು ಒಟ್ಟಿಗೆ ರಿಲೀಸ್ಗೆ ರೆಡಿಯಾದ್ರೆ, ಫ್ಯಾನ್ಸ್ ಅಲರ್ಟ್ ಆಗುತ್ತಾರೆ. ಈ ವೇಳೆ ಸ್ವಲ್ಪ ಹೆಚ್ಚು ಕಡಿಮೆ ಆದರೂ, ಫ್ಯಾನ್ಸ್ ವಾರ್ಗೆ ಕಾರಣ ಆಗುತ್ತೆ. ಇದು ಗೊತ್ತಿದ್ದರೂ, ದಳಪತಿ ವಿಜಯ್ ನಂ 1 ಸ್ಟಾರ್ ಅದಕ್ಕೆ ಹೆಚ್ಚು ಚಿತ್ರಮಂದಿರಗಳನ್ನು ಕೊಡಿ ಅಂತ ದಿಲ್ ರಾಜು ಬ್ಯುಸಿನೆಸ್ ಮಾಡುತ್ತಿದ್ದಾರೆ. ಹೀಗಾಗಿ ವಿತರಕರಿಗೆ ಶೇ.20ಕ್ಕೂ ಹೆಚ್ಚು ಚಿತ್ರಮಂದಿರಗಳನ್ನು ನೀಡಬೇಕು ಎಂದು ಬೇಡಿಕೆ ಇಡುತ್ತಿದ್ದಾರಂತೆ.
ದಿಲ್ ರಾಜು ವಿರುದ್ಧ ಅಜಿತ್ ಫ್ಯಾನ್ ಗರಂ
ದಿಲ್ ರಾಜು ಬ್ಯಾಕ್ ಟು ಬ್ಯಾಕ್ ಸಂದರ್ಶನಗಳನ್ನು ನೀಡುತ್ತಿದ್ದಾರೆ. ಈ ವೇಳೆ 'ವಾರಿಸು' ಸಿನಿಮಾ ಬಗ್ಗೆ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಈ ವೇಳೆ ವಿಜಯ್ ನಂ 1 ಸ್ಟಾರ್ ಅಂತ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪ ಮಾಡಲಾಗುತ್ತಿದೆ. ಅಜಿತ್ ಅಭಿಮಾನಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಸೋಶಿಯಲ್ ಮೀಡಿಯಾದಲ್ಲಿ ದಿಲ್ ರಾಜು ವಿರುದ್ಧ ಕಿಡಿಕಾರುತ್ತಿದ್ದಾರೆ.
ವಿಜಯ್ ಅಜಿತ್ ಫ್ಯಾನ್ಸ್ ವಾರ್?
ದಳಪತಿ ವಿಜಯ್ ಸಿನಿಮಾ 'ವಾರಿಸು' ಎರಡು ಭಾಷೆಗಳಲ್ಲಿ ನಿರ್ಮಾಣ ಆಗಿದೆ. ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದ್ದು, ಎರಡೂ ಭಾಷೆಯಲ್ಲೂ ಭರ್ಜರಿ ಬ್ಯುಸಿನೆಸ್ ಮಾಡುತ್ತಿದೆ. ಅದೇ ಇನ್ನೊಂದು ಕಡೆ ಅಜಿತ್ ಸಿನಿಮಾ 'ಥುನಿವು' ಬಗ್ಗೆ ಕುತೂಹಲ ಹೆಚ್ಚಾಗಿದೆ. ಎರಡೂ ಸಿನಿಮಾಗಳು ಬಾಕ್ಸಾಫೀಸ್ನಲ್ಲಿ ಹೇಗೆ ಸದ್ದು ಮಾಡುತ್ತೆ. ಇರಡೂ ಸಿನಿಮಾಗಳಲ್ಲೂ ಗೆಲ್ಲೋದು ಯಾವುದು? ಅನ್ನೋ ಲೆಕ್ಕಾಚಾರ ಶುರುವಾಗಿದೆ.