Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಕ್ಷಿಣ ಭಾರತದ ಸಿನಿ ಕಾರ್ಮಿಕರ ಸಂಘಕ್ಕೆ 10 ಲಕ್ಷ ದೇಣಿಗೆ ನೀಡಿದ ಅಜಿತ್
ತಮಿಳು ಸ್ಟಾರ್ ನಟ ಅಜಿತ್ ಕುಮಾರ್ ಅವರು ದಕ್ಷಿಣ ಭಾರತದ ಸಿನಿಮಾ ಕಾರ್ಮಿಕರ ಸಂಘಕ್ಕೆ ಹತ್ತು ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಈ ವಿಚಾರವನ್ನು ಖುದ್ದು ಸಂಘದ ಅಧ್ಯಕ್ಷ ಆರ್ಕೆ ಸೆಲ್ವಮಣಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಆನ್ಲೈನ್ ಮೂಲಕ ಹಣ ಕಳುಹಿಸಿದ್ದಾರೆ ಎಂದು ಅಧ್ಯಕ್ಷ ಸೆಲ್ವಮಣಿ ತಿಳಿಸಿದ್ದು, ಕಾರ್ಮಿಕರ ಸಂಘದ ಪರವಾಗಿ ಅಜಿತ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ನಟ ಸೂರ್ಯ ಮತ್ತು ಕಾರ್ತಿ ಸಹೋದರರಿಂದ ಸಿಎಂ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ
ಲಾಕ್ಡೌನ್ನಿಂದ ಸಿನಿಮಾರಂಗ ಸಂಕಷ್ಟದಲ್ಲಿದೆ. ಸಿನಿಮಾ ಕೆಲಸಗಳನ್ನೇ ನಂಬಿಕೊಂಡಿರುವ ಸಾವಿರಾರು ಕಾರ್ಮಿಕರು ದಿನನಿತ್ಯದ ಜೀವನ ಸಾಗಿಸಲು ಕಷ್ಟ ಪಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಅಜಿತ್ ಅವರು ಸಿನಿಮಾ ಕಾರ್ಮಿಕರ ಸಹಾಯಕ್ಕೆ ಬಂದಿರುವುದು ಮೆಚ್ಚುಗೆ ಗಳಿಸಿಕೊಂಡಿದೆ.
ಇದಕ್ಕೂ ಮೊದಲು ನಟ ಅಜಿತ್ ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ರೂಪಾಯಿ ದೇಣಿಗೆ ನೀಡಿದ್ದರು. ಆನ್ಲೈನ್ ಮೂಲಕ ಸಿಎಂ ನಿಧಿಗೆ ಹಣ ಕಳುಹಿಸಿರುವುದಾಗಿ ಅಜಿತ್ ಮ್ಯಾನೇಜರ್ ಅಧಿಕೃತವಾಗಿ ಮಾಹಿತಿ ನೀಡಿದ್ದರು.
ತಮಿಳು ನಟ ಸೂರ್ಯ, ಕಾರ್ತಿ ಸಹೋದರರು ಸಿಎಂ ಪರಿಹಾರ ನಿಧಿಗೆ 1 ಕೋಟಿ ದೇಣಿಗೆ ನೀಡಿದ್ದಾರೆ. ರಜನಿಕಾಂತ್ ಮಗಳು ಸೌಂದರ್ಯ ಕುಟುಂಬದವರು ಒಂದು ಕೋಟಿ ಚೆಕ್ ಹಸ್ತಾಂತರಿಸಿದ್ದರು.
ಇನ್ನುಳಿದಂತೆ ಅಜಿತ್ ಕುಮಾರ್ ನಟನೆಯಲ್ಲಿ ತಯಾರಾಗಿರುವ ವಾಲಿಮೈ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಕೊರೊನಾ ಭೀತಿ ಕಡಿಮೆಯಾಗುತ್ತಿದ್ದಂತೆ ಚಿತ್ರಮಂದಿರಕ್ಕೆ ಬರುವ ಲೆಕ್ಕಾಚಾರದಲ್ಲಿದೆ.
Recommended Video
ತಮಿಳುನಾಡಿನಲ್ಲಿ ಮೇ 31ರವರೆಗೂ ಸಿನಿಮಾ ಮತ್ತು ಟೆಲಿವಿಷನ್ಗೆ ಸಂಬಂಧಿಸಿದ ಚಿತ್ರೀಕರಣ ರದ್ದುಗೊಳಿಸಲಾಗಿದೆ.