Don't Miss!
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- News ಬೆಂಗಳೂರಿನಲ್ಲಿ ಮೋದಿ ಮತಬೇಟೆ; ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ ಏನಿದೆ?: ಡಾ.ಜಿ ಪರಮೇಶ್ವರ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾ ನಿರ್ದೇಶಕನಾಗಲು ಅಪಹರಣದ ನಾಟಕವಾಡಿದ ಯುವಕ!
ಸಿನಿಮಾ ನಿರ್ದೇಶಕರಾಗಲು ಏನೇನೋ ಶ್ರಮ ಪಟ್ಟ ಹಲವರು ನಮ್ಮ ನಡುವೆ ಇದ್ದಾರೆ. ಕೊರಿಯರ್ ಬಾಯ್ ಆಗಿದ್ದವರು, ಕೂಲಿ ಕೆಲಸ ಮಾಡುತ್ತಿದ್ದವರೆಲ್ಲ ಹಲವು ರೀತಿ ಶ್ರಮ ಪಟ್ಟು ಸಿನಿಮಾ ಕನಸು ನನಸು ಮಾಡಿಕೊಂಡಿದ್ದಾರೆ. ಆದರೆ ಇಲ್ಲೊಬ್ಬ ಸಿನಿಮಾ ನಿರ್ದೇಶಕನಾಗಲು ಅಪಹರಣದ ನಾಟಕವಾಡಿ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಂಡಿದ್ದಾನೆ.
24 ವರ್ಷದ ತಮಿಳುನಾಡಿನ ಯುವಕನೊಬ್ಬ ಕಿರು ಚಿತ್ರ ನಿರ್ದೇಶಿಸಿ, ನಿರ್ಮಿಸುವ ಹುಚ್ಚಿಗೆ ಬಿದ್ದಿದ್ದ. ಪೋಷಕರ ಬಳಿ ಸಿನಿಮಾ ನಿರ್ಮಾಣಕ್ಕಾಗಿ ಹಣ ಕೇಳಿದ್ದಾನೆ. ಆದರೆ ಪೋಷಕರು ಹಣ ನೀಡಲು ನಿರಾಕರಿಸಿದಾಗ ಆತ ತನ್ನದೇ ಅಪಹರಣದ ನಾಟಕವಾಡಿದ್ದಾನೆ.
ವಡಪಲನಿಯ ಮಾಲ್ಗೆ ಹೋಗಿ ಬರುವುದಾಗಿ ಮನೆಯಲ್ಲಿ ಹೇಳಿ ಹೋಗಿದ್ದ ಯುವಕ ಆ ದಿನವೆಲ್ಲ ಮನೆಗೆ ಬಂದಿಲ್ಲ. ಮಗ ಮನೆಗೆ ಮರಳದೇ ಇರುವುದು ಕಂಡು ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಮಾರನೇಯ ದಿನ ಯುವಕನ ಪೋಷಕರಿಗೆ ಕರೆಯೊಂದು ಬಂದಿದ್ದು ಮಗನನ್ನು ಸುರಕ್ಷಿತವಾಗಿ ಕಾಣಬೇಕೆಂದರೆ 30 ಲಕ್ಷ ರುಪಾಯಿ ಹಣವನ್ನು ತೆಲಂಗಾಣದ ನಿರ್ದಿಷ್ಟ ಊರೊಂದಕ್ಕೆ ತೆಗೆದುಕೊಂಡು ಬರುವಂತೆ ಕರೆ ಮಾಡಿದ ವ್ಯಕ್ತಿ ಹೇಳಿದ್ದಾನೆ. ಅಲ್ಲದೆ, ಪೊಲೀಸರಿಗೆ ವಿಷಯ ಮುಟ್ಟಿಸಿದರೆ ಮಗನನ್ನು ಕೊಂದು ಬಿಡುವುದಾಗಿ ಸಿನಿಮಾ ಶೈಲಿಯಲ್ಲಿ ಬೆದರಿಕೆ ಹಾಕಿದ್ದಾನೆ.
24 ವರ್ಷದ ಯುವಕ ತನ್ನ ಇಬ್ಬರು ಸ್ನೇಹಿತರೊಟ್ಟಿಗೆ ಸೇರಿಕೊಂಡು ಈ ಅಪಹರಣ ನಾಟಕವಾಡಿದ್ದಾನೆ. ತಾನು ಕಿರು ಸಿನಿಮಾ ನಿರ್ಮಾಣ ಮಾಡಲು ಪೋಷಕರು ಹಣ ನೀಡದೇ ಇದ್ದ ಕಾರಣದಿಂದ ತಾನು ಹೀಗೆ ಮಾಡಿದ್ದಾಗಿ ಯುವಕ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ. ಕೊನೆಗೆ ಯುವಕನಿಗೆ ಎಚ್ಚರಿಕೆ ನೀಡಿ, ಮುಚ್ಚಳಿಕೆ ಬರೆಸಿಕೊಂಡು ಆತನನ್ನು ಪೋಷಕರೊಟ್ಟಿಗೆ ಮನೆಗೆ ಕಳಿಸಿದ್ದಾರೆ ಪೊಲೀಸರು.