Don't Miss!
- News ಬಕ್ರಾ ಮಾಡಲು ಇಲ್ಲಿಗೆ ಬಂದಿದ್ದೀರಾ?, ಬೆಳಗಾವಿಗೆ ನಿಮ್ಮ ಕೊಡುಗೆ ಏನು?: ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆ
- Automobiles KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಜನಿಕಾಂತ್ ರಾಜಕೀಯ ಪ್ರವೇಶ, ಕೊನೆಯ ಚಿತ್ರ ನಿರ್ಧರಿಸಿದ ತಲೈವಾ?
ತಮಿಳುನಾಡು ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸೂಪರ್ ಸ್ಟಾರ್ ರಜನಿಕಾಂತ್ ಮಹತ್ವದ ನಿರ್ಧಾರ ಘೋಷಿಸಿದ್ದಾರೆ. ವರ್ಷದ ಹಿಂದೆಯೇ ರಾಜಕೀಯ ಪ್ರವೇಶವನ್ನು ಖಚಿತಪಡಿಸಿದ್ದ ತಲೈವಾ ಇದುವರೆಗೂ ಅಧೀಕೃತವಾಗಿ ಪಕ್ಷ ಘೋಷಣೆ ಮಾಡಿರಲಿಲ್ಲ.
ಇದೀಗ, ರಾಜಕೀಯದ ಬಗ್ಗೆ ರಜನಿಕಾಂತ್ ಸ್ಪಷ್ಟ ನಿಲುವಿಗೆ ಬಂದಿದ್ದು, ಡಿಸೆಂಬರ್ 31 ರಂದು ರಾಜಕೀಯ ಪಕ್ಷ ಪ್ರಕಟಣೆಯ ದಿನಾಂಕ ಘೋಷಿಸಲಿದ್ದಾರೆ. ಈ ಬಗ್ಗೆ ಸ್ವತಃ ರಜನಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ರಾಜಕೀಯದ ಬಗ್ಗೆ ರಜನಿ ಮಾತನಾಡುತ್ತಿದ್ದಂತೆ ಚಿತ್ರರಂಗದಲ್ಲಿ ಸೂಪರ್ ಸ್ಟಾರ್ ಕೊನೆಯ ಸಿನಿಮಾದ ಚರ್ಚೆ ಜೋರಾಗಿದೆ. ಮುಂದೆ ಓದಿ....
ರಜನೀಕಾಂತ್ ರಾಜಕೀಯ ಪ್ರವೇಶ ಪಕ್ಕಾ: ಡಿಸೆಂಬರ್ 31ಕ್ಕೆ ಪಕ್ಷ ಘೋಷಣೆ
ಅಣ್ಣಾತೆ ಸಿನಿಮಾ ಕೊನೆಯದ್ದಾ?
ಶಿವ ನಿರ್ದೇಶನದಲ್ಲಿ ತಯಾರಾಗುತ್ತಿರುವ ಅಣ್ಣಾತೆ ಸಿನಿಮಾದದಲ್ಲಿ ರಜನಿಕಾಂತ್ ನಟಿಸುತ್ತಿದ್ದಾರೆ. ಈಗಾಗಲೇ ಮೊದಲ ಹಂತದ ಶೂಟಿಂಗ್ ಸಹ ಮುಗಿದಿದೆ. ರಾಜಕೀಯ ಪಕ್ಷ ಘೋಷಣೆ ಮಾಡುವ ವಿಚಾರ ಹೊರಬೀಳುತ್ತಿದ್ದಂತೆ ಅಣ್ಣಾತೆ ಸಿನಿಮಾ ರಜನಿಯ ಕೊನೆಯ ಚಿತ್ರವಾಗಲಿದೆ ಎಂದು ಹೇಳಲಾಗುತ್ತಿದೆ.
ಶೇಕಡಾ 40 ರಷ್ಟು ಚಿತ್ರೀಕರಣ ಬಾಕಿ ಇದೆ
ಸ್ವತಃ ರಜನಿಕಾಂತ್ ಅವರೇ ಹೇಳಿರುವ ಪ್ರಕಾರ ಶೇಕಡಾ 60 ರಷ್ಟು ಚಿತ್ರೀಕರಣ ಮುಗಿದಿದ್ದು, ಶೇಕಡಾ 40 ರಷ್ಟು ಕೆಲಸ ಬಾಕಿ ಇದೆ. 'ಜನವರಿಯಲ್ಲಿ ಅಣ್ಣಾತೆ ಸಿನಿಮಾದಲ್ಲಿ ನಾನು ಬ್ಯುಸಿ ಇರುತ್ತೇನೆ, ಅದು ಮುಗಿದ ತಕ್ಷಣ ರಾಜಕೀಯವಾಗಿ ಸಕ್ರಿಯನಾಗುತ್ತೇನೆ' ಎಂದು ಸ್ವತಃ ರಜನಿ ಹೇಳಿದ್ದಾರೆ.
ರಾಜಕೀಯ ಪ್ರವೇಶದ ಬಗ್ಗೆ ರಜನೀಕಾಂತ್ ಮಹತ್ವದ ಹೇಳಿಕೆ
ಹೊಸ ಸಿನಿಮಾ ಒಪ್ಪಿಕೊಂಡಿಲ್ಲ
ಸದ್ಯದವರೆಗೂ ರಜನಿಕಾಂತ್ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಬಹುಶಃ ಅಣ್ಣಾತೆ ಸಿನಿಮಾ ಮುಗಿಯುತ್ತಿದ್ದಂತೆ ಪೂರ್ಣ ಪ್ರಮಾಣದ ರಾಜಕೀಯದಲ್ಲಿ ತೊಡಗಿಕೊಳ್ಳಲಿರುವ ರಜನಿ, ಪಕ್ಷ ಸಂಘಟನೆ, ಅಭ್ಯರ್ಥಿಗಳ ಆಯ್ಕೆ, ಚುನಾವಣೆ ಪ್ರಚಾರ ಹೀಗೆ ರಾಜಕೀಯವಾಗಿ ಮುಳುಗಿ ಹೋಗಬಹುದು.
Recommended Video
ಫಲಿತಾಂಶ ನಂತರ ಸೆಕೆಂಡ್ ಇನ್ನಿಂಗ್ಸ್
2021ರಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ರಜನಿಕಾಂತ್ ಪಕ್ಷ ಅಧಿಕಾರಕ್ಕೆ ಬರುತ್ತಾ ಇಲ್ಲವೋ ಎಂಬುದರ ಮೇಲೆ ತಲೈವಾ ಸೆಕೆಂಡ್ ಇನ್ನಿಂಗ್ಸ್ ನಿರ್ಧಾರವಾಗಲಿದೆ. ಚುನಾವಣೆ ಬಳಿಕ ಮತ್ತೆ ಸಿನಿಮಾ ಮಾಡ್ತಾರೋ ಇಲ್ಲವೋ ಎನ್ನುವುದು ಸಹ ಕಾದು ನೋಡಬೇಕಿದೆ.