Don't Miss!
- News ಕನಕಪುರಕ್ಕೆ ಕಾಲಿಡಲು ಭಯ; ಕೋರ್ಟ್ಗೆ ಯತ್ನಾಳ್ ಹೇಳಿಕೆ!
- Finance ತನ್ನ 4 ವರ್ಷದ ಮೊಮ್ಮಗನಿಗೆ 240 ಕೋಟಿ ಮೌಲ್ಯದ ಇನ್ಫೋಸಿಸ್ ಷೇರುಗಳನ್ನು ಉಡುಗೊರೆಯಾಗಿ ನೀಡಿದ ನಾರಾಯಣ ಮೂರ್ತಿ
- Technology ಇಂದು ಮಾರುಕಟ್ಟೆಗೆ ಬರಲಿದೆ ಗೆಸ್ಚರ್ ಮೂಲಕ ಕೆಲಸ ಮಾಡುವ ಸ್ಮಾರ್ಟ್ಫೋನ್!
- Automobiles Tata Nexon: ಮುಂಬರಲಿರುವ ಟಾಟಾ ನೆಕ್ಸಾನ್ ಸಿಎನ್ಜಿ ಕಾರಿನ ವಿಶೇಷತೆಗಳಿವು.. ಹೆಚ್ಚು ಮೈಲೇಜ್!
- Sports IPL 2024: ಐಪಿಎಲ್ ಆರಂಭಕ್ಕೂ ಮುನ್ನವೇ 'ಸೂಪರ್' ಭವಿಷ್ಯ; ಆರ್ಸಿಬಿ ಈ ಬಾರಿ ಕಪ್ ಗೆಲ್ಲುತ್ತದಾ? ಇಲ್ಲಿದೆ ಉತ್ತರ
- Lifestyle ಬಾಯಲ್ಲಿ ನೀರು ತರಿಸುವ ಮಸಾಲೆ ಮೊಟ್ಟೆ ಬುರ್ಜಿ ಮಾಡೋದು ಹೇಗೆ.? ತುಂಬಾ ಸಿಂಪಲ್ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೂಪರ್ ಸ್ಟಾರ್ ಸರಳತೆಗೆ ಅಭಿಮಾನಿಗಳ ಸಲಾಮ್
ಅವರಿಗೆ ಇರುವ ಬಿರುದು ಸೂಪರ್ ಸ್ಟಾರ್, ಆದರೆ ಆ ವ್ಯಕ್ತಿ ನಿಜ ಜೀವನದಲ್ಲಿ ಸಿಂಪಲ್ ಸ್ಟಾರ್ ಆಗಿರುತ್ತಾರೆ. ಅವರೇ ರಜನಿಕಾಂತ್.
ನಟ ರಜನಿಕಾಂತ್ ಅನೇಕ ಬಾರಿ ತಮ್ಮ ಸರಳತೆಯ ಮೂಲಕ ಅಭಿಮಾನಿಗಳಿಗೆ ಇನ್ನಷ್ಟು ಹತ್ತಿರ ಆಗಿದ್ದಾರೆ. ಇದೀಗ ಮತ್ತೆ ಅವರ ಸರಳತೆ ಕಂಡು ಅಭಿಮಾನಿಗಳ ಮನಸ್ಸು ತುಂಬಿದೆ. ಅವರ ಒಂದು ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ರಜನಿಗೆ ವಿಲನ್ ಆಗುವ ಆಫರ್ ರಿಜೆಕ್ಟ್ ಮಾಡಿದ್ರು ರಕ್ಷಿತ್
21 ವರ್ಷದ ಚಿತ್ರಕಾರ, ವಿಶೇಷ ಚೇತನ ಪ್ರಣವ್ ಎಂ ಬಿ ಇತ್ತೀಚಿಗಷ್ಟೆ ಕೇರಳ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದರು. ಇದೀಗ ಸೂಪರ್ ಸ್ಟಾರ್ ರಜನಿಕಾಂತ್ ರನ್ನು ಮೀಟ್ ಮಾಡಿದ್ದಾರೆ. ರಜನಿಕಾಂತ್ ರನ್ನು ನೋಡಬೇಕು ಎನ್ನುವುದು ಪ್ರಣವ್ ಜೀವನದ ಕನಸಾಗಿತ್ತು. ಆ ಆಸೆಯನ್ನು ಸೂಪರ್ ಸ್ಟಾರ್ ಈಡೇರಿಸಿದ್ದಾರೆ.
ಚೆನ್ನೈನ ತಮ್ಮ ನಿವಾಸದಲ್ಲಿ ರಜನಿಕಾಂತ್ ಪ್ರಣವ್ ರನ್ನು ಭೇಟಿ ಮಾಡಿದ್ದಾರೆ. 20 ನಿಮಿಷಗಳ ಕಾಲ ಅವರ ಜೊತೆಗೆ ಮಾತನಾಡಿದ್ದಾರೆ. ತಮ್ಮ ಬ್ಯುಸಿ ಶೆಡ್ಯೂಲ್ ನಲ್ಲಿಯೂ ಅಭಿಮಾನಿಗೆ ಸಮಯ ನೀಡಿದ್ದಾರೆ. ಅಂತಹ ದೊಡ್ಡ ನಟ ಒಬ್ಬ ಅಭಿಮಾನಿ ಕಾಲು ಮುಟ್ಟಿದ್ದು, ರಜನಿ ಸರಳತೆಗೆ ಅಭಿಮಾನಿಗಳು ಸಲಾಮ್ ಎಂದಿದ್ದಾರೆ.
ರಜನಿಕಾಂತ್ 'ದರ್ಬಾರ್'ಗೆ ಅದೃಷ್ಟ ತಂದ ಎಸ್.ಪಿ ಬಾಲಸುಬ್ರಹ್ಮಣ್ಯಂ
ಮೆಚ್ಚಿನ ನಟನಿಗೆ ಪ್ರಣವ್ ಉಡುಗೊರೆ ನೀಡಿದ್ದಾರೆ. ರಜನಿಕಾಂತ್ ಚಿತ್ರವನ್ನು ಬಿಡಿಸಿ ಅವರಿಗೆ ಗಿಫ್ಟ್ ಆಗಿ ನೀಡಿದ್ದಾರೆ. ಈ ಸುಂದರ ಕ್ಷಣವನ್ನು ಫೋಟೋ ಮೂಲಕ ಸೆರೆ ಹಿಡಿದಿದ್ದಾರೆ.
ಅಂದಹಾಗೆ, ರಜನಿಕಾಂತ್ ಸದ್ಯ ದರ್ಬಾರ್ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಎ ಆರ್ ಮುರುಗದಾಸ್ ಈ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ಸಂಕ್ರಾಂತಿ ಹಬ್ಬಕ್ಕೆ ಈ ಸಿನಿಮಾ ಬಿಡುಗಡೆ ಆಗಲಿದೆ.