Don't Miss!
- News ತುಷ್ಟೀಕರಣ ರಾಜಕೀಯಕ್ಕೆ ಮುಸ್ಲೀಮರಿಗೆ ಮೀಸಲಾತಿಗೆ ಕಾಂಗ್ರೆಸ್ ಬೆಂಬಲ: ಬಸವರಾಜ ಬೊಮ್ಮಾಯಿ ಕಿಡಿ
- Automobiles Hero: ಮಧ್ಯಮ ವರ್ಗದವರ ನೆಚ್ಚಿನ ಬೈಕ್.. ರೂ.75 ಸಾವಿರ ಬೆಲೆ.. ಮೈಲೇಜ್ನಲ್ಲಿ ಸರಿ ಸಾಟಿಯಿಲ್ಲ!
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಜನಿಕಾಂತ್ ಮನೆಗೆ ಬಾಂಬ್ ಬೆದರಿಕೆ ಹಾಕಿದ ವ್ಯಕ್ತಿಯನ್ನು ಪತ್ತೆ ಹಚ್ಚಿದ ಪೊಲೀಸರು
ಸೂಪರ್ ಸ್ಟಾರ್ ರಜನಿಕಾಂತ್ ನಿವಾಸಕ್ಕೆ ಬಾಂಬ್ ಹಾಕುವುದಾಗಿ ಅಪರಿಚಿತ ವ್ಯಕ್ತಿ ಕರೆ ಮಾಡಿ ಬೆದರಿಕೆ ಹಾಕಿದ್ದರು. ಬೆದರಿಕೆ ಕರೆ ಬಂದು ಒಂದು ದಿನದೊಳಗೆ ಚೆನ್ನೈ ಪೊಲೀಸರು ಬೆದರಿಕೆ ಹಾಕಿದ ವ್ಯಕ್ತಿಯನ್ನು ಪತ್ತೆ ಹಚ್ಚಿದ್ದಾರೆ. ಚೆನ್ನೈನ ಪೋಯಸ್ ಗಾರ್ಡನ್ ರಜನಿಕಾಂತ್ ನಿವಾಸಕ್ಕೆ ಗುರುವಾರ ಅಪರಿಚ ವ್ಯಕ್ತಿಯೊಬ್ಬ ದೂರವಾಣಿ ಕರೆ ಮಾಡಿ ಬಾಂಬ್ ಬೆದರಿಕೆ ಹಾಕಿರುವ ಸುದ್ದಿ ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳು ಆತಂಕ ಗೊಂಡಿದ್ದರು.
Recommended Video
ಅಂದ್ಹಾಗೆ ಬೆದರಿಕೆ ಹಾಕಿದ ವ್ಯಕ್ತಿಯ ಬಗ್ಗೆ ಕೇಳಿದ್ರೆ ನಿಜಕ್ಕು ಅಚ್ಚರಿ ಪಡುತ್ತೀರಿ. ಹೌದು, 8 ತರಗತಿ ಓದುತ್ತಿರುವ ವಿದ್ಯಾರ್ಥಿ ರಜನಿಕಾಂತ್ ಮನೆಗೆ ಬಾಂಬ್ ಹಾಕುವುದಾಗಿ ಬೆದರಿಕೆ ಒಡ್ಡಿರುವ ಬಗ್ಗೆ ಪೊಲೀಸರು ದೃಢಪಡಿಸಿದ್ದಾರೆ.
ಸೂಪರ್ ಸ್ಟಾರ್ ರಜನಿಕಾಂತ್ ಗೆ ಬಾಂಬ್ ಬೆದರಿಕೆ ಕರೆ: ಚೆನ್ನೈ ಪೊಲೀಸರಿಂದ ಶೋಧ
ಬಾಂಬ್ ಬೆದರಿಕೆ ಕರೆ ಬಂದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ತಿಳಿಯುತ್ತಿದ್ದಂತೆ, ಸ್ನಿಫರ್ ನಾಯಿಗಳು ಮತ್ತು ಬಾಂಬ್ ಡಿಟೆಕ್ಟರ್ ಗಳ ಸಹಾಯದಿಂದ ಸೂಪರ್ ನಿವಾಸದ ಸುತ್ತ ಶೋಧ ಕಾರ್ಯ ನಡೆಸಿದ್ದರು. ಕೊರೊನಾ ವೈರಸ್ ಹಾವಳಿಯ ಪರಿಣಾಮ ರಜನಿಕಾಂತ್ ಮನೆಯೊಳಗೆ ಪೊಲೀಸರ ಪ್ರವೇಶಕ್ಕೆ ಅನುಮತಿ ನೀಡಿಲ್ಲ ಎನ್ನುವ ಬಗ್ಗೆ ತಿಳಿದುಬಂದಿದೆ.
ನಂತರ ಪೊಲೀಸರು ದೂರವಾಣಿ ಕರೆ ಮಾಡಿದ ವ್ಯಕ್ತಿಯ ಹಿಂದೆ ಬಿದ್ದು ತನಿಖೆ ನಡೆದದ್ದಾರೆ. 8 ನೇ ತರಗತಿ ಓದುತ್ತಿರುವ ವಿದ್ಯಾರ್ಥಿ ಕರೆ ಮಾಡಿ ಬೆದರಿಕೆ ಹಾಕಿರುವುದು ಎಂದು ಗೊತ್ತಾಗಿದೆ. ವಿದ್ಯಾರ್ಥಿಯನ್ನು ವಿಚಾರಣೆ ಮಾಡಿದಾಗ ಕಲಿಕೆಯಲ್ಲಿ ಅಸಮರ್ಥತೆ ಇರುವ ಬಾಲಕ ಎನ್ನುವುದು ಗೊತ್ತಾಗಿದೆ. ಆತನ ವೈದ್ಯಕೀಯ ದಾಖಲೆಯಗಳನ್ನು ಪರಿಶೀಲಿಸಿದ ನಂತರ ಆತನನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಸೂಪರ್ ಸ್ಟಾರ್ ರಜಿನಿಕಾಂತ್ ಕೊನೆಯದಾಗಿ ದರ್ಬಾರ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಮುರುಗದಾಸ್ ನಿರ್ದೇಶನ ಮಾಡಿದ್ದರು. ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಸದ್ಯ ಸೂಪರ್ ಸ್ಟಾರ್ ಅಣ್ಣಾತೆ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ನಟಿ ಕೀರ್ತಿ ಸುರೇಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದಲ್ಲದೆ ರಜನಿಕಾಂತ್ ಕಮಲ್ ಹಾಸನ್ ನಿರ್ಮಾಣದ ಸಿನಿಮಾದಲ್ಲಿಯೂ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.