Don't Miss!
- News ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದ ಡಾ. ಕೆ. ಸುಧಾಕರ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೌತ್ ಇಂಡಸ್ಟ್ರಿಗೆ ಫಿದಾ ಆದ ಬೋನಿ ಕಪೂರ್: ಮತ್ತೊಮ್ಮೆ ಸ್ಟಾರ್ ನಟನ ಚಿತ್ರ ನಿರ್ಮಾಣ?
ಬಾಲಿವುಡ್ ಸ್ಟಾರ್ ನಿರ್ಮಾಪಕ ಬೋನಿ ಕಪೂರ್ ದಕ್ಷಿಣ ಚಿತ್ರರಂಗದ ಮೇಲೆ ಹೆಚ್ಚು ಒಲವು ತೋರುತ್ತಿದ್ದಾರೆ. ಸತತವಾಗಿ ಸೌತ್ ಸಿನಿಮಾಗಳನ್ನು ನಿರ್ಮಿಸುವುದರ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದಾರೆ.
ಒಂದು ಸಮಯದಲ್ಲಿ ಬಾಲಿವುಡ್ ಚಿತ್ರಗಳನ್ನು ಮಾತ್ರ ನಿರ್ಮಾಣ ಮಾಡುತ್ತಿದ್ದ ಬೋನಿ ಕಪೂರ್, ಈಗ ಬ್ಯಾಕ್ ಟು ಬ್ಯಾಕ್ ತಮಿಳು-ತೆಲುಗು ಚಿತ್ರಗಳಿಗೆ ಬಂಡವಾಳ ಹಾಕುತ್ತಿದ್ದಾರೆ.
2017ರಲ್ಲಿ ಅಜಿತ್ ನಟನೆಯ 'ನೇರ್ಕೊಂಡ ಪಾರ್ವೈ' ಚಿತ್ರಕ್ಕೆ ಬಂಡವಾಳ ಹಾಕುವ ಮೂಲಕ ಬೋನಿ ಕಪೂರ್ ಮೊದಲ ಬಾರಿಗೆ ಸೌತ್ ಸಿನಿಮಾ ನಿರ್ಮಿಸಿದರು. ಪ್ರಸ್ತುತ ಅಜಿತ್ ಅಭಿನಯದ 'ವಾಲಿಮೈ' ಹಾಗೂ ಪವನ್ ಕಲ್ಯಾಣ್ ಅಭಿನಯದ 'ವಕೀಲ್ ಸಾಬ್' ಚಿತ್ರಗಳನ್ನು ನಿರ್ಮಿಸಿದ್ದಾರೆ.
ಈ ಎರಡು ಚಿತ್ರಗಳು ಇನ್ನು ಬಿಡುಗಡೆಯಾಗಿಲ್ಲ. ಅಷ್ಟರಲ್ಲೇ ಮತ್ತೊಮ್ಮೆ ಅಜಿತ್ ಜೊತೆ ಇನ್ನೊಂದು ಸಿನಿಮಾ ಮಾಡುವುದಾಗಿ ಪಿಂಕ್ ವಿಲ್ಲಾ ವೆಬ್ಸೈಟ್ಗೆ ನೀಡಿರುವ ಸಂರ್ದಶನದಲ್ಲಿ ಹೇಳಿಕೊಂಡಿದ್ದಾರೆ.
ಎಸ್ಎಸ್ ರಾಜಮೌಳಿ ನಿರ್ಧಾರಕ್ಕೆ ಬೇಸರಗೊಂಡ ನಿರ್ಮಾಪಕ ಬೋನಿ ಕಪೂರ್
''ನಮ್ಮಿಬ್ಬರ (ಅಜಿತ್) ಸ್ನೇಹ ಮತ್ತು ಸಂಬಂಧ ಬಹಳ ಚೆನ್ನಾಗಿದೆ. ಬಹುಶಃ ಇದು ಹೀಗೆ ಮುಂದುವರಿಯಲಿದೆ. ನನ್ನಂತೆಯೇ ಅವರಿಗೂ ಅನಿಸುತ್ತಿದೆ ಎಂದು ಭಾವಿಸಿದ್ದೇನೆ'' ಎಂದು ಹೇಳುವ ಮೂಲಕ ಮುಂದಿನ ಪ್ರಾಜೆಕ್ಟ್ ಸಾಧ್ಯತೆ ಬಗ್ಗೆ ಸುಳಿವು ನೀಡಿದ್ದಾರೆ.
ಈ ಮಧ್ಯೆ ಅಜಯ್ ದೇವಗನ್ ಅಭಿನಯದ ಮೈದಾನ್ ಸಿನಿಮಾಗೂ ಬೋನಿ ಕಪೂರ್ ಬಂಡವಾಳ ಹೂಡಿದ್ದು, ಅಕ್ಟೋಬರ್ 15 ರಂದು ಈ ಸಿನಿಮಾ ತೆರೆಗೆ ಬರಲಿದೆ.
Recommended Video
ಇನ್ನುಳಿದಂತೆ ಮೇ 1 ರಂದು ವಾಲಿಮೈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಲಿದೆ. ಸಿನಿಮಾ ರಿಲೀಸ್ ಬಗ್ಗೆ ಸದ್ಯಕ್ಕೆ ಮಾಹಿತಿ ಇಲ್ಲ.