CAAಯಿಂದ ಮುಸ್ಲಿಮರಿಗೆ ತೊಂದರೆ ಆಗಲ್ಲ ಎಂದ ಸೂಪರ್ ಸ್ಟಾರ್ ರಜನಿಕಾಂತ್
ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ತೀವ್ರ ಪ್ರತಿಭಟನೆ ನಡೆಯುತ್ತಿದೆ. ಈ ನಡುವೆ ಸೂಪರ್ ಸ್ಟಾರ್ ರಜನಿಕಾಂತ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಪೌರತ್ವ ಕಾಯ್ದೆ ಮುಸ್ಲಿಂ ಸಮುದಾಯಕ್ಕೆ ಬೆದರಿಕೆಯಾಗಿ ಪರಿಣಮಿಸದು ಎಂದು ಹೇಳಿದ್ದಾರೆ.
"ಒಂದು ವೇಳೆ ಮುಸ್ಲಿಂ ಸಮುದಾಯಕ್ಕೆ ತೊಂದರೆ ಆಗಿದ್ದೆ ಆದರೆ ಅವರ ಪರ ಧ್ವನಿ ಎತ್ತುವ ಮೊದಲ ವ್ಯಕ್ತಿ ನಾನಾಗಿರುತ್ತೇನೆ" ಎಂದು ರಜನಿಕಾಂತ್ ಹೇಳಿದ್ದಾರೆ. "ವಿಭಜನೆ ನಂತರ ಮುಸ್ಲಿಮರು ಭಾರತದಲ್ಲಿ ಉಳಿಯಲು ನಿರ್ಧರಿಸಿದರು, ಅವರನ್ನು ಹೇಗೆ ದೇಶದಿಂದ ಕಳುಹಿಸಲಾಗುತ್ತೆ" ಎಂದಿದ್ದಾರೆ.
ಇನ್ನು ಈ ಬಗ್ಗೆ ಮಾತನಾಡಿದ ಸೂಪರ್ ಸ್ಟಾರ್ ರಾಷ್ಟ್ರೀಯ ಜನಸಂಖ್ಯೆ ನೋಂದಣಿ(NPR) ಅಗತ್ಯವಿದೆ ಎಂದು ಹೇಳಿದ್ದಾರೆ. ಸಿಎಎ ಸಂಬಂಧಿಸಿದಂತೆ ಭಾರತೀಯ ಜನರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಸರ್ಕಾರ ಭರವಸೆ ನೀಡಿದೆ. ಕೆಲವು ರಾಜಕೀಯ ಪಕ್ಷಗಳು ತಮ್ಮ ಸ್ವಾರ್ಥ ಹಿತಾಸಕ್ತಿಗಾಗಿ ಸಿಎಎ ವಿರುದ್ಧ ಜನರನ್ನು ಪ್ರಚೋದಿಸುತ್ತಿವೆ" ಎಂದರು.

ಈ ಮೊದಲು ಅಂದರೆ ಡಿಸೆಂಬರ್ ನಲ್ಲಿ ಈ ಬಗ್ಗೆ ಮಾತನಾಡಿದ್ದ ರಜನಿಕಾಂತ್ "ಹಿಂಸಾಚಾರ ಹಾಗೂ ದಂಗೆಯಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಎಲ್ಲರೂ ಒಗ್ಗಟ್ಟಾಗಿರಬೇಕೆಂದು ದೇಶದ ಜನತೆಯಲ್ಲಿ ವಿನಂತಿಸುವೆ. ರಾಷ್ಟ್ರೀಯ ಭದ್ರತೆ ಹಾಗೂ ಕಲ್ಯಾಣಕ್ಕೆ ನಮ್ಮ ಮನಸ್ಸು ಜಾಗೃತವಾಗಿರಬೇಕು" ಎಂದು ಟ್ವೀಟ್ ಮಾಡಿದ್ದರು. ಆ ನಂತರ ಈಗ ಮತ್ತೆ ಪ್ರತಿಕ್ರಿಯೆ ನೀಡಿದ್ದಾರೆ.


Click it and Unblock the Notifications











