Don't Miss!
- News Toilet Photo Viral: ಕಡಿಮೆ ಖರ್ಚಿನಲ್ಲಿ 'ಲೀಕೆಜ್ ಟ್ಯಾಂಕರ್'ನಿಂದ ಟಾಯ್ಲೆಟ್ ನಿರ್ಮಾಣ: ನೀವೂ ಟ್ರೈ ಮಾಡಿ
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
CAAಯಿಂದ ಮುಸ್ಲಿಮರಿಗೆ ತೊಂದರೆ ಆಗಲ್ಲ ಎಂದ ಸೂಪರ್ ಸ್ಟಾರ್ ರಜನಿಕಾಂತ್
ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ತೀವ್ರ ಪ್ರತಿಭಟನೆ ನಡೆಯುತ್ತಿದೆ. ಈ ನಡುವೆ ಸೂಪರ್ ಸ್ಟಾರ್ ರಜನಿಕಾಂತ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಪೌರತ್ವ ಕಾಯ್ದೆ ಮುಸ್ಲಿಂ ಸಮುದಾಯಕ್ಕೆ ಬೆದರಿಕೆಯಾಗಿ ಪರಿಣಮಿಸದು ಎಂದು ಹೇಳಿದ್ದಾರೆ.
"ಒಂದು ವೇಳೆ ಮುಸ್ಲಿಂ ಸಮುದಾಯಕ್ಕೆ ತೊಂದರೆ ಆಗಿದ್ದೆ ಆದರೆ ಅವರ ಪರ ಧ್ವನಿ ಎತ್ತುವ ಮೊದಲ ವ್ಯಕ್ತಿ ನಾನಾಗಿರುತ್ತೇನೆ" ಎಂದು ರಜನಿಕಾಂತ್ ಹೇಳಿದ್ದಾರೆ. "ವಿಭಜನೆ ನಂತರ ಮುಸ್ಲಿಮರು ಭಾರತದಲ್ಲಿ ಉಳಿಯಲು ನಿರ್ಧರಿಸಿದರು, ಅವರನ್ನು ಹೇಗೆ ದೇಶದಿಂದ ಕಳುಹಿಸಲಾಗುತ್ತೆ" ಎಂದಿದ್ದಾರೆ.
ದರ್ಬಾರ್ ಸೋಲು, ರಜನಿ ಮನೆ ಬಾಗಿಲು ತಟ್ಟಲು ಮುಂದಾದ ವಿತರಕರು
ಇನ್ನು ಈ ಬಗ್ಗೆ ಮಾತನಾಡಿದ ಸೂಪರ್ ಸ್ಟಾರ್ ರಾಷ್ಟ್ರೀಯ ಜನಸಂಖ್ಯೆ ನೋಂದಣಿ(NPR) ಅಗತ್ಯವಿದೆ ಎಂದು ಹೇಳಿದ್ದಾರೆ. ಸಿಎಎ ಸಂಬಂಧಿಸಿದಂತೆ ಭಾರತೀಯ ಜನರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಸರ್ಕಾರ ಭರವಸೆ ನೀಡಿದೆ. ಕೆಲವು ರಾಜಕೀಯ ಪಕ್ಷಗಳು ತಮ್ಮ ಸ್ವಾರ್ಥ ಹಿತಾಸಕ್ತಿಗಾಗಿ ಸಿಎಎ ವಿರುದ್ಧ ಜನರನ್ನು ಪ್ರಚೋದಿಸುತ್ತಿವೆ" ಎಂದರು.
ಈ ಮೊದಲು ಅಂದರೆ ಡಿಸೆಂಬರ್ ನಲ್ಲಿ ಈ ಬಗ್ಗೆ ಮಾತನಾಡಿದ್ದ ರಜನಿಕಾಂತ್ "ಹಿಂಸಾಚಾರ ಹಾಗೂ ದಂಗೆಯಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಎಲ್ಲರೂ ಒಗ್ಗಟ್ಟಾಗಿರಬೇಕೆಂದು ದೇಶದ ಜನತೆಯಲ್ಲಿ ವಿನಂತಿಸುವೆ. ರಾಷ್ಟ್ರೀಯ ಭದ್ರತೆ ಹಾಗೂ ಕಲ್ಯಾಣಕ್ಕೆ ನಮ್ಮ ಮನಸ್ಸು ಜಾಗೃತವಾಗಿರಬೇಕು" ಎಂದು ಟ್ವೀಟ್ ಮಾಡಿದ್ದರು. ಆ ನಂತರ ಈಗ ಮತ್ತೆ ಪ್ರತಿಕ್ರಿಯೆ ನೀಡಿದ್ದಾರೆ.