Don't Miss!
- Automobiles Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ.. 320 ಕಿ.ಮೀ ವೇಗದಲ್ಲಿ ಓಡುತ್ತೆ ರೈಲು!
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊರೊನಾ ವಿರುದ್ಧ ಹೋರಾಟಕ್ಕೆ ನಟ ಚಿಯಾನ್ ವಿಕ್ರಮ್ ನೆರವು
ದೇಶವನ್ನೆ ಬೆಚ್ಚಿಬೀಳಿಸಿರುವ ಮಾರಕ ಕೊರೊನಾ ವೈರಸ್ ವಿರುದ್ಧ ಹೋರಾಡಲು ಸಾಕಷ್ಟು ಮಂದಿ ಸಹಾಯ ಮಾಡುತ್ತಿದ್ದಾರೆ. ಅನೇಕ ಸಿನಿ ಸೆಲೆಬ್ರಿಟಗಳು ಸಹಾಯ ಹಸ್ತ ಚಾಚಿದ್ದು, ತಮ್ಮ ಕೈಲಾದಷ್ಟು ನೆರವು ನೀಡುತ್ತಿದ್ದಾರೆ. ಇದೀಗ ತಮಿಳಿನ ಖ್ಯಾತ ನಟ ಚಿಯಾನ್ ವಿಕ್ರಮ್ ಕೂಡ ಸರ್ಕಾರದ ಜೊತೆ ಕೈ ಜೋಡಿಸಿದ್ದಾರೆ.
ನಟ ವಿಕ್ರಮ್ ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ 30 ಲಕ್ಷ ರೂ. ದೇಣಿಗೆ ನೀಡುವ ಮೂಲಕ ಕೊರೊನಾ ವಿರುದ್ಧ ಹೋರಾಟಕ್ಕೆ ನೆರವಾಗಿದ್ದಾರೆ. ತಮಿಳುನಾಡಿನ ನೂತನ ಸಿಎಂ ಎಂ.ಕೆ ಸ್ಟಾಲಿನ್ ಅವರಿಗೆ ಚೆಕ್ ವಿತರಿಸಿದ್ದಾರೆ. ಆದರೆ ಈ ಬಗ್ಗೆ ಚಿಯಾನ್ ವಿಕ್ರಮ್ ಎಲ್ಲೂ ಅಧಿಕೃತವಾಗಿ ಬಹಿರಂಗ ಪಡಿಸಿಲ್ಲ.
ಕೊರೊನಾ ವಿರುದ್ಧದ ಹೋರಾಟಕ್ಕೆ 50 ಲಕ್ಷ ನೀಡಿದ ರಜನಿಕಾಂತ್
ಇತ್ತೀಚಿಗಷ್ಟೆ ನಟ ಸೂರ್ಯ ಸಹೋದರರು ಸಿಎಂ ಭೇಟಿಯಾಗಿ 1 ಕೋಟಿ ರೂ ದೇಣಿಗೆ ನೀಡಿದ್ದರು. ನಟ ಅಜಿತ್ ಕೂಡ 25 ಲಕ್ಷ ರೂ. ನೆರವು ನೀಡಿದರು. ಇತ್ತೀಚಿಗಷ್ಟೆ ನಟ ರಜನಿಕಾಂತ್ ಹಾಗೂ ಪುತ್ರಿ ಸೌಂದರ್ಯ ಕೂಡ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡುವ ಮೂಲಕ ಕೊರೊನಾ ವಿರುದ್ಧ ಹೋರಾಟಕ್ಕೆ ನೆರವಾಗಿದ್ದಾರೆ.
Recommended Video
ನಟ ಚಿಯಾನ್ ವಿಕ್ರಮ್ ಸದ್ಯ ಕೋಬ್ರ ಸಿನಿಮಾದ ಬಿಡುಗಡೆಗೆ ಕಾಯುತ್ತಿದ್ದಾರೆ. ಚಿತ್ರದಲ್ಲಿ ನಾಯಕಿಯಾಗಿ ಕೆಜಿಎಫ್ ನಟಿ, ಕನ್ನಡತಿ ಶ್ರೀನಿಧಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಇನ್ನು ಈ ಸಿನಿಮಾ ಜೊತೆಗೆ ವಿಕ್ರಮ್ ಮಣಿರತ್ನಂ ನಿರ್ದೇಶನದ ಪೊನ್ನಿಯಮ್ ಸೆಲ್ವನ್ ಚಿತ್ರದಲ್ಲೂ ನಟಿಸುತ್ತಿದ್ದಾರೆ. ಇದಲ್ಲದೆ ಇನ್ನು ಹೆಸರಿಡದ ಮತ್ತೊಂದು ಚಿತ್ರದಲ್ಲಿ ವಿಕ್ರಮ್ ಕಾಣಿಸಿಕೊಳ್ಳುತ್ತಿದ್ದಾರೆ.