Don't Miss!
- News Neha Hiremath: ಸಿದ್ದರಾಮಯ್ಯ ಹೇಳಿಕೆಗೆ ಕಾಂಗ್ರೆಸ್ ಕಾರ್ಪೊರೇಟರ್ ನೇಹಾ ತಂದೆ ಆಕ್ರೋಶ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಚಿಯಾನ್ ವಿಕ್ರಂ ಮನೆಗೆ ಬಾಂಬ್ ಬೆದರಿಕೆ ಕರೆ
ತಮಿಳು ನಟ ಚಿಯಾನ್ ವಿಕ್ರಂ ಮನೆಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಮನೆ ತಪಾಸಣೆ ನಡೆಸಿದ ಪೊಲೀಸರು, ಇದೊಂದು ಹುಸಿ ಕರೆ ಆಗಿತ್ತು ಎಂದು ಹೇಳಿದ್ದಾರೆ.
ವಿಕ್ರಂ ರವರಿಗೆ ಸೇರಿದ್ದ ಚೆನ್ನೈನ ಬೆಸೆಂಟ್ ನಗರದ ಮನೆಯಲ್ಲಿ ಬಾಂಬ್ ಇಟ್ಟಿರುವುದಾಗಿ ನವೆಂಬರ್ 30 ರ ಮಧ್ಯಾಹ್ನದ ವೇಳೆಗೆ ಪೊಲೀಸ್ ಕಂಟ್ರೋಲ್ ರೂಂ ಗೆ ಕರೆ ಬಂದಿತ್ತು.
'ಪುಷ್ಪಾ' ಸಿನಿಮಾದಲ್ಲಿ ಅಲ್ಲು ಅರ್ಜುನ್ ಜೊತೆಗೆ ತಮಿಳಿನ ಸ್ಟಾರ್ ನಟ?
ಕರೆ ಬಂದ ಕೂಡಲೇ ಪೊಲೀಸರು, ಬಾಂಬ್ ಸ್ಕ್ವಾಡ್ ಹಾಗೂ ಶ್ವಾನ ದಳದ ಸಮೇತ ವಿಕ್ರಂ ನಿವಾಸಕ್ಕೆ ತೆರಳಿ, ಪೂರ್ಣವಾಗಿ ತಪಾಸಣೆ ನಡೆಸಿದರು. ಯಾವುದೇ ಸ್ಫೋಟಕ ವಸ್ತುಗಳು ವಿಕ್ರಂ ಮನೆಯಲ್ಲಿ ಪೊಲೀಸರಿಗೆ ದೊರಕಲಿಲ್ಲ.
ಕರೆ ಮಾಡಿದ ವ್ಯಕ್ತಿಯನ್ನು ಪತ್ತೆಹಚ್ಚಲು ಪೊಲೀಸರು ತೊಡಗಿದ್ದು, ತಮಿಳುನಾಡಿನ ವೆಲ್ಲಪುರಂ ಜಿಲ್ಲೆಯಿಂದ ಕರೆ ಬಂದಿದೆ ಎನ್ನಲಾಗಿದೆ. ಈ ಹಿಂದೆ ಅಜಿತ್ ಹಾಗೂ ರಜನಿಕಾಂತ್ ಮನೆಗೆ ಬಾಂಬ್ ಬೆದರಿಕೆ ಹಾಕಿದ್ದ ವ್ಯಕ್ತಿಯೇ ಈಗಲೂ ಕರೆ ಮಾಡಿರುವ ಸಂಭವ ಇದೆಯೆಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
Recommended Video
ಕೆಲವು ದಿನಗಳ ಹಿಂದೆಯಷ್ಟೆ ನಟ ಸೂರ್ಯಾಗೆ ಸೇರಿದ ಅಳ್ವಾರ್ ಪೇಟೆಯ ಕಚೇರಿಯಲ್ಲಿ ಬಾಂಬ್ ಇಟ್ಟಿರುವುದಾಗಿ ಹುಸಿ ಕರೆ ಬಂದಿತ್ತು. ಅದಕ್ಕೂ ಮುನ್ನಾ ನಟ ರಜನೀಕಾಂತ್, ವಿಜಯ್, ಅಜಿತ್ ಮನೆಗೂ ಬಾಂಬ್ ಇಟ್ಟಿರುವುದಾಗಿ ಹುಸಿ ಕರೆಗಳು ಬಂದಿದ್ದವು.