Don't Miss!
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- News ಪೂಜೆ ಮಾಡಿದ ಈ ಲಿಂಬೆಹಣ್ಣು ಲಕ್ಷಕ್ಕೆ ಹರಾಜ್! ಶಾಕ್ ಆಡ್ಬೇಡಿ ಇದು ನಿಜ...
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟಿ ವಿಜಯಲಕ್ಷ್ಮಿ ವಿರುದ್ಧ ಲಾಡ್ಜ್ ಮಾಲೀಕನಿಂದ ದೂರು
ನಟಿ ವಿಜಯಲಕ್ಷ್ಮಿ ವಿವಾದಗಳ ಸುಳಿಯಿಂದ ಹೊರಬರುವ ಲಕ್ಷ್ಣಗಳೇ ಗೋಚರಿಸುತ್ತಿಲ್ಲ. ಒಂದರಹಿಂದೊಂದು ವಿವಾದಗಳಲ್ಲಿ ಸಿಲುಕಿಕೊಳ್ಳುತ್ತಲೇ ಇದ್ದಾರೆ ನಟಿ ವಿಜಯಲಕ್ಷ್ಮಿ.
ಇದೀಗ ಹೊಸ ಸುದ್ದಿಯೆಂದರೆ ನಟಿ ವಿಜಯಲಕ್ಷ್ಮಿ ವಿರುದ್ಧ ಲಾಡ್ಜ್ ಮಾಲೀಕರೊಬ್ಬರು ದೂರು ದಾಖಲಿಸಿದ್ದಾರೆ.
ನಟಿ ವಿಜಯಲಕ್ಷ್ಮಿ-ರವಿಪ್ರಕಾಶ್ ಪ್ರಕರಣಕ್ಕೆ ಸಖತ್ ಟ್ವಿಸ್ಟ್
ಚೆನ್ನೈನ ಲಾಡ್ಜ್ ಮಾಲೀಕರೊಬ್ಬರು ನಟಿ ವಿಜಯಲಕ್ಷ್ಮಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿಜಯಲಕ್ಷ್ಮಿ ತಮಗೆ ಮೂರು ಲಕ್ಷ ರುಪಾಯಿ ಹಣ ನೀಡಬೇಕು, ಅದನ್ನು ವಸೂಲಿ ಮಾಡಿಕೊಡುವಂತೆ ಪೊಲೀಸರಲ್ಲಿ ಮನವಿ ಮಾಡಿದ್ದಾರೆ.
ಫೆಬ್ರವರಿಯಿಂದಲೂ ಚೆನ್ನೈನಲ್ಲಿ ವಾಸ
ಬೆಂಗಳೂರಿನಲ್ಲಿದ್ದ ನಟಿ ವಿಜಯಲಕ್ಷ್ಮಿ ಆ ನಂತರ ಫೆಬ್ರವರಿಯಲ್ಲಿ ಚೆನ್ನೈಗೆ ವಾಸ್ತವ್ಯ ಬದಲಾಯಿಸಿದ್ದರು. ಚೆನ್ನೈನ ತಿರುವಾನ್ಮಿಯುರ್ ಎಂಬಲ್ಲಿ ಲಾಡ್ಜ್ ಒಂದರಲ್ಲಿ ಇದೇ ವರ್ಷದ ಫೆಬ್ರವರಿಯಿಂದಲೂ ವಿಜಯಲಕ್ಷ್ಮಿ ವಾಸವಿದ್ದರು.
ಲಾಡ್ಜ್ ಬಾಡಿಗೆ ನೀಡಿಲ್ಲ ವಿಜಯಲಕ್ಷ್ಮಿ
ವಿಜಯಲಕ್ಷ್ಮಿ ಅವರು ಲಾಡ್ಜ್ ನ ಬಾಡಿಗೆ ಮೊತ್ತ ನೀಡಿಲ್ಲವೆಂದು ಈಗ ಲಾಡ್ಜ್ ಮಾಲೀಕ ದೂರು ನೀಡಿದ್ದಾರೆ. ಲಾಡ್ಜ್ ರೂಂ ನ ಬಾಡಿಗೆ ಮೂರು ಲಕ್ಷ ರೂಪಾಯಿಯಾಗಿದ್ದು, ಆ ಹಣವನ್ನು ವಿಜಯಲಕ್ಷ್ಮಿ ನೀಡುತ್ತಿಲ್ಲ ಎಂದು ದೂರಿನಲ್ಲಿ ಲಾಡ್ಜ್ ಮಾಲೀಕ ಹೇಳಿದ್ದಾರೆ.
ವಿಜಯಲಕ್ಷ್ಮಿಯ ಕಿರುಕುಳ ಆರೋಪಕ್ಕೆ ಸ್ಪಷ್ಟನೆ ನೀಡಿದ ನಟ
ಆತ್ಮಹತ್ಯೆ ಯತ್ನಿಸಿದ್ದ ವಿಜಯಲಕ್ಷ್ಮಿ
ಫೆಬ್ರವರಿಯಲ್ಲಿ ಚೆನ್ನೈನ ಲಾಡ್ಜ್ಗೆ ತೆರಳಿದ್ದ ವಿಜಯಲಕ್ಷ್ಮಿ ಅಲ್ಲಿಯೇ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಕಿ ಆತ್ಮಹತ್ಯೆಗೆ ಯತ್ನಿಸಿದ್ದರು. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆಕೆ ಪ್ರಾಣಾಪಾಯದಿಂದ ಪಾರಾದರು.
ರಾಜಕಾರಣಿ ಸಿಮನ್ ವಿರುದ್ಧ ಆರೋಪ
ನಾಮ್ ತಮಿಜಾರ್ ಕಚ್ಚಿ ನಾಯಕ ಸಿಮನ್ ನನಗೆ ಮೋಸ ಮಾಡಿದ್ದಾನೆ. ನನ್ನೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ನನ್ನನ್ನು ಮದುವೆ ಆಗುವುದಾಗಿ ಹೇಳಿ ಮೋಸ ಮಾಡಿದ್ದಾನೆ ಎಂದು ವಿಜಯಲಕ್ಷ್ಮಿ ಆರೋಪ ಮಾಡಿದ್ದರು. ನಟ ರವಿಪ್ರಕಾಶ್ ವಿರುದ್ಧವೂ ಅವರು ಆರೋಪ ಮಾಡಿದ್ದರು.