twitter
    For Quick Alerts
    ALLOW NOTIFICATIONS  
    For Daily Alerts

    ಚೊಚ್ಚಲ ಚಿತ್ರ ಬಿಡುಗಡೆಯಾಗುವ ಮುನ್ನವೇ ನಿರ್ದೇಶಕನ ಸಾವು

    |

    ತಮ್ಮ ನಿರ್ದೇಶನದ ಮೊದಲ ಸಿನಿಮಾ 'ಉಡುಕ್ಕೈ' ತೆರೆಕಾಣುವುದನ್ನು ನೋಡುವ ಮೊದಲೇ ತಮಿಳು ನಿರ್ದೇಶಕ ಬಾಲಮಿತ್ರನ್ ನಿಧನರಾಗಿದ್ದಾರೆ. ಪಾರ್ಶ್ವವಾಯುವಿಗೆ ತುತ್ತಾದ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಕೊನೆಯುಸಿರೆಳೆದರು.

    Recommended Video

    ಅಣ್ಣನ ಫೋಟೋ ಹಾಕಿ ಭಾವನಾತ್ಮಕ ಸಂದೇಶ ಬರೆದ ಧ್ರುವ ಸರ್ಜಾ | Dhruva Sarja emotional on social media

    ತಮ್ಮ ಚೊಚ್ಚಲ ನಿರ್ದೇಶನದ ಚಿತ್ರ 'ಉಡುಕ್ಕೈ'ನ ಚಿತ್ರೀಕರಣ ಪೂರ್ಣಗೊಳಿಸಿದ್ದ ಅವರು, ಅದರ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿದ್ದರು. ಕೊರೊನಾ ವೈರಸ್ ಕಾರಣದಿಂದ ಅವರ ಸಿನಿಮಾ ಚಟುವಟಿಕೆಗಳಿಗೆ ಹಿನ್ನಡೆಯಾಗಿತ್ತು.

    ರಸ್ತೆ ಅಪಘಾತ: ಮೊದಲ ಸಿನಿಮಾ ಬಿಡುಗಡೆಗೆ ಮುನ್ನವೇ ಯುವ ನಿರ್ದೇಶಕ ದುರ್ಮರಣರಸ್ತೆ ಅಪಘಾತ: ಮೊದಲ ಸಿನಿಮಾ ಬಿಡುಗಡೆಗೆ ಮುನ್ನವೇ ಯುವ ನಿರ್ದೇಶಕ ದುರ್ಮರಣ

    ಪಾರ್ಶ್ವವಾಯುವಿಗೆ ತುತ್ತಾಗಿದ್ದ ಅವರನ್ನು ವಡಪಳನಿ ಎಂಬಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಚಿಕಿತ್ಸಾ ವೆಚ್ಚ ಭರಿಸಲು ಸಾಧ್ಯವಾಗದ ಕಾರಣ ಕಟ್ಟಂಕುಲತೂರ್‌ನಲ್ಲಿನ ಎಸ್‌ಆರ್‌ಎಂ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಅವರ ಚಿಕಿತ್ಸೆಗೆ ನಿರ್ದೇಶಕರ ಒಕ್ಕೂಟ ಹಣಕಾಸಿನ ನೆರವು ನೀಡಿತ್ತು.

    Debutant Director Balamithran Passes Away

    ಅವರ ಚಿತ್ರದ ಶೇ 95ರಷ್ಟು ಕಾರ್ಯ ಮುಗಿದಿತ್ತು. ತಮ್ಮ ಮೊದಲ ಸಿನಿಮಾ ಇನ್ನೂ ಪೂರ್ಣಗೊಳ್ಳದ ಕಾರಣ ಅವರು ಒತ್ತಡಕ್ಕೆ ಒಳಗಾಗಿದ್ದರು. ಅದರಿಂದಾಗಿ ಅವರಿಗೆ ಪಾರ್ಶ್ವವಾಯು ತಗುಲಿತ್ತು ಎನ್ನಲಾಗಿದೆ. ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅವರು ಅಗಲಿದ್ದಾರೆ.

    'ಹಸೀ ತೋ ಪಸೀ' ಚಿತ್ರದಲ್ಲಿ ನಟಿಸಿದ್ದ ನಟ ಜಗೇಶ್ ಮುಕಾಟಿ ನಿಧನ'ಹಸೀ ತೋ ಪಸೀ' ಚಿತ್ರದಲ್ಲಿ ನಟಿಸಿದ್ದ ನಟ ಜಗೇಶ್ ಮುಕಾಟಿ ನಿಧನ

    ಉಡುಕ್ಕೈ ಚಿತ್ರದಲ್ಲಿ ವಿಪಿನ್, ಉಮರ್, ಸಂಜನಾ ಸಿಂಗ್, ಅಂಕಿತಾ, ವಲೀನಾ, ಲಕ್ಷ್ಮಿ ಮುಂತಾದವರು ನಟಿಸಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ನಿರ್ದೇಶಕ ವೆಂಕಟ್ ಪಕ್ಕರ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಅವರ ನಿರ್ದೇಶನದ '4ಜಿ' ಚಿತ್ರ ಬಿಡುಗಡೆಗೆ ಬಾಕಿ ಇದೆ.

    English summary
    Debutant Tamil director Balamithran passed away after suffered a stroke before releasing of his movie Udukkai.
    Friday, June 12, 2020, 18:36
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X