Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಧನುಷ್-ಐಶ್ವರ್ಯಾ ನಡುವಿನ ಕಲಹ ಸರಿಯಾಗುತ್ತೆ ಎಂದ ಧನುಷ್ ತಂದೆ ಕಸ್ತೂರಿ ರಾಜ!
ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಐಶ್ವರ್ಯಾ ಅವರನ್ನು ವಿವಾಹವಾಗಿದ್ದ ತಮಿಳು ನಟ ಧನುಷ್ ಸೋಮವಾರ ವಿವಾಹ ವಿಚ್ಛೇಧನ ನೀಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಟ್ವಿಟ್ಟರ್ನಲ್ಲಿ ಧನುಷ್ ಮಾಹಿತಿ ಶೇರ್ ಮಾಡಿಕೊಂಡಿದ್ದಾರೆ. ಈ ಸುದ್ದಿ ಇದೀಗ ಎಲ್ಲರನ್ನು ಆಘಾತಕ್ಕೆ ಒಳಗಾಗಿಸಿದೆ. ಚಿತ್ರರಂಗದ ಹಲವರು ಸೇರಿದಂತೆ ಅಭಿಮಾನಿಗಳು ಬೇಸರ ವ್ಯಕ್ತ ಪಡಿಸಿದ್ದಾರೆ. 18 ವರ್ಷಗಳಿಂದಲೂ ಸಾಕಷ್ಟು ಅನ್ಯೋನ್ಯವಾಗಿದ್ದ ಧನುಷ್ ಮತ್ತು ಐಶ್ವರ್ಯಾ ನಡುವಲ್ಲಿ ಅಂತಹದ್ದೇನಾಯ್ತು ಎಂಬ ಬಗ್ಗೆ ಇದೀಗ ಚರ್ಚೆಗಳು ಆರಂಭವಾಗಿದೆ. ಇದೆಲ್ಲದರ ಬೆನ್ನಲ್ಲೇ ಈಗ ಇವರಿಬ್ಬರ ಈ ನಿರ್ಧಾರ ಬಗ್ಗೆ ಧನುಷ್ ತಂದೆ ತಮಿಳು ಚಲನಚಿತ್ರ ನಿರ್ಮಾಪಕ ಕಸ್ತೂರಿ ರಾಜಾ ಅವರು ಪ್ರತಿಕ್ರಿಯಿಸಿದ್ದಾರೆ.
2004ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನುಷ್ ಮತ್ತು ಐಶ್ವರ್ಯಾ ಡಿವೋರ್ಸ್ ಬಗ್ಗೆ ಇತ್ತೀಚೆಗೆ ಪ್ರಕಟಿಸಿದ್ದಾರೆ. ತಮ್ಮ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಜಂಟಿ ಹೇಳಿಕೆಯನ್ನು ಪ್ರಕಟಿಸುವ ಮೂಲಕ ಅಭಿಮಾನಿಗಳಿಗೆ, ಕುಟುಂಬ ಸದಸ್ಯರಿಗೆ ಆಶ್ಚರ್ಯ ಉಂಟು ಮಾಡಿದ್ದಾರೆ. ಇವರಿಬ್ಬರೂ 18 ವರ್ಷ ಅನ್ಯೋನ್ಯವಾಗಿ ದಾಂಪತ್ಯ ಜೀವನ ನಡೆಸಿ ಈಗ ಯಾಕೆ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬ ಬಗ್ಗೆ ಸಾಕಷ್ಟು ಪ್ರಶ್ನೆಗಳು ಉದ್ಭವವಾಗುತ್ತಿದೆ. ಇದಕ್ಕೆ ಈಗ ನಟ ಧನುಷ್ ತಂದೆ ಕಸ್ತೂರಿ ರಾಜ ಪ್ರತಿಕ್ರಿಯಿಸಿ ಮತ್ತೆ ಧನುಷ್-ಐಶ್ವರ್ಯಾ ಒಂದಾಗಬಹುದು ಎಂಬ ಆಶ್ವಾಸನೆ ನೀಡಿದ್ದಾರೆ.
ಧನುಷ್-ಐಶ್ವರ್ಯಾ ಡಿವೋರ್ಸ್ ಪ್ರಕಟಿಸಿದ ಬಳಿಕ ಖಾಸಗಿ ಮ್ಯಾಗಝಿನ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಧನುಷ್ ಮತ್ತು ಐಶ್ವರ್ಯಾರ ಈ ನಿರ್ಧಾರ ಕೇವಲ ಕೌಟುಂಬಿಕ ಕಲಹವಷ್ಟೆ ಎಂದಿದ್ದಾರೆ. ಅಷ್ಟೇ ಅಲ್ಲದೇ ಪ್ರತಿ ಸಂಸಾರಗಳಲ್ಲಿ ಹೇಗೆ ಮನಸ್ತಾಪಗಳು ಉಂಟಾಗುತ್ತೊ, ಅಂತೆಯೇ ಧನುಷ್ ಮತ್ತು ಐಶ್ವರ್ಯ ನಡುವೆಯೂ ಕಲಹಗಳು ಉಂಟಾಗಿದೆ. ಹೀಗಾಗಿ ಇವರಿಬ್ಬರ ಈ ನಿರ್ಧಾರ ಸಾಮಾನ್ಯವಾಗಿ ದಂಪತಿಗಳ ನಡುವೆ ನಡೆಯುವ ಕಲಹ ಮಾತ್ರ. ಇದು ವಿಚ್ಛೇದನ ಅಲ್ಲಾ ಎಂದಿದ್ದಾರೆ.