Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
2ನೇ ಬಾರಿ ರಾಷ್ಟ್ರ ಪ್ರಶಸ್ತಿ ಪಡೆದ ಬಗ್ಗೆ ನಟ ಧನುಷ್ ಭಾವನಾತ್ಮಕ ಪತ್ರ
67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಮಾರ್ಚ್ 22ರಂದು ಪ್ರಟಕವಾಗಿದೆ. ಕೋವಿಡ್ ಕಾರಣದಿಂದ ವಿಳಂಬವಾಗಿ ಪ್ರಕಟಿಸಲಾಗಿದೆ. 67ನೇ ರಾಷ್ಟ್ರ ಪ್ರಶಸ್ತಿ ಅತ್ಯುತ್ತಮ ನಟ ಪ್ರಶಸ್ತಿ ಬಾಲಿವುಡ್ ನಟ ಮನೋಜ್ ಬಾಜಪೇಯಿ ಮತ್ತು ತಮಿಳು ನಟ ಧನುಷ್ ಇಬ್ಬರ ಪಾಲಾಗಿದೆ.
ಭೋನ್ಸ್ಲೆ ಚಿತ್ರದ ನಟನೆಗೆ ಮನೋಜ್ ಬಾಜಪೇಯಿ ಅವರಿಗೆ ಪ್ರಶಸ್ತಿ ಬಂದಿದೆ. ಇನ್ನು ಅಸುರನ್ ಚಿತ್ರದ ಅದ್ಭುತ ನಟನೆಗೆ ನಟ ಧನುಷ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಪ್ರಶಸ್ತಿ ಬಂದ ಸಂತಸವನ್ನು ನಟ ಧನುಷ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ದೀರ್ಘವಾದ ಪತ್ರ ಬರೆದಿದ್ದಾರೆ. ಮುಂದೆ ಓದಿ...
ಭಾರಿ ದುಬಾರಿ ಮೊತ್ತಕ್ಕೆ ನೆಟ್ಫ್ಲಿಕ್ಸ್ಗೆ ಸೇಲ್ ಆದ ಧನುಷ್ ಸಿನಿಮಾ
ಅತ್ಯುತ್ತಮ ನಟ ಪ್ರಶಸ್ತಿ ಗೆಲ್ಲುವುದು ಒಂದು ಕನಸು
'ಅಸುರನ್ ಚಿತ್ರದ ನಟನೆಗೆ ರಾಷ್ಟ್ರ ಪ್ರಶಸ್ತಿ ಬಂದಿದೆ ಎನ್ನುವ ಅದ್ಭುತ ಸುದ್ದಿಯೊಂದಿಗೆ ದಿನ ಪ್ರಾರಂಭಿಸಿದೆ. ಅತ್ಯುತ್ತಮ ನಟ ಪ್ರಶಸ್ತಿ ಗೆಲ್ಲುವುದು ಒಂದು ಕನಸು. ಎರಡು ಗೆಲ್ಲುವುದು ಆಶೀರ್ವಾದ. ನಾನು ಇಲ್ಲಿವರೆಗೂ ಬರುತ್ತೇನೆ ಎಂದು ಎಂದಿಗೂ ಅಂದುಕೊಂಡಿರಲಿಲ್ಲ. ಸಾಕಷ್ಟು ಜನರಿಗೆ ಧನ್ಯವಾದ ಹೇಳಬೇಕು. ಆದರೆ ಅದರಲ್ಲಿ ಕೆಲವರು ಮಾತ್ರ ಹೇಳುತ್ತೇನೆ. ಯಾವಾಗಲು ನನ್ನ ತಂದೆ-ತಾಯಿಗೆ ಧನ್ಯವಾದಗಳು. ನನ್ನ ಗುರು ಹಾಗೂ ಸಹೋದರನಿಗೆ ಧನ್ಯವಾದಗಳು' ಎಂದಿದ್ದಾರೆ.
ನಿರ್ದೇಶಕ ವೆಟ್ರಿಮಾರನ್ ಬಗ್ಗೆ ಧನುಷ್ ಮಾತು
'ವೆಟ್ರಿ ನಾನು ನಿಮ್ಮನ್ನು ಬಾಲಾ ಮಹೇಂದ್ರ ಸರ್ ಕಚೇರಿಯಲ್ಲಿ ಭೇಟಿಯಾದಾಗ ನೀವು ಸ್ನೇಹಿತ, ಒಡನಾಡಿ ಮತ್ತು ಸಹೋದರರಾಗುತ್ತೀರಿ ಎಂದು ಎಂದಿಗೂ ಯೋಚಿಸಿರಲಿಲ್ಲ. ನಾವು ಕೆಲಸ ಮಾಡಿದ ನಾಲ್ಕು ಸಿನಿಮಾಗಳ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ' ಎಂದು ನಿರ್ದೇಶಕ ವೆಟ್ರಿಮಾರನ್ ಬಗ್ಗೆ ಧನುಷ್ ಬರೆದುಕೊಂಡಿದ್ದಾರೆ.
ಧನುಷ್ ಮಾಡಬೇಕಿದ್ದ ಖ್ಯಾತ ಕ್ರೀಡಾಪಟುವಿನ ಪಾತ್ರದಲ್ಲಿ ಅಮೀರ್ ಖಾನ್
ಶಕ್ತಿಯ ಆಧಾರಸ್ತಂಭ ಅಭಿಮಾನಿಗಳು
'ಅಂತಿಮವಾಗಿ ನನ್ನ ಅಭಿಮಾನಿಗಳಿಗೆ, ನನ್ನ ಶಕ್ತಿಯ ಆಧಾರ ಸ್ತಂಭಗಳಿಗೆ ಧನ್ಯವಾಗಳು. ನೀವೆಲ್ಲರೂ ನನಗೆ ನೀಡಿದ ಅತಿಯಾದ ಪ್ರೀತಿ ನನ್ನನ್ನು ಕಾಪಾಡುತ್ತದೆ. ಎಲ್ಲರಿಗೂ ಧನ್ಯವಾದ ಹೇಳಿದರೆ ಸಾಲದು. ನಿಮ್ಮೆಲ್ಲರನ್ನೂ ಪ್ರೀತಿಸುತ್ತೇನೆ' ಎಂದು ಅಭಿಮಾನಿಗಳ ಬಗ್ಗೆ ಪ್ರೀತಿ ವ್ಯಕ್ತಪಡಿಸಿದ್ದಾರೆ.
Recommended Video
ಎರಡನೇ ಬಾರಿ ರಾಷ್ಟ್ರ ಪ್ರಶಸ್ತಿ ಗೆದ್ದು ಬೀಗಿದ ಧನುಷ್
ದೀರ್ಘವಾಗಿ ಬರೆದ ಭಾವನಾತ್ಮಕ ಪತ್ರದಲ್ಲಿ ಧನುಷ್ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದ್ದಾರೆ. ಅಂದಹಾಗೆ ಧನುಷ್ ಎರಡನೇ ಬಾರಿಗೆ ರಾಷ್ಟ್ರ ಪ್ರಶಸ್ತಿ ಮುಡಿಗೇರಿಸಿಕೊಳ್ಳುತ್ತಿದ್ದಾರೆ. ಈ ಮೊದಲು 2011ರಲ್ಲಿ ಆಡುಕಲಮ್ ಸಿನಿಮಾದ ಉತ್ತಮ ನಟನೆಗೆ ಮೊದಲ ಬಾರಿಗೆ ರಾಷ್ಟ್ರ ಪ್ರಶಸ್ತಿ ಗೆದ್ದು ಬೀಗಿದ್ದರು.