Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕ್ರಿಕೆಟ್ ಆಟಗಾರನ ಜೊತೆ ಖ್ಯಾತ ನಿರ್ದೇಶಕ ಶಂಕರ್ ಪುತ್ರಿಯ ಮದುವೆ
ತಮಿಳಿನ ಖ್ಯಾತ ನಿರ್ದೇಶಕ ಶಂಕರ್ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಪುತ್ರಿ ಐಶ್ವರ್ಯಾ ಕ್ರಿಕೆಟ್ ಆಟಗಾರ ರೋಹಿತ್ ದಾಮೋದರನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಐಶ್ವರ್ಯಾ ಮತ್ತು ರೋಹಿತ್ ಮದುವೆ ಇಂದು (ಜೂನ್ 27) ಮಹಾಬಲಿಪುರಂನಲ್ಲಿ ನಡೆಯಲಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.
ತೀರ ಖಾಸಗಿಯಾಗಿ ನಡೆಯುತ್ತಿರುವ ಮದುವೆ ಸಮಾರಂಭದಲ್ಲಿ ಇಬ್ಬರು ಕುಟುಂಬದ ಕೆಲವೇ ಸದಸ್ಯರು, ಸ್ನೇಹಿತರು ಮಾತ್ರ ಹಾಜರಾಗಲಿದ್ದಾರೆ ಎಂದು ಎನ್ನುವ ಮಾಹಿತಿ ತಿಳಿದುಬಂದಿದೆ. ಕೊರೊನಾ ಮಾರ್ಗಸೂಚಿ ಅನುಸಾರ ಮದುವೆ ನಡೆಯುತ್ತಿದ್ದು, ಹೆಚ್ಚಿನ ಜನರಿಗೆ ಆಹ್ವಾನ ನೀಡಿಲ್ಲ.
ಅಂದಹಾಗೆ ಪುತ್ರಿಯ ಮದುವೆ ನಿರ್ದೇಶಕ ಶಂಕರ್ ಯಾವುದೇ ಮಾಹಿತಿಯನ್ನು ಬಹಿರಂಗಗೊಳಿಸಿಲ್ಲ. ಶಂಕರ್ ಪುತ್ರಿ ಐಶ್ವರ್ಯಾ ಡಾಕ್ಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಇನ್ನು ರೋಹಿತ್ ರಣಜಿ ಕ್ರಿಕೆಟರ್ ಆಗಿದ್ದು, ಪಾಂಡಿಚೇರಿ ತಂಡದ ಕ್ಯಾಪ್ಟನ್ ಆಗಿದ್ದಾರೆ. ರೋಹಿತ್ ತಂದೆ ದಾಮೋದರನ್ ದೊಡ್ಡ ಉದ್ಯಮಿ. ತಮಿಳು ನಾಡು ಪ್ರೀಮಿಯರ್ ಲೀಗ್ನ ಮದುರೈ ಪ್ಯಾಂಥರ್ಸ್ ತಂಡದ ಮಾಲಿಕರಾಗಿದ್ದಾರೆ.
ಆರಂಭದಲ್ಲಿ ರೋಹಿತ್ ತಮಿಳು ಕ್ರಿಕೆಟ್ ತಂಡದಲ್ಲಿ ಆಡಲು ತುಂಬಾ ಶ್ರಮಿಸಿದ್ದರು. ಅವಕಾಶ ಸಿಗದೆ ಬಳಿಕ ಶ್ರೀಲಂಕಾದ ಪರ ಆಡಿದ್ದರು. ಬಳಿಕ ತಂದೆಯ ಪ್ರಭಾವದೊಂದಿಗೆ ಪಾಂಡಿಚೇರಿ ಕ್ರಿಕೆಟ್ ತಂಡದದಲ್ಲಿ ಅವಕಾಶ ಗಿಟ್ಟಿಸಿಕೊಂಡರು. ಬಳಿಕ ಅವರೇ ತಂಡದ ನಾಯಕರಾಗಿದ್ದಾರೆ.
ಇಂದು ನಡೆಯುತ್ತಿರುವ ಮದುವೆ ಸಮಾರಂಭದಲ್ಲಿ ಚಿತ್ರರಂಗದ ಗಣ್ಯರು ಯಾರೆಲ್ಲ ಹಾಜರಾಗಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ. ಆದರೆ ಕೊರೊನಾ ಕಟ್ಟುನಿಟ್ಟಿನ ನಿಯಮದ ಕಾರಣ ಚಿತ್ರರಂಗದ ಅನೇಕ ಗಣ್ಯರಿಗೆ ಆಹ್ವಾನ ನೀಡಿರುವ ಸಾಧ್ಯತೆ ತೀರ ಕಡಿಮೆ ಇದೆ. ಹಾಗಾಗಿ ಯಾರೆಲ್ಲ ಭಾಗಿಯಾಗಲಿದ್ದಾರೆ ಕಾದು ನೋಡಬೇಕು.
ನಿರ್ದೇಶಕ ಶಂಕರ್ ತಮಿಳಿನ ಸ್ಟಾರ್ ನಟರಿಗೆ ಸಿನಿಮಾ ಮಾಡಿ ಸೈ ಎನಿಸಿಕೊಂಡಿದ್ದಾರೆ. ರಜನಿಕಾಂತ್, ಕಮಲ್ ಹಾಸನ್, ವಿಜಯ್, ವಿಕ್ರಮ್ ಸೇರಿದಂತೆ ಅನೇಕರಿಗೆ ಸಿನಿಮಾ ನಿರ್ದೇಶನ ಮಾಡಿ ಸಕ್ಸಸ್ ಕಂಡಿದ್ದಾರೆ. ಸದ್ಯ ಶಂಕರ್ ತೆಲುಗು ಸ್ಟಾರ್ ನಟ ರಾಮ್ ಚರಣ್ ತೇಜ್ ಅವರ ಜೊತೆ ಪ್ಯಾನ್ ಇಂಡಿಯಾ 3ಡಿ ಸಿನಿಮಾ ಅನೌನ್ಸ್ ಮಾಡಿದ್ದಾರೆ.
Recommended Video
ಈ ಸಿನಿಮಾ ಜೊತೆಗೆ ಅನ್ನಿಯನ್ ಹಿಂದಿ ರಿಮೇಕ್ಗೂ ತಯಾರಿ ನಡೆಯುತ್ತಿದ್ದಾರೆ. ಬಾಲಿವುಡ್ ನಟ ರಣ್ವೀರ್ ಸಿಂಗ್ ಜೊತೆ ಅನ್ನಿಯನ್ ಚಿತ್ರವನ್ನು ಹಿಂದಿಗೆ ರಿಮೇಕ್ ಮಾಡುತ್ತಿದ್ದಾರೆ. ಇದೆಲ್ಲದರ ಜೊತೆಗೆ ಕಮಲ್ ಹಾಸನ್ ಜೊತೆಗಿನ ಇಂಡಿಯನ್-2 ಸಿನಿಮಾ ಸಂಪೂರ್ಣ ಮಾಡಬೇಕಿದೆ. ಇಂಡಿಯನ್-2 ಮುಗಿಸಿ ಹೊಸ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಳ್ಳುವ ಸಾಧ್ಯತೆ ಇದೆ.