Don't Miss!
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- News ಪೂಜೆ ಮಾಡಿದ ಈ ಲಿಂಬೆಹಣ್ಣು ಲಕ್ಷಕ್ಕೆ ಹರಾಜ್! ಶಾಕ್ ಆಡ್ಬೇಡಿ ಇದು ನಿಜ...
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ, ಡಿಎಂಕೆ ನಾಯಕ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಬಂಧನ
ಖ್ಯಾತ ನಟ, ಡಿಎಂಕೆ ಪಕ್ಷದ ಮುಖಂಡ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಅನ್ನು ತಮಿಳುನಾಡು ಪೊಲೀಸರು ಇಂದು (ನವೆಂಬರ್ 20) ಸಂಜೆ ಬಂಧಿಸಿದ್ದಾರೆ.
ನಟನೆ ಜೊತೆಗೆ ಸಕ್ರಿಯ ರಾಜಕಾರಣಿಯೂ ಆಗಿರುವ ಉದಯನಿಧಿ ಸ್ಟಾಲಿನ್, ಡಿಎಂಕೆ ಪಕ್ಷದ ಯುವ ಘಟಕದ ಕಾರ್ಯದರ್ಶಿಯಾಗಿದ್ದಾರೆ.
ಡಿಎಂಕೆ ಚುನಾವಣಾ ಪ್ರಚಾರ 'ವಿಡಿಯಲೈ ನೊಕ್ಕಿ' ಗೆ ಉದಯನಿಧಿ ಸ್ಟಾಲಿನ್ ಇಂದು ತಮಿಳುನಾಡಿನ ನಾಗಪಟ್ಟಿನಂ ಜಿಲ್ಲೆಯಲ್ಲಿ ಪ್ರಾರಂಭ ನೀಡಿದರು. ಭಾರಿ ಸಂಖ್ಯೆಯಲ್ಲಿ ನೆರೆದಿದ್ದ ಜನಸ್ತೋಮದ ಎದುರು ಭಾಷಣ ಮಾಡಿದರು.
ಭಾಷಣದ ತರುವಾಯ ಪೊಲೀಸರು ಉದಯನಿಧಿ ಸ್ಟಾಲಿನ್ ಹಾಗೂ ಅವರ ಕೆಲವು ಬೆಂಬಲಿಗರನ್ನು ವಶಕ್ಕೆ ಪಡೆದು, ಕಲ್ಯಾಣ ಮಂಟಪವೊಂದರಲ್ಲಿ ಬಂಧಿಯಾಗಿಟ್ಟಿದ್ದರು.ತಮ್ಮ ನಾಯಕನನ್ನು ಪೊಲೀಸರು ಕರೆದೊಯ್ದ ಕೂಡಲೇ ಡಿಎಂಕೆ ಬೆಂಬಲಿಗರು ಪ್ರತಿಭಟನೆ ನಡೆಸಿದ್ದು, ಪೊಲೀಸರು ಹಾಗೂ ತಮಿಳುನಾಡು ಸಿಎಂ ಪಳನಿಸ್ವಾಮಿ ವಿರುದ್ಧ ಘೋಷಣೆಗಳನ್ನು ಕೂಗಿದರು.
ಉದಯನಿಧಿ ಮಾರನ್, ಸಮಾವೇಶ ಮಾಡುವ ಮೂಲಕ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರಾದ್ದರಿಂದ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
Recommended Video
ತಮ್ಮ ಬಂಧನವನ್ನು ಖಂಡಿಸಿರುವ ಉದಯನಿಧಿ ಸ್ಟಾಲಿನ್, 'ನಮ್ಮ ಪಕ್ಷದ (ಡಿಎಂಕೆ) ಮುಖಂಡರು ಹಾಗೂ ನಮ್ಮ ಮೈತ್ರಿ ಪಕ್ಷಗಳ ನಾಯಕರು ಜನರನ್ನು ಭೇಟಿ ಮಾಡದಂತೆ ತಡೆಯಲು ಸಿಎಂ ಪಳನಿಸ್ವಾಮಿ ಪೊಲೀಸರನ್ನು ಬಳಸಿಕೊಳ್ಳುತ್ತಿದ್ದಾರೆ' ಎಂದಿದ್ದಾರೆ.