Don't Miss!
- News Lok Sabha Election 2024: ಮತದಾನ ಮಾಡಿದವರಿಗೆ ಬೆಂಗಳೂರಿನ ಈ ಹೋಟೆಲ್ಗಳಲ್ಲಿ ಊಚಿತ ಊಟ & ತಿಂಡಿ-ಮಾಹಿತಿ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಲೋಕಸಭಾ ಚುನಾವಣೆ 2024: ಟಾಪ್ 10 ಶ್ರೀಮಂತ ಅಭ್ಯರ್ಥಿಗಳು ಇವರು
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳುನಾಡು ಸಿನಿಮಾ ನಟರ ಸಂಘ ಕಚೇರಿಯಲ್ಲಿ ಬೆಂಕಿ: ಮಹತ್ವದ ದಾಖಲೆಗಳು ಭಸ್ಮ
ತಮಿಳುನಾಡಿನಲ್ಲಿ ಆಗಾಗ್ಗೆ ವಿವಾದಕ್ಕೆ ಕಾರಣವಾಗುವ ಸಿನಿಮಾ ನಟರ ಸಂಘದ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಚೆನ್ನೈನ ಟಿ.ನಗರ್ನ ಹಬೀಬುಲ್ಲಾ ರಸ್ತೆಯಲ್ಲಿರುವ 'ನಡಿಗರ್ ಸಂಘಂ' ಕಚೇರಿಯಲ್ಲಿ ಇಂದು (ಡಿಸೆಂಬರ್ 07) ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಕಚೇರಿಯಲ್ಲಿದ್ದ ಮಹತ್ವದ ದಾಖಲೆಗಳು ಬೆಂಕಿಗೆ ಆಹುತಿ ಆಗಿವೆ.
ಬೆಂಕಿ ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳವು ಬೆಂಕಿ ಹೆಚ್ಚು ಹರಡದಂತೆ ನಂದಿಸಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ವಿದ್ಯುತ್ ಶಾರ್ಟ್ಸರ್ಕ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎನ್ನಲಾಗುತ್ತಿದೆ.
2019 ರ ಜೂನ್ ತಿಂಗಳಲ್ಲಿ 'ನಡಿಗರ್ ಸಂಘಂ'ನ ಚುನಾವಣೆಗಳು ನಡೆದವು. ಆದರೆ ಈ ಚುನಾವಣೆ ಮತ್ತು ಇತರೆ ವಿಷಯಕ್ಕೆ ಸಂಬಂಧಿಸಿದಂತೆ ಪ್ರಕರಣಗಳು ಹೈಕೋರ್ಟ್ನಲ್ಲಿ ನಡೆಯುತ್ತಿವೆ.
ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳನ್ನು ನ್ಯಾಯಾಲಯದ ಆದೇಶದಂತೆ ಚೆನ್ನೈನ ಸೌಥ್ ಇಂಡಿಯಾ ಬ್ಯಾಂಕಿನ ಲಾಕರ್ನಲ್ಲಿ ಇಡಲಾಗಿದೆ. ಆದರೆ ಇನ್ನೂ ಹಲವು ದಾಖಲೆಗಳು ನಡಿಗರ್ ಸಂಘದ ಕಚೇರಿಯಲ್ಲಿಯೇ ಇತ್ತು. ಈಗ ಬೆಂಕಿ ಅವಘಡದಿಂದ ಹಲವು ಮಹತ್ವದ ದಾಖಲೆಗಳು ನಷ್ಟವಾಗಿವೆ.
ಈ ಸಂಘ ಆಗಾಗ್ಗೆ ವಿವಾದಗಳಿಗೆ ಕಾರಣವಾಗುತ್ತಲೇ ಇರುತ್ತದೆ. ನಟ ವಿಶಾಲ್ ಸೇರಿ ಹಲವರು ನಡಿಗರ್ ಸಂಘದ ಪದಾಧಿಕಾರಿಗಳ ವಿರುದ್ಧ ಪ್ರತಿಭಟನೆಗಳನ್ನು ಮಾಡಿದ್ದರು. ಪ್ರತಿಭಟನೆ ಹಿಂಸಾಚಾರಕ್ಕೆ ಸಹ ತಿರುಗಿ ಭಾರಿ ಸುದ್ದಿಯಾಗಿತ್ತು. ಇದೀಗ ಕಚೇರಿಗೆ ಬೆಂಕಿ ಬಿದ್ದಿರುವುದು ಸಹ ಯಾರದ್ದೋ ಕುತಂತ್ರದಿಂದ ಎಂಬ ಆರೋಪಗಳನ್ನು ಕೆಲವರು ಮಾಡಬಹುದು.