Don't Miss!
- News Love Jihad: ಹುಬ್ಬಳ್ಳಿ ಹತ್ಯೆಯನ್ನು ಲವ್ ಜಿಹಾದ್ ಆಯಾಮದಲ್ಲಿ ತನಿಖೆ ನಡೆಸಿ: ಪ್ರಹ್ಲಾದ್ ಜೋಶಿ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮದುವೆಯಾಗುವುದಾಗಿ ಹೇಳಿ ಯುವತಿಗೆ ವಂಚನೆ: ನಟ ಆರ್ಯ ವಿರುದ್ಧ ದೂರು ದಾಖಲು
ತಮಿಳಿನ ಖ್ಯಾತ ನಟ ಆರ್ಯ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. ಇತ್ತೀಚಿಗೆ ಆರ್ಯ ಪತ್ನಿ ಸಯೇಶಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ತಂದೆಯಾದ ಸಂಭ್ರಮ ಮತ್ತು ಸರ್ಪಟ್ಟ ಪರಂಬರೈ ಯಶಸ್ಸಿನ ಖುಷಿಯಲ್ಲಿದ್ದ ನಟ ಆರ್ಯಗೆ ವಂಚನೆ ದೂರು ಶಾಕ್ ನೀಡಿದೆ.
Recommended Video
ಜರ್ಮನಿ ಮೂಲಕ ವಿದ್ಜಾ ಎನ್ನುವ ಮಹಿಳೆ ನಟ ಆರ್ಯ ವಿರುದ್ಧ 70 ಲಕ್ಷ ರೂ. ವಂಚನೆ ಆರೋಪ ಮಾಡಿದ್ದಾರೆ. ಆರ್ಯ ತನ್ನನ್ನು ಪ್ರೀತಿಸಿ, ಮದುವೆಯಾಗುವುದಾಗಿ ಹೇಳಿ ಭರವಸೆ ನೀಡಿದ್ದರು. ಆದರೀಗ ಬೇರೆ ಯುವತಿ ಜೊತೆ ಮದುವೆಯಾಗಿದ್ದಾರೆ ಎಂದು ಜರ್ಮನಿ ಮೂಲದ ವಿದ್ಜಾ ಗಂಭೀರ ಆರೋಪ ಮಾಡಿದ್ದಾರೆ.
ವಿದ್ಜಾಗೆ ಪವರ್ ಆಫ್ ಆಟಾರ್ನಿ ಆಗಿರುವ ಚೆನ್ನೈನ ರಾಜಪಾಂಡಿಯನ್ ಈ ವಿಚಾರವಾಗಿ ತನಿಖೆ ಕೋರಿ ಮದ್ರಾಸ್ ಹೈಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇಂದು ವಿಚಾರಣೆಗೆ ಬಂದಿದ್ದು, ಆರ್ಯ ವಿದ್ಜಾಳನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದರು ಮತ್ತು ಅವಳಿಂದ 70 ಲಕ್ಷ ಸಾಲ ಪಡೆದಿದ್ದರು ಎಂದು ಉಲ್ಲೇಖಿಸಲಾಗಿದೆ.
ಇನ್ನು ಸಯೇಶಾಳನ್ನು ಮದುವೆಯಾದ ಬಗ್ಗೆ ಆರ್ಯರನ್ನು ಪ್ರಶ್ನಿಸಿದಾಗ ಎಲ್ಲಾ ಸಾಲ ತೀರಿಸುವುದಾಗಿ ಭರವಸೆ ನೀಡಿದ್ದರು ಎಂದಿದ್ದಾರೆ. ಅಲ್ಲದೆ ಆರು ತಿಂಗಳೊಳಗೆ ಸಯೇಶಾಗೆ ವಿಚ್ಛೇದನ ನೀಡಿ ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದ ಹಾಗಾಗಿ ಆರ್ಯ ಮದುವೆಗೆ ಒಪ್ಪಿಗೆ ನೀಡಿದೆ ಎಂದು ವಿದ್ಜಾ ಹೇಳಿದ್ದಾರೆ.
ವಿದ್ಜಾ ಪರ ವಕೀಲರು ಆನಂದ್ ಇಂದು ವಿಚಾರಣೆ ವೇಳೆ, ಆರ್ಯ ನಟನೆಯ ತಮಿಳು ಸಿನಿಮಾ ಮತ್ತು ಮಲಯಾಳಂ ಸಿನಿಮಾ ಬಿಡುಗಡೆಯಾಗದಂತೆ ನಿಲ್ಲಿಸಬೇಕು ಎಂದು ಕೇಳಿಕೊಂಡಿದ್ದಾರೆ. ವಿದ್ಜಾ ಅವರಿಗೆ ಹಣ ವಾಪಸ್ ಕೊಡುವವರೆಗೂ ಹಣ ಹಿಂದಿರುಗಿಸಬಾರದು ಎಂದು ವಕೀಲರು ಮನವಿ ಮಾಡಿಕೊಂಡಿದ್ದಾರೆ. ಬಳಿಕ ವಿಚಾರಣೆಯನ್ನು ಆಗಸ್ಟ್ 17ಕ್ಕೆ ಮುಂದೂಡಲಾಗಿದೆ.