Just In
- 5 hrs ago
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- 6 hrs ago
Bigg Boss Tamil 4: ಅತಿ ಹೆಚ್ಚು ಸಂಭಾವನೆ ಪಡೆದ ಸ್ಪರ್ಧಿಯೇ ವಿಜೇತ!
- 6 hrs ago
ಫೋಟೋಗಳು: ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಸಿನಿ ತಾರೆಯರು; ಯಶ್, ಸುದೀಪ್ ಸಖತ್ ಡ್ಯಾನ್ಸ್
- 8 hrs ago
ಶಿವಮೊಗ್ಗದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್: 'ಬೆಸ್ಟ್ ವೀಕೆಂಡ್ ಎವರ್' ಎಂದ ನಟಿ
Don't Miss!
- Finance
Flipkart Big Saving Days: ಆಪಲ್, ಸ್ಯಾಮ್ಸಂಗ್ ಸೇರಿ ಹಲವು ಬ್ರ್ಯಾಂಡ್ ಗಳ ಆಫರ್
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Automobiles
ಅನಾವರಣವಾಯ್ತು 2021ರ ಎಪ್ರಿಲಿಯಾ ಆರ್ಎಸ್ವಿ4 ಬೈಕುಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
'ಇಂಡಿಯನ್ 2' ದುರಂತ: ಸಿಬಿಐ ಅಧಿಕಾರಿಗಳಿಂದ ನಿರ್ದೇಶಕ ಶಂಕರ್ ವಿಚಾರಣೆ
ಯಾರೂ ನಿರೀಕ್ಷಿಸದ ದುರ್ಘಟನೆಯೊಂದು ಕಳೆದ ವಾರ ನಡೆದೇ ಹೋಯ್ತು. ಚೆನ್ನೈನಲ್ಲಿ ನಡೆಯುತ್ತಿದ್ದ 'ಇಂಡಿಯನ್-2' ಶೂಟಿಂಗ್ ಸ್ಪಾಟ್ ನಲ್ಲಿ ಆಕಸ್ಮಿಕವಾಗಿ ಕ್ರೇನ್ ಬಿದ್ದು ಮೂವರು ಸಾವನ್ನಪ್ಪಿದರು. ಒಂಬತ್ತು ಮಂದಿ ಗಾಯಗೊಂಡರು. ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ನಿರ್ದೇಶಕ ಶಂಕರ್, ನಟ ಕಮಲ್ ಹಾಸನ್ ಮತ್ತು ನಟಿ ಕಾಜಲ್ ಅಗರ್ವಾಲ್ ಪಾರಾದರು.
ಚಿತ್ರೀಕರಣದ ವೇಳೆ ಈ ದುರಂತ ಸಂಭವಿಸಿದ ಮೇಲೆ 'ಇಂಡಿಯನ್-2' ಶೂಟಿಂಗ್ ನಿಲ್ಲಿಸಲಾಗಿದೆ. ಜೊತೆಗೆ 'ಇಂಡಿಯನ್-2' ಚಿತ್ರವನ್ನು ನಿರ್ಮಾಣ ಮಾಡುತ್ತಿರುವ ಲೈಕಾ ಪ್ರೊಡಕ್ಷನ್ಸ್ ವಿರುದ್ಧ ಕೇಸ್ ದಾಖಲಾಗಿದೆ. ಈ ಪ್ರಕರಣ ಇದೀಗ ಸಿಬಿಐಗೆ ವರ್ಗಾವಣೆಗೊಂಡಿದ್ದು, ನಿರ್ದೇಶಕ ಶಂಕರ್ ರನ್ನ ವಿಚಾರಣೆಗೆ ಒಳಪಡಿಸಲಾಗಿದೆ.
'ಇಂಡಿಯನ್ 2' ಸೆಟ್ ನಲ್ಲಿ ಭೀಕರ ಅಪಘಾತ: 3 ಸಹಾಯಕ ನಿರ್ದೇಶಕರು ಮರಣ
ನಿರ್ದೇಶಕ ಶಂಕರ್ ಮತ್ತು ನಟ ಕಮಲ್ ಹಾಸನ್ ಗೆ ಸಿಬಿಐ ನಿಂದ ಸಮನ್ಸ್ ಜಾರಿ ಆಗಿದ್ದು, ನಿನ್ನೆ ಚೆನ್ನೈನ ಸಿಬಿಐ ಕಛೇರಿಗೆ ಶಂಕರ್ ಆಗಮಿಸಿದ್ದರು. ಎರಡು ಗಂಟೆಗಳಿಗೂ ಅಧಿಕ ಕಾಲ ಶಂಕರ್ ರನ್ನ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದರು.
'ಇಂಡಿಯನ್-2' ದುರಂತ: ಮೃತರ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ ನೀಡಿದ ಕಮಲ್ ಹಾಸನ್
'ಇಂಡಿಯನ್-2' ಶೂಟಿಂಗ್ ಸ್ಪಾಟ್ ನಲ್ಲಿ ನಡೆದ ದುರಂತ ನಿರ್ದೇಶಕ ಶಂಕರ್ ಗೂ ಆಘಾತ ನೀಡಿದೆ. ''ದುರ್ಘಟನೆ ಸಂಭವಿಸಿದ ಕ್ಷಣದಿಂದ ನಾನು ಶಾಕ್ ನಲ್ಲಿದ್ದೇನೆ. ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿದ್ದೇನೆ. ಆ ಕ್ರೇನ್ ನನ್ನ ಮೇಲೆ ಬಿದ್ದಿದ್ದರೆ ಚೆನ್ನಾಗಿರುತ್ತಿತ್ತು'' ಎಂದು ಭಾವೋದ್ವೇಗದಿಂದ ನಿರ್ದೇಶಕ ಶಂಕರ್ ಟ್ವೀಟ್ ಮಾಡಿದ್ದರು.
'ಇಂಡಿಯನ್-2' ಚಿತ್ರೀಕರಣದ ವೇಳೆ ನಡೆದ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನಟ ಕಮಲ್ ಹಾಸನ್ ತಲಾ ಒಂದು ಕೋಟಿ ರೂಪಾಯಿ ನೀಡಿದ್ದಾರೆ.