Don't Miss!
- News ಹಿಂದೂ ಯುವತಿ ಬರ್ಬರ ಹತ್ಯೆ ಪ್ರಕರಣ; ಇದೊಂದು ಲಬ್ ಜಿಹಾದ್ ಎಂದ ಜೋಶಿ: ಸಿದ್ದರಾಮಯ್ಯ ಹೇಳಿದ್ದೇನು?
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಇಂಡಿಯನ್ 2' ದುರಂತ: ಪೊಲೀಸರ ಮುಂದೆ ಹಾಜರಾದ ಕಮಲ್ ಹಾಸನ್
'ಇಂಡಿಯನ್ 2' ಚಿತ್ರೀಕರಣದ ವೇಳೆ ಕಳೆದ ವಾರ ಸೆಟ್ನಲ್ಲಿ ಉಂಟಾದ ಅವಘಡದಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಕಮಲ ಹಾಸನ್ ಮಂಗಳವಾರ ಚೆನ್ನೈ ಪೊಲೀಸರ ಮುಂದೆ ಹಾಜರಾದರು.
Recommended Video
ಅಪಘಾತ ಸಂಭವಿಸುವ ಸಂದರ್ಭದಲ್ಲಿ ನಟ ಕಮಲ ಹಾಸನ್ ಸ್ಥಳದಲ್ಲಿ ಇರಲಿಲ್ಲ ಎಂದು ಹೇಳಲಾಗಿದೆ. ಆದರೆ ಪೊಲೀಸರು ಕಮಲ ಹಾಸನ್ ಸೇರಿದಂತೆ ಚಿತ್ರತಂಡದ ಅನೇಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಹೀಗಾಗಿ ಕಮಲ ಹಾಸನ್ ವಿಚಾರಣೆಗೆ ಹಾಜರಾಗಿ ಪೊಲೀಸರ ಪ್ರಶ್ನೆಗಳಿಗೆ ಉತ್ತರಿಸಿದರು.
'ಇಂಡಿಯನ್ 2' ದುರಂತ: ಸಿಬಿಐ ಅಧಿಕಾರಿಗಳಿಂದ ನಿರ್ದೇಶಕ ಶಂಕರ್ ವಿಚಾರಣೆ
ಚೆನ್ನೈನ ಹೊರವಲಯದ ಇವಿಪಿ ಫಿಲಂ ಸಿಟಿಯಲ್ಲಿ 'ಇಂಡಿಯನ್ 2' ಚಿತ್ರೀಕರಣದ ವೇಳೆ ಶೂಟಿಂಗ್ಗೆ ಬಳಸಲಾಗಿದ್ದ ಕ್ರೇನ್ ತುಂಡಾಗಿ ಕೆಳಗೆ ಕೆಲಸ ಮಾಡುತ್ತಿದ್ದವರ ಮೇಲೆ ಪರಿಣಾಮ ಸಹಾಯಕ ನಿರ್ದೇಶಕ ಸೇರಿದಂತೆ ಮೂವರು ಮೃತಪಟ್ಟಿದ್ದರು. ಒಂಬತ್ತು ಮಂದಿ ಗಾಯಗೊಂಡಿದ್ದರು. ಈ ಸಂದರ್ಭದಲ್ಲಿ ಕಮಲ ಹಾಸನ್ ಬೇರೊಂದು ಸ್ಥಳದಲ್ಲಿದ್ದರು.
ನಿರ್ಲಕ್ಷ್ಯದಿಂದ ಸಾವು ಮತ್ತು ಗಾಯದ ಪ್ರಕರಣವನ್ನು ದಾಖಲಿಸಿಕೊಂಡಿದ್ದ ಪೊಲೀಸರು, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಂದ ಬಳಿಕ ಘಟನೆಗೆ ಹೊಣೆಗಾರರನ್ನು ಗುರುತಿಸುವುದಾಗಿ ತಿಳಿಸಿದ್ದಾರೆ. ಚಿತ್ರದ ನಿರ್ದೇಶಕ ಶಂಕರ್ ಅವರನ್ನು ಕಳೆದ ವಾರ ವಿಚಾರಣೆ ನಡೆಸಲಾಗಿತ್ತು. ಆದರೆ ಘಟನೆ ನಡೆದ ವೇಳೆ ಅವರು ಸ್ಥಳದಲ್ಲಿ ಇದ್ದರೇ ಅಥವಾ ಇರಲಿಲ್ಲವೇ ಎಂಬುದು ತಿಳಿದಿಲ್ಲ ಎಂದು ಪೊಲೀಸರು ತಿಳಿಸಿದ್ದರು.