Don't Miss!
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Finance ಸುಗಮ, ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರಿ ಪೊಲೀಸ್
- Automobiles ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜಕೀಯ ಮತ್ತು ಸಿನಿಮಾದಿಂದ ದಿಢೀರ್ ಬ್ರೇಕ್ ಪಡೆದ ಕಮಲ್ ಹಾಸನ್: ಕಾರಣವೇನು?
ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಸ್ವಲ್ಪ ಸಮಯ ವಿರಾಮ ಪಡೆಯುವುದಾಗಿ ಹೇಳಿ ಪತ್ರ ಬರೆದಿದ್ದಾರೆ. ತಮಿಳುನಾಡಿನ ಚುನಾವಣಾ ಪ್ರಚಾರದ ಬಿಸಿಯ ನಡುವೆಯೂ ಕಮಲ್ ಹಾಸನ್ ಬ್ರೇಕ್ ಪಡೆದಿರುವುದು ಅಚ್ಚರಿ ಮೂಡಿಸಿದೆ. ಆದರೆ ಕಮಲ್ ಬ್ರೇಕ್ ಪಡೆಯಲು ಕಾರಣ ಕಾಲಿನ ಶಸ್ತ್ರ ಚಿಕಿತ್ಸೆಗಾಗಿ.
ಹೌದು, ಕಾಲಿನ ಶಸ್ತ್ರ್ ಚಿಕಿತ್ಸೆಗಾಗಿ ಕಮಲ್ ಹಾಸನ್ ಬ್ರೇಕ್ ಪಡೆಯುವುದಾಗಿ ಹೇಳಿದ್ದಾರೆ. 66 ವರ್ಷದ ನಟ ಹಾಸನ್ ಕಳೆದ 15 ದಿನಗಳಲ್ಲಿ 5,000 ಕಿಮಿ ಓಡಾಡಿರುವುದಾಗಿ ಹೇಳಿದ್ದಾರೆ. ಏಪ್ರಿಲ್ ಮತ್ತು ಮೇ ನಲ್ಲಿ ಬರುವ ಚುನಾವಣೆಗೂ ಮೊದಲು ಸಂಪೂರ್ಣ ಗುಣಮುಖರಾಗಿ ಮತ್ತೆ ಬರುವುದಾಗಿ ಭರವಸೆ ನೀಡಿದ್ದಾರೆ.
ರಜನಿ ನಿರ್ಧಾರ ಬೇಸರ ತಂದಿದೆ, ಆದರೆ ಅವರ ಆರೋಗ್ಯ ನನಗೆ ಮುಖ್ಯ: ಕಮಲ್ ಹಾಸನ್
ನಟ ಕಮಲ್ ಹಾಸನ್ ಅವರಿಗೆ ವೈದ್ಯರು ವಿಶ್ರಾಂತಿ ಪಡೆಯಲು ಸೂಚಿಸಿದರು ಚುನಾವಣೆಯ ಕಾರಣ ವ್ಯಾಪಕವಾಗಿ ರಾಜ್ಯದಾದ್ಯಂತ ಪ್ರಯಾಣಸಿದ ಕಾರಣ ಕಾಲು ನೋವು ಜಾಸ್ತಿಯಾಗಿದೆ ಎಂದಿದ್ದಾರೆ. ಕೆಲವು ವರ್ಷಗಳ ಹಿಂದೆ ಅಪಘಾತದಿಂದ ಕಮಲ್ ಹಾಸನ್ ಕಾಲಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಮತ್ತೆ ಚಿಕಿತ್ಸೆ ಪಡೆಯಬೇಕಿತ್ತು. ಆದರೆ ಕಮಲ್ ರಾಜಕೀಯದಲ್ಲಿ ಬ್ಯುಸಿಯಾದ ಕಾರಣ ಶಸ್ತ್ರ ಚಿಕಿತ್ಸೆ ಕಡೆ ಗಮನ ಹರಿಸಿರಲಿಲ್ಲ.
Recommended Video
ಆದರೆ ಇದೀಗ ನೋವು ಹೆಚ್ಚಾದ ಕಾರಣ ಶಸ್ತ್ರ್ ಚಿಕಿತ್ಸೆಗೆ ಒಳಗಾಗುತ್ತಿದ್ದಾರೆ. ಭಾನುವಾರ ರಾತ್ರಿ ಬಿಗ್ ಬಾಸ್ ಸೀಸನ್-4 ಗ್ರ್ಯಾಂಡ್ ಫಿನಾಲೆ ಮುಗಿಸಿದ ಬಳಿಕ ಕಾಲಿನ ಶಸ್ತ್ರ ಚಿಕಿತ್ಸೆಯ ಕಾರಣ ಬ್ರೇಕ್ ಪಡೆಯುವುದಾಗಿ ಹೇಳಿದ್ದಾರೆ. ಸದ್ಯ ಕಮಲ್ ಕೆಲವು ದಿನಗಳ ಕಾಲ ರಾಜಕೀಯ ಮತ್ತು ಸಿನಿಮಾ ಸೇರಿದಂತೆ ಎಲ್ಲಾ ಕೆಲಸಗಳಿಂದ ಬ್ರೇಕ್ ಪಡೆದು ವಿಶ್ರಾಂತಿ ಪಡೆಯಲಿದ್ದಾರೆ.