Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಇಂಡಿಯನ್-2' ದುರಂತ: ಮೃತರ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ ನೀಡಿದ ಕಮಲ್ ಹಾಸನ್
ಕಮಲ್ ಹಾಸನ್ ಅಭಿನಯದ ಬಹುನಿರೀಕ್ಷೆಯ 'ಇಂಡಿಯನ್-2' ಚಿತ್ರೀಕರಣ ವೇಳೆ ನಡೆದ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ಒಂದು ಕೋಟಿ ರೂಪಾಯಿ ಪರಿಹಾರ ನೀಡಿದ್ದಾರೆ. ದುರಂತದಲ್ಲಿ ಮೂವರು ಸಹಾಯಕ ನಿರ್ದೇಶಕರು ಮೃತಪಟ್ಟಿದ್ದಾರೆ.
ಈ ಸಂಬಂಧ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಮಲ್ 'ಈ ಘಟನೆ ಚಿತ್ರೋದ್ಯಮದಲ್ಲಿ ಜನರ ಸುರಕ್ಷತೆಯನ್ನು ಪ್ರಶ್ನಾರ್ಹತೆಯನ್ನು ಸೂಚಿಸುತ್ತದೆ' ಎಂದಿದ್ದಾರೆ.
ಇನ್ನು 'ನನ್ನ ಪರವಾಗಿ ಮೃತಪಟ್ಟ ಮೂವರ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ನೀಡುತ್ತಿದ್ದೇನೆ. ಇದು ನನಗೆ ಮಾಡಲು ಸಾಧ್ಯವಾಗುವ ಕಾರ್ಯ. ಇದು ನಾವು ಕಳೆದುಕೊಂಡ ಜೀವಗಳಿಗೆ ನೀಡುವ ಪರಿಹಾರವಲ್ಲ. ಮೂರು ವರ್ಷಗಳ ಹಿಂದೆ ನನಗೂ ಒಂದು ಅಪಘಾತವಾಗಿತ್ತು. ಇಂತಹ ಅಪಘಾತಗಳ ಆಘಾತದಿಂದ ಗುಣಮುಖರಾಗಲು ಎಷ್ಟು ಕಷ್ಟ ಎಂಬುದು ನನಗೆ ಗೊತ್ತು' ಎಂದು ಹೇಳಿದ್ದಾರೆ.
ನಿನ್ನೆ ಶೂಟಿಂಗ್ ಸಮಯದಲ್ಲಿ ಕ್ರೇನ್ ಕುಸಿದು ಬಿದ್ದು ಮೂವರು ಮೃತಪಟ್ಟಿದ್ದರು. ಚೆನ್ನೈನ ಇವಿಪಿ ಸ್ಟೂಡಿಯೋದಲ್ಲಿ ಚಿತ್ರೀಕರಣ ನಡೆಯುವ ವೇಳೆ ಘಟನೆ ನಡೆದಿದೆ. ಸುಮಾರು 150 ಅಡಿ ಎತ್ತರದ ಭಾರಿ ಗಾತ್ರದ ಕ್ರೇನ್ ಕುಸಿದು ಅವಘಡ ಸಂಭವಿಸಿದೆ. ಮೂವರು ಮೃತಪಟ್ಟಿದ್ದು 12 ಮಂದಿ ಗಾಯಗೊಂಡಿದ್ದಾರೆ.
ಘಟನೆಗೆಯ ಬಗ್ಗೆ ನಟ ಕಮಲ್ ಹಾಸನ್ ಟ್ವೀಟ್ ಮಾಡಿದ್ದು, ''ನಾನು ಸಾಕಷ್ಟು ಅಪಘಾತಗಳನ್ನು ನೋಡಿದ್ದೇನೆ ಮತ್ತು ಅದರಿಂದ ಹೊರ ಬಂದಿದ್ದೇನೆ. ಆದರೆ, ಇಂದು ನೋಡಿದ ಅಪಘಾತ ನಿಜಕ್ಕೂ ಭೀಕರ. ನಾನು ನನ್ನು ಮೂವರು ಸಹೋದ್ಯೋಗಿಗಳನ್ನು ಕಳೆದುಕೊಂಡಿದ್ದೇನೆ. ಅವರ ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ," ಎಂದು ಸಂತಾಪ ಸೂಚಿಸಿದ್ದರು.
ಅಂದಹಾಗೆ, 'ಇಂಡಿಯನ್ 2' ಶಂಕರ್ ನಿರ್ದೇಶನದ ಸಿನಿಮಾವಾಗಿದೆ. ಸೌತ್ ಇಂಡಿಯಾದ ದೊಡ್ಡ ಬಜೆಟ್ ಸಿನಿಮಾಗಳಲ್ಲಿ ಒಂದಾಗಿದೆ.