Don't Miss!
- News ವೃದ್ಧರ ಗೌಪ್ಯ ಮತದಾನ ವೇಳೆ ಅಕ್ರಮ: ಸಿಪಿಎಂ ಏಜೆಂಟ್ ಹಸ್ತಕ್ಷೇಪ: Video Viral
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳುನಾಡಿನ 'ಹೃದಯದಿಂದ' ಸ್ಪರ್ಧಿಸಲಿದ್ದಾರೆ ಕಮಲ್ ಹಾಸನ್
ನಟ ಕಮಲ್ ಹಾಸನ್ ಸಕ್ರಿಯ ರಾಜಕೀಯಕ್ಕೆ ಧುಮುಕಿ ಮೂರು ವರ್ಷವಾಯಿತು. ಅವರೇ ಹೇಳಿಕೊಂಡಿದ್ದಂತೆ ರಾಜಕೀಯಕ್ಕೆ ಬರುವ ಮುನ್ನವೂ ಅವರು 'ರಾಜಕೀಯ ಜೀವಿಯೇ' ಆಗಿದ್ದರು.
'ಮಕ್ಕಳ್ ನಿಧಿ ಮಯಂ' ಪಕ್ಷ ಸ್ಥಾಪಿಸಿರುವ ಕಮಲ್ ಹಾಸನ್ ಈ ಬಾರಿ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಪ್ರಭಾವ ಬೀರುವ ಕನಸಿನಿಂದ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.
ತಮಿಳುನಾಡು ಚುನಾವಣೆ ಈಗಾಗಲೇ ಘೋಷಣೆಯಾಗಿದ್ದು, ರಾಜ್ಯದ ಎಲ್ಲ ವಿಧಾನಸಭೆ ಕ್ಷೇತ್ರದಿಂದಲೂ ತಮ್ಮ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸುತ್ತಾರೆ ಎಂದು ಕಮಲ್ ಹಾಸನ್ ಈಗಾಗಲೇ ಹೇಳಿದ್ದಾರೆ. ಇದೀಗ ಸ್ವತಃ ಕಮಲ್ ಹಾಸನ್ ಎಲ್ಲಿಂದ ಸ್ಪರ್ಧಿಸಲಿದ್ದಾರೆ ಎಂಬುದು ಬಹುತೇಕ ಖಾತ್ರಿಯಾಗಿದೆ.
ರಾಜಕೀಯ ಮತ್ತು ಸಿನಿಮಾದಿಂದ ದಿಢೀರ್ ಬ್ರೇಕ್ ಪಡೆದ ಕಮಲ್ ಹಾಸನ್: ಕಾರಣವೇನು?
ಚೆನ್ನೈನ ಅಳಂದೂರು ಕ್ಷೇತ್ರದಿಂದ ಸ್ಪರ್ಧೆ
ತಮಿಳುನಾಡಿನ ರಾಜಧಾನಿ ಚೆನ್ನೈನ ಅಳಂದೂರು ವಿಧಾನಸಭಾ ಕ್ಷೇತ್ರದಿಂದ ಕಮಲ್ ಹಾಸನ್ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ. ಇದೇ ಕ್ಷೇತ್ರದಿಂದ 1967 ರಿಂದ 1976 ರ ವರೆಗೆ ಖ್ಯಾತ ನಟ ಎಂಜಿಆರ್ ಸ್ಪರ್ಧೆ ಮಾಡಿ ಗೆದ್ದು ಮುಖ್ಯಮಂತ್ರಿ ಸಹ ಆಗಿದ್ದರು. ಆಗ ಈ ಕ್ಷೇತ್ರಕ್ಕೆ ಪರಂಗಿಮಲೈ ಎಂಬ ಹೆಸರಿತ್ತು. ಎಂಜಿಆರ್ ಅವರ ಪಕ್ಕಾ ಅಭಿಮಾನಿ, ಅನುಯಾಯಿ ಆಗಿರುವ ಕಮಲ್ ಹಾಸನ್ ಇದೇ ಕಾರಣಕ್ಕೆ ಈ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ.
ಎರಡನೇ ಕ್ಷೇತ್ರವಾಗಿ ಕೊಯಂಬತ್ತೂರು ಆಯ್ಕೆ?
ಅಳಂದೂರು ಕ್ಷೇತ್ರದ ಜೊತೆಗೆ ಮತ್ತೊಂದು ಕ್ಷೇತ್ರದಿಂದಲೂ ಕಮಲ್ ಹಾಸನ್ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದ್ದು, ತಮ್ಮ ಎರಡನೇ ಕ್ಷೇತ್ರವಾಗಿ ಕೊಯಂಬತ್ತೂರನ್ನು ಅವರು ಆಯ್ಕೆ ಮಾಡಿಕೊಂಡಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆಗೆ 12 ಮಾರ್ಚ್ಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏಪ್ರಿಲ್ 6 ರಂದು ಮತದಾನ ನಡೆಯಲಿದ್ದು, ಮೇ 2 ರಂದು ಮತ ಎಣಿಕೆ ನಡೆಯಲಿದೆ.
ಕಮಲ್ ಹಾಸನ್ ಗೆ ಶಸ್ತ್ರ ಚಿಕಿತ್ಸೆ: ಸರ್ಜರಿ ಬಳಿಕ ತಂದೆಯ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಮಕ್ಕಳು
ಮಹಿಳಾ ಸಬಲೀಕರಣದ ಗುರಿ
ಮಕ್ಕಳ್ ನಿಧಿ ಮಯಂ ಪಕ್ಷದ ಪ್ರಣಾಳಿಕೆಯಲ್ಲಿ ಮಹಿಳೆಯರಿಗಾಗಿ ಅನೇಕ ಸವಲತ್ತುಗಳನ್ನು ನೀಡುವುದಾಗಿ ಕಮಲ್ ಹಾಸನ್ ಭರವಸೆ ನೀಡಿದ್ದಾರೆ. ಗೃಹಿಣಿಯರಿಗೆ ಮಾಸಿಕೆ ಸಂಭಾವನೆ ನೀಡುವ ಪ್ರಮುಖ ಭರವಸೆಯನ್ನು ಕಮಲ್ ಪಕ್ಷ ನೀಡಿದೆ. ಇದರ ಜೊತೆಗೆ ತಮಿಳುನಾಡಿನ ಎಲ್ಲ ಸರ್ಕಾರಿ ಸೇವೆಗಳಲ್ಲಿ ಮಹಿಳೆಯರಿಗೆ 50% ಮೀಸಲಾತಿ ನೀಡುವುದಾಗಿಯೂ ಭರವಸೆ ನೀಡಲಾಗಿದೆ. ಜೊತೆಗೆ ಯುವಕರಿಗೆ ಉದ್ಯೋಗದ ಭರವಸೆಯನ್ನು ಸಹ ನೀಡಿದೆ ಪಕ್ಷ.
Recommended Video
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಪಕ್ಷ
ಕಮಲ್ ಹಾಸನ್ ಅವರ ಮಕ್ಕಳ್ ನಿಧಿ ಮಯಂ ಪಕ್ಷವು ಕಳೆದ ಲೋಕಸಭೆ ಚುನಾವಣೆಯಲ್ಲಿ 37 ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು ಆದರೆ ಒಂದೂ ಕ್ಷೇತ್ರದಲ್ಲಿಯೂ ಗೆಲ್ಲಲಿಲ್ಲ. ಶೇಕಡಾವಾರು 3.72% ಮತವನ್ನು ಮಕ್ಕಳ ನಿಧಿ ಮಯಂ ಪಕ್ಷದ ಅಭ್ಯರ್ಥಿಗಳು ಪಡೆದಿದ್ದರು. ಆದರೆ ನಗರ ಪ್ರದೇಶದಲ್ಲಿ ತುಸು ಉತ್ತಮ ಪ್ರಮಾಣದ ಮತವನ್ನು ಪಕ್ಷದ ಅಭ್ಯರ್ಥಿಗಳು ಪಡೆದಿದ್ದರು.