Don't Miss!
- News Mallikarjun Kharge: ಕಲಬುರಗಿ ಲೋಕಸಭಾ ಕ್ಷೇತ್ರ; ಅಳಿಯನ ಕಾಳಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಪ್ರತಿಷ್ಠೆ
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Automobiles ಮೇಡ್ ಇನ್ ಇಂಡಿಯಾ ಈ ಕಾರಿಗೆ ಜಪಾನ್ನಲ್ಲಿ ಭಾರೀ ಬೇಡಿಕೆ: ವಿಶ್ವಗುರು ಭಾರತಕ್ಕೆ ಎಲ್ಲವೂ ಸಾಧ್ಯ!
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ತಲೈವಿ' ಎಂಟ್ರಿಗೆ ಕೊನೆಗೂ ದಿನಾಂಕ ಫಿಕ್ಸ್; ಹೊಸ ಬಿಡುಗಡೆ ದಿನಾಂಕ ಘೋಷಣೆ
ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ ಇತ್ತೀಚಿಗೆ ಸಿನಿಮಾ ವಿಚಾರವಾಗಿ ಹೆಚ್ಚು ಸುದ್ದಿಯಲ್ಲಿದ್ದಾರೆ. ಸದಾ ವಿವಾದಗಳ ಮೂಲಕ ಸದ್ದು ಮಾಡುತ್ತಿದ್ದ ಕಂಗನಾ ಈಗ ಬ್ಯಾಕ್ ಟು ಬ್ಯಾಕ್ ಸಿನಿಮಾ ಸುದ್ದಿಗಳನ್ನು ಅಭಿಮಾನಿಗಳಿಗೆ ನೀಡುತ್ತಿದ್ದಾರೆ. ಇತ್ತೀಚಿಗಷ್ಟೆ ತೇಜಸ್ ಸಿನಿಮಾದ ಹೊಸ ಲುಕ್ ನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದ ಕಂಗನಾ ಇದೀಗ ಮತ್ತೊಂದು ಭರ್ಜರಿ ಸುದ್ದಿ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ.
ಕಂಗನಾ ನಟನೆಯ ಬಹುನಿರೀಕ್ಷೆಯ ತಲೈವಿ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಸಿನಿಮಾ ಏಪ್ರಿಲ್ ತಿಂಗಳಲ್ಲೇ ಬಿಡುಗಡೆಯಾಗಬೇಕಿತ್ತು. ಆದರೆ ಕೊರೊನಾ ಹೆಚ್ಚಾದ ಕಾರಣ ಚಿತ್ರಮಂದಿರಗಳನ್ನು ಬಂದ್ ಮಾಡಲಾಯಿತು. ಹಾಗಾಗಿ ಬಂದ ವೇಗದಲ್ಲೇ ತಲೈವಿ ವಾಪಸ್ ಆಗಿತ್ತು. ತಲೈವಿ ದರ್ಶನ ಯಾವಾಗ ಎಂದು ಕಾದುಕುಳಿತಿದ್ದ ಅಭಿಮಾನಿಗಳಿಗೀಗ ಸಂತಸದ ಸುದ್ದಿ ಹೊರ ಬಿದ್ದಿದೆ. ಕೊನೆಗೂ ತಲೈವಿ ಎಂಟ್ರಿಗೆ ದಿನಾಂಕ ಫಿಕ್ಸ್ ಆಗಿದೆ.
ತಲೈವಿ ಸಿನಿಮಾ ನಿಷೇಧಿಸಿ ಎಂದು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಮದ್ರಾಸ್ ಕೋರ್ಟ್
ಬಹುನಿರೀಕ್ಷೆಯ ತಲೈವಿ ಸಿನಿಮಾ ಸೆಪ್ಟಂಬರ್ 10ಕ್ಕೆ ತೆರೆಗೆ ಬರುತ್ತಿದೆ. ಈ ಬಗ್ಗೆ ಸಿನಿಮಾತಂಡ ಅಧಿಕೃತವಾಗಿ ಮಾಹಿತಿ ಬಹಿರಂಗ ಪಡಿಸಿದ್ದಾರೆ. ಟ್ವಿಟ್ಟರ್ ನಿಂದ ಬ್ಯಾನ್ ಆಗಿರುವ ಕಂಗನಾ ಸಿನಿಮಾದ ಬಗ್ಗೆ ಮಾಹಿತಿಯನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. "ಅಪ್ರತಿಮ ವ್ಯಕ್ತಿಯ ಕಥೆಯನ್ನು ಬಿಗ್ ಸ್ಕ್ರೀನ್ ನಲ್ಲಿ ನೋಡಲು ಮಾತ್ರ ಅರ್ಹವಾಗಿದೆ. ಸೆಪ್ಟಂಬರ್ 10ಕ್ಕೆ ತಲೈವಿ ನಿಮ್ಮ ಹತ್ತಿರದ ಚಿತ್ರಮಂದಿರಗಳಲ್ಲಿ ಬರಲಿದೆ" ಎಂದು ಕಂಗನಾ ಬರೆದುಕೊಂಡಿದ್ದಾರೆ.
ಎಲ್ ವಿಜಯ್ ಸಾರಥ್ಯದಲ್ಲಿ ಮೂಡಿಬಂದಿರುವ ತಲೈವಿ ಸಿನಿಮಾ ಈಗಾಗಲೇ ಪೋಸ್ಟರ್ ಮತ್ತು ಟ್ರೈಲರ್ ಮೂಲಕ ಅಭಿಮಾನಿಗಳ ಗಮನ ಸೆಳೆದಿತ್ತು. ಚಿತ್ರಕ್ಕೆ ಕೆ.ವಿ ವಿಜಯೇಂದ್ರ ಪ್ರಸಾದ್ ಚಿತ್ರಕಥೆ ಬರೆದಿದ್ದಾರೆ. ಇದೀಗ ಸಿನಿಮಾ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಚಿತ್ರದಲ್ಲಿ ಕಂಗನಾ ಜಲಯಲಿತಾ ಆಗಿ ಮಿಂಚಿದ್ದಾರೆ. ಕಂಗನಾ ಲುಕ್ ಈಗಾಗಲೇ ಅಭಿಮಾನಿಗಳ ಮೆಚ್ಚುಗೆ ಪಡೆದಿದೆ. ಕಂಗನಾ ವಿವಿದ ಅವತಾರಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಕಂಗನಾ ಜೊತೆ ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇದೆ.
ನಟಿ ಕಂಗನಾ ಇತ್ತೀಚಿಗಕಷ್ಟೆ ಧಾಕಡ್ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ಯೂರೋಪ್ ನಲ್ಲಿ ಕೊನೆಯ ಹಂತದ ಚಿತ್ರೀಕರಣ ಮುಗಿಸಿದ ಸಿನಿಮಾತಂಡ ಪಾರ್ಟಿಯಲ್ಲಿ ಭಾಗಿಯಾಗಿತ್ತು. ಧಾಕಡ್ ಕೊನೆಯ ದಿನದ ಪಾರ್ಟಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಂಗನಾ ಸದ್ಯ ತೇಜಸ್ ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈ ಚಿತ್ರದಲ್ಲಿ ಕಂಗನಾ ವಾಯುಸೇನೆಯ ಪೈಲೆಟ್ ಆಗಿ ಕಾಣಿಸಿಕೊಂಡಿದ್ದಾರೆ.