Don't Miss!
- Lifestyle ಎಳ ನೀರು ಹಾಕಿ ಮಾಡುವ 2 ದೋಸೆ ರೆಸಿಪಿ: ರುಚಿ ಸೂಪರ್, ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಡೆಲ್ಲಿ ವಿರುದ್ಧದ ಹೀನಾಯ ಸೋಲಿಗೆ ಇವರೇ ಕಾರಣ; ಶುಭ್ಮನ್ ಗಿಲ್ ಗರಂ
- News ಭಾರತೀಯ ರೈಲ್ವೆಗೆ 171 ವರ್ಷ: ಮೊದಲ ರೈಲು ಸಂಚಾರ ಎಲ್ಲಿಂದ ಎಲ್ಲಿಗೆ? ಪೋಸ್ಟ್ ಹಂಚಿಕೊಂಡ ರೈಲ್ವೆ
- Technology ಅಗ್ಗದ ದರದಲ್ಲಿ 5G ಫೋನ್ ಖರೀದಿಸಬೇಕೆ?..ಈ ಆಫರ್ ಮಿಸ್ ಮಾಡ್ಕೋಬೇಡಿ!
- Automobiles Kia: ಬಹುನಿರೀಕ್ಷಿತ ಕಿಯಾ ಕ್ಲಾವಿಸ್ ಮೈಕ್ರೋ ಎಸ್ಯುವಿ ಶೀಘ್ರದಲ್ಲೇ ಬಿಡಗಡೆ
- Finance Bullet train: ಮೇಡ್ ಇನ್ ಇಂಡಿಯಾ ಬುಲೆಟ್ ಟ್ರೈನ್ಗೆ ಶೀಘ್ರ ಚಾಲನೆ, ಗಂಟೆಗೆ 250 ವೇಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ತಲೈವಿ' ಟ್ರೈಲರ್; ಸ್ಟಾರ್ ನಟಿಯಿಂದ ಜನರ ನೆಚ್ಚಿನ ಅಮ್ಮವರೆಗೂ ಜಯಲಲಿತಾ ಆಗಿ ಗಮನ ಸೆಳೆದ ಕಂಗನಾ
ಬಾಲಿವುಡ್ ನಟಿ ಕಂಗನಾ ರಣಾವತ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 35ನೇ ವಸಂತಕ್ಕೆ ಕಾಲಿಟ್ಟಿರುವ ನಟಿ ಕಂಗನಾಗೆ ಈ ವರ್ಷದ ಹುಟ್ಟುಹಬ್ಬ ತುಂಬಾ ವಿಶೇಷ. 67ನೇ ರಾಷ್ಟ್ರ ಪ್ರಶಸ್ತಿ ಮುಡಿಗೇರಿಸಿಕೊಂಡ ಸಂತಸ ಒಂದೆಡೆಯಾದರೆ ಮತ್ತೊಂದೆಡೆ ಬಹುನಿರೀಕ್ಷೆಯ ತಲೈವಿ ಟ್ರೈಲರ್ ರಿಲೀಸ್ ಆಗಿದೆೆ.
ಕಂಗನಾ ಹುಟ್ಟುಹಬ್ಬದ ಪ್ರಯುಕ್ತ ತಲೈವಿ ಟ್ರೈಲರ್ ಮಾಡಲಾಗಿದೆ. ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಪಾತ್ರದಲ್ಲಿ ಬಣ್ಣ ಹಚ್ಚಿರುವ ನಟಿ ಕಂಗನಾ ಎಲ್ಲರ ಗಮನ ಸೆಳೆದಿದ್ದಾರೆ. ಸೂಪರ್ ಸ್ಟಾರ್ ನಾಯಕಿಯಾಗಿ ಬಳಿಕ ರಾಜಕೀಯ ಪ್ರವೇಶ ಮಾಡಿ, ಅವಮಾನಗಳನ್ನು ಮೆಟ್ಟಿನಿಂತು, ರಾಜಕಾರಣಿಯಾಗಿ ಖ್ಯಾತಿ ಗಳಿಸಿ ತಮಿಳುನಾಡಿನ ಪ್ರಭಾವಿ ಮಹಿಳೆಯಾಗಿ ಹೊರಹೊಮ್ಮಿದ ಜಯಲಲಿತಾ ಅವರ ಜೀವನದ ಪಯಣ ಟ್ರೈಲರ್ನಲ್ಲಿ ಅನಾವರಣವಾಗಿದೆ.
'ತಲೈವಿ'ಗಾಗಿ 20 ಕೆಜಿ ತೂಕ ಹೆಚ್ಚಿಸಿಕೊಂಡಿದ್ದ ಕಂಗನಾ: ಗಮನ ಸೆಳೆಯುತ್ತಿದೆ ಹೊಸ ಲುಕ್
ಜಯಲಲಿತಾ ಆಗಿ ಮಿಂಚಿರುವ ನಟಿ ಕಂಗನಾ ಅಭಿಮಾನಿಗಳ ನಿರೀಕ್ಷೆ ಹುಸಿಮಾಡಲಿಲ್ಲ. ಪಾತ್ರಕ್ಕಾಗಿ ಕಂಗನಾ ಸಾಕಷ್ಟು ತಯಾರಿ ನಡೆಸಿದ್ದಾರೆ. 20 ಕೆಜಿ ತೂಕ ಹೆಚ್ಚಿಸಿಕೊಂಡಿದ್ದರು. ಅನೇಕ ತಿಂಗಳಿಂದ ತಲೈವಿಗಾಗಿ ಕಂಗನಾ ಪಟ್ಟ ಶ್ರಮ ಟ್ರೈಲರ್ ನಲ್ಲಿ ಎದ್ದು ಕಾಣುತ್ತಿದೆ.
ಇನ್ನು ಸಿನಿಮಾಲ್ಲಿ ನಟ ಪ್ರಕಾಶ್ ರೈ, ಅರವಿಂದ್ ಸ್ವಾಮಿ, ಭಾಗ್ಯಶ್ರೀ, ಜಿಶು ಸೇನ್ ಗುಪ್ತಾ ಸೇರಿದಂತೆ ದೊಡ್ಡ ತಾರಾಬಳಗವೇ ಸಿನಿಮಾದಲ್ಲಿದೆ. ತಲೈವಿ, ಎಎಲ್ ವಿಜಯ್ ಸಾರಥ್ಯದಲ್ಲಿ ಮೂಡಿಬಂದ ಸಿನಿಮಾ. ತಮಿಳು ಮಾತ್ರವಲ್ಲದೆ ತೆಲುಗಿನಲ್ಲೂ ತೆರೆಗೆ ಬರುತ್ತಿದೆ.
ಎರಡು ದಿನಗಳ ಮುಂಚೆಯೇ ಕಂಗನಾ ಚಿತ್ರದ ಫೋಟೋಗಳನ್ನು ಹಂಚಿಕೊಂಡು, 'ಈ ಬಯೋಪಿಕ್ ಚಿತ್ರೀಕರಣ ಸಮಯದಲ್ಲಿ ನಾನು 20 ಕೆಜಿ ತೂಕ ಹೆಚ್ಚಿಸಿಕೊಂಡು ಮತ್ತು ಕೆಲವೇ ತಿಂಗಳಲ್ಲಿ ತೂಕ ಕಡಿಮೆ ಮಾಡುವುದು ದೊಡ್ಡ ಸವಾಲಾಗಿತ್ತು. ಕೆಲವೇ ಗಂಟೆಗಳಲ್ಲಿ ಜಯ ಪಾತ್ರ ನಿಮ್ಮದಾಗಲಿದೆ' ಎಂದು ಹೇಳಿದ್ದರು.