Don't Miss!
- Sports ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಪಾಕ್ ತಂಡದ ಮಾಜಿ ನಾಯಕಿ
- News Karnataka Lok Sabha Election 2024: ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ನಿಷೇಧ!
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಜಯ್ ಸೇತುಪತಿ-ಶ್ರುತಿ ಹಾಸನ್ ಸಿನಿಮಾ ಚಿತ್ರೀಕರಣ ಸೆಟ್ಗೆ ಪೊಲೀಸ್ ಭದ್ರತೆ!
ನಟ ವಿಜಯ್ ಸೇತುಪತಿ ಹಾಗೂ ಶ್ರುತಿ ಹಾಸನ್ ನಟಿಸುತ್ತಿರುವ 'ಲಾಭಂ' ಸಿನಿಮಾದ ಚಿತ್ರೀಕರ ಕೃಷ್ಣಗಿರಿಯಲ್ಲಿ ನಡೆಯುತ್ತಿದ್ದು, ಚಿತ್ರೀಕರಣ ಸೆಟ್ಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆಯಂತೆ.
ಕೆಲವು ದಿನಗಳ ಹಿಂದಷ್ಟೆ ನಟಿ ಶ್ರುತಿ ಹಾಸನ್ ಚಿತ್ರೀಕರಣ ಸೆಟ್ ಬಿಟ್ಟು ಹೋಗಿಬಿಟ್ಟಿದ್ದರು. ಸೆಟ್ಗೆ ಬಹಳ ಮಂದಿ ಅಭಿಮಾನಿಗಳು ಬರುತ್ತಿದ್ದು, ಅವರನ್ನು ನಟ ವಿಜಯ್ ಸೇತುಪತಿ ಮಾತನಾಡಿಸುವುದು, ಕೈಕುಲುಕುವುದು ಮಾಡುತ್ತಿರುತ್ತಾರೆ, ಇದು ಕೋವಿಡ್ ನಿಯಮದ ಉಲ್ಲಂಘನೆ ಎಂದು ಹೇಳಿ ಅವರು ಹೀಗೆ ಮಾಡಿದ್ದರು.
ಈ ಬಗ್ಗೆ ಟ್ವೀಟ್ ಸಹ ಮಾಡಿದ್ದ ಶ್ರುತಿ ಹಾಸನ್, 'ನನ್ನ ಆರೋಗ್ಯ ಕಾಪಾಡಿಕೊಳ್ಳುವ ಹಕ್ಕು ನನಗಿದೆ. ಇನ್ನೂ ಕೊರೊನಾ ಮುಗಿದಿಲ್ಲ, ಬೇಜವಬ್ದಾರಿಯುತ ವರ್ತನೆಯನ್ನು ಸಹಿಸಲಾಗಲು' ಎಂದು ಶ್ರುತಿ ಹೇಳಿದ್ದರು.
ಇದೀಗ ಚಿತ್ರೀಕರಣ ಸೆಟ್ಗೆ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ಚಿತ್ರೀಕರಣ ನೋಡಲು ಬರುವ ಜನರನ್ನು ನಿಯಂತ್ರಿಸಲು ನಿರ್ಮಾಪಕರು ಪೊಲೀಸರ ನೆರವು ಪಡೆಯುತ್ತಿದ್ದಾರೆ.
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಕಳೆದ ಹತ್ತು ದಿನಗಳಿಂದಲೂ ಚಿತ್ರತಂಡ ಬೀಡು ಬಿಟ್ಟಿದ್ದು, ಇಲ್ಲಿಯೇ ಭರದಿಂದ ಚಿತ್ರೀಕರಣ ಸಾಗಿದೆ. ಕೆಲವು ದೃಶ್ಯಗಳ ಜೊತೆಗೆ ಹಾಡಿನ ಚಿತ್ರೀಕರಣ ಸಹ ಇಲ್ಲಿಯೇ ನಡೆಯುತ್ತಿದೆ.
Recommended Video
ಲಾಭಂ ಸಿನಿಮಾವನ್ನು ಎಸ್ಪಿ ಜ್ಞಾನನಾಥನ್ ನಿರ್ದೇಶಿಸುತ್ತಿದ್ದಾರೆ. ಸಿನಿಮಾದಲ್ಲಿ ವಿಜಯ್ ಸೇತುಪತಿ, ಶ್ರುತಿ ಹಾಸನ್ ಹೊರತಾಗಿ, ಜಗಪತಿ ಬಾಬು, ಸಾಯಿ ಧನ್ಸಿಕಾ, ಕಲೈಯರಸನ್ ಇನ್ನೂ ಹಲವರಿದ್ದಾರೆ. ಸಿನಿಮಾವನ್ನು ಪಿ ಆರುಮುಗಂ ಕುಮಾರ್ ನಿರ್ಮಿಸುತ್ತಿದ್ದಾರೆ.