Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳು ನಟ ವಿಜಯ್ಗೆ 1 ಲಕ್ಷ ರೂ ದಂಡ ವಿಧಿಸಿದ ಮದ್ರಾಸ್ ಕೋರ್ಟ್
ತಮಿಳು ನಟ ವಿಜಯ್ಗೆ ಮದ್ರಾಸ್ ಹೈ ಕೋರ್ಟ್ 1 ಲಕ್ಷ ರೂಪಾಯಿ ದಂಡ ವಿಧಿಸಿದೆ. ಎರಡು ವಾರದೊಳಗೆ ದಂಡದ ಹಣವನ್ನು ಮುಖ್ಯಮಂತ್ರಿ ಕೊರೊನಾ ಪರಿಹಾರ ನಿಧಿಗೆ ಪಾವತಿಸುವಂತೆ ಜುಲೈ 13 ರಂದು ನ್ಯಾಯಾಲಯ ನಿರ್ದೇಶನ ನೀಡಿದೆ.
ವಿಜಯ್ ಬಳಸುತ್ತಿರುವ ದುಬಾರಿ ಕಾರೊಂದನ್ನು ವಿದೇಶದಿಂದ ಆಮದು ಮಾಡಿಕೊಂಡಿರುವುದಕ್ಕೆ ಸಂಬಂಧಿಸಿದಂತೆ ತೆರಿಗೆ ಪಾವತಿಸಬೇಕಿತ್ತು. ಅದನ್ನು ವಿಜಯ್ ಕಟ್ಟಿರಲಿಲ್ಲ. ಹಾಗಾಗಿ, ನ್ಯಾಯಾಲಯ ಈಗ ದಂಡ ಹಾಕಿದೆ ಎಂದು ಎಎನ್ಐ ವರದಿ ಮಾಡಿದೆ.
ದಳಪತಿ ವಿಜಯ್ ಮುಂದಿನ ಸಿನಿಮಾಗೆ ತೆಲುಗು ಸ್ಟಾರ್ ನಟನ ತಂದೆ ನಿರ್ಮಾಣ
ಸುಮಾರು ಮೂರು ಕೋಟಿ ಬೆಲೆ ಬಾಳುವ ರೋಲ್ಸ್ ರಾಯ್ಸ್ ಕಾರು ಖರೀದಿಸಿದ್ದ ವಿಜಯ್ ಮೂಲ ಬೆಲೆಯ ಶೇಕಡಾ 20 ರಷ್ಟು ತೆರಿಗೆ ಪಾವತಿಸಬೇಕಿತ್ತು. 2012ರಲ್ಲಿ ಇಂಗ್ಲೆಂಡ್ನಿಂದ ಕಾರು ಆಮದು ಮಾಡಿಕೊಂಡಿದ್ದರು. ದೊಡ್ಡ ಮೊತ್ತದ ತೆರಿಗೆ ಪಾವತಿಸಲು ಸಾಧ್ಯವಿಲ್ಲ, ಅದರಿಂದ ವಿನಾಯಿತಿ ನೀಡಿ ಎಂದು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಬಹಳ ವರ್ಷಗಳಿಂದ ಪ್ರಗತಿಯಲ್ಲಿದ್ದ ಪ್ರಕರಣಕ್ಕೆ ಇಂದು ಕ್ಲೈಮ್ಯಾಕ್ಸ್ ಸಿಕ್ಕಿದ್ದು, ಕೋರ್ಟ್ ವಿಜಯ್ ಅರ್ಜಿ ತಿರಸ್ಕರಿಸಿ ಛೀಮಾರಿ ಹಾಕಿದೆ.
ಕೆಲವು ದಿನಗಳ ಹಿಂದೆ ನೇರಳೆ-ಬಣ್ಣದ ಸ್ವಾಂಕಿ ರೋಲ್ಸ್ ರಾಯ್ಸ್ ಕಾರನ್ನು ಚೆನ್ನೈನಲ್ಲಿ ಸುತ್ತಾಡಿತ್ತು. ಇದು ನಟ ವಿಜಯ್ ಅವರ ಕಾರು, ಅವರೇ ಚಾಲನೆ ಮಾಡುತ್ತಿದ್ದರು ಎಂದು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ವೈರಲ್ ಆಗಿತ್ತು. ಆದರೆ, ಆ ಕಾರು ವಿಜಯ್ ಅವರದ್ದೇ ಹಾಗೂ ವಿಜಯ್ ಸ್ವತಃ ಕಾರು ಚಾಲನೆ ಮಾಡುತ್ತಿದ್ದರು ಎನ್ನುವುದು ಖಾತ್ರಿಯಿಲ್ಲ.
ಇನ್ನು ವಿಜಯ್ ಸಿನಿಮಾ ವಿಚಾರಕ್ಕೆ ಬಂದ್ರೆ ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದಲ್ಲಿ ಹೊಸ ಸಿನಿಮಾ ಮಾಡ್ತಿದ್ದು, ಈ ಚಿತ್ರಕ್ಕೆ 'ಬೀಸ್ಟ್' ಎಂದು ಹೆಸರಿಡಲಾಗಿದೆ. ಸನ್ ಪಿಕ್ಚರ್ಸ್ ಈ ಪ್ರಾಜೆಕ್ಟ್ಗೆ ಬಂಡವಾಳ ಹಾಕಿದ್ದಾರೆ.
Recommended Video
ಮೊದಲ ಹಂತದ ಚಿತ್ರೀಕರಣ ಜಾರ್ಜಿಯಾದಲ್ಲಿ ನಡೆದಿತ್ತು. ಇತ್ತೀಚಿಗೆ ಎರಡನೇ ಹಂತದ ಶೂಟಿಂಗ್ ಚೆನ್ನೈನಲ್ಲಿ ಆರಂಭವಾಗಿರುವ ಬಗ್ಗೆ ಮಾಹಿತಿ ಇದೆ. ಇನ್ನುಳಿದಂತೆ ಪೂಜಾ ಹೆಗ್ಡೆ ನಾಯಕಿಯಾಗಿದ್ದು, ಯೋಗಿ ಬಾಬು ಸಹ ತಾರಬಳಗದಲ್ಲಿದ್ದಾರೆ.