Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊರೊನಾ ಲಸಿಕೆ ಬಗ್ಗೆ ತಪ್ಪು ಮಾಹಿತಿ ಹಬ್ಬಿಸಿದ ನಟನಿಗೆ 2 ಲಕ್ಷ ರೂ.ದಂಡ
ಕೊರೊನಾ ಲಸಿಕೆ ಬಗ್ಗೆ ತಪ್ಪು ಮಾಹಿತಿ ನೀಡಿದ ತಮಿಳು ನಟ ಮನ್ಸೂರ್ ಅಲಿ ಖಾನ್ ಅವರಿಗೆ ಮದ್ರಾಸ್ ಹೈಕೋರ್ಟ್ 2 ಲಕ್ಷ ರೂ. ದಂಡ ವಿಧಿಸಿದೆ. ತಮಿಳುನಾಡಿನಲ್ಲಿ ಮ್ಯಾಕ್ಸಿನ್ ಅಭಿಯಾನದ ಬಗ್ಗೆ ಮತ್ತು ವ್ಯಾಕ್ಸಿನ್ ಪಡೆದ ಮರುದಿನವೇ ಹೃದಯಾಘಾತದಿಂದ ನಿಧನ ಹೊಂದಿದ ನಟ ವಿವೇಕ್ ಸಾವಿಗೆ ಲಿಂಕ್ ಮಾಡಿದ್ದ ಮನ್ಸೂರ್ ಅಲಿ ಖಾನ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಾಗಿತ್ತು.
ವಿವೇಕ್ ಸಾವಿನ ಬಳಿಕ ಮನ್ಸೂರ್ ಅಲಿ ಖಾನ್, ಸರ್ಕಾರ ಜನರನ್ನು ಕೊಲೆ ಮಾಡುತ್ತಿದೆ, ವ್ಯಾಕ್ಸಿನ್ ನೀಡುವ ಮೊದಲು ವಿವೇಕ್ ಚೆನ್ನಾಗಿದ್ದರು. ಆದರೆ ಲಸಿಕೆ ನೀಡಿ ಸಾಯಿಸಲಾಗಿದೆ ಎಂದು ಹೇಳಿದ್ದರು. ಬಳಿಕ ಆರೋಗ್ಯ ಇಲಾಖೆ ಮನ್ಸೂರ್ ಖಾನ್ ವಿರುದ್ಧ ದೂರು ದಾಖಲಿಸಿದ್ದರು.
ಕೋವಿಡ್ ಪೀಡಿತರ ಸಹಾಯಕ್ಕೆ ಸಾಮಾಜಿಕ ಜಾಲತಾಣ ಖಾತೆ ಬಿಟ್ಟುಕೊಟ್ಟ ಜಾನ್ ಅಬ್ರಹಾಂ!
ಮನ್ಸೂರ್ ಅಲಿ ಖಾನ್ ವಿರುದ್ಧ ವಡಪಳನಿ ಪೋಲೀಸ್ ಸ್ಟೇಷನ್ ನಲ್ಲಿ ಎಫ್ ಐ ಆರ್ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಮದ್ರಾಸ್ ಹೈಕೋರ್ಟ್ ಆದೇಶ ನೀಡಿದ್ದು, 2 ಲಕ್ಷ ರೂ.ಗಳನ್ನು ತಮಿಳುನಾಡು ಆರೋಗ್ಯ ಇಲಾಖೆಗೆ ದಂಡದ ರೂಪದಲ್ಲಿ ನೀಡಬೇಕೆಂದು ಸೂಚಿಸಿದೆ.
ವಿವೇಕ್ ಸಾವಿನಿಂದ ಭಾವನಾತ್ಮಕವಾಗಿ ಹೇಳಿದೆ. ಯಾರನ್ನು ನೋಯಿಸುವ ಉದ್ದೇಶ ಇರಲಿಲ್ಲ ಎಂದು ಮನ್ಸೂರ್ ಅಲಿ ಖಾನ್ ಕೋರ್ಟ್ ನಲ್ಲಿ ಹೇಳಿದ್ದಾರೆ.
Recommended Video