Don't Miss!
- News ಬೈಯಪ್ಪನಹಳ್ಳಿ 'ಮೆಟ್ರೋ' ನಿಲ್ದಾಣದಲ್ಲಿ ಪಾರ್ಕಿಂಗ್ ಸಮಸ್ಯೆ: ಪ್ರಯಾಣಿಕರಿಗೆ ತೊಂದರೆ
- Automobiles ಭರ್ಜರಿ ಮೈಲೇಜ್ನ ಹೈಬ್ರಿಡ್ ಮಾರುತಿ ಸ್ವಿಫ್ಟ್: ಇವಿ ಕಾರುಗಳನ್ನೂ ಹಿಂದಿಕ್ಕಲಿದೆ ಎಂದ ಭವಿಷ್ಯವಾಣಿ!
- Sports IPL 2024: ಮುಂಬೈ ಇಂಡಿಯನ್ಸ್ಗೆ ಭಾರೀ ಹಿನ್ನಡೆ; ಹಾರ್ಟ್ಬ್ರೇಕ್ ಪೋಸ್ಟ್ ಮಾಡಿದ ಸೂರ್ಯಕುಮಾರ್
- Technology Airtel & Noise: ಇನ್ಮುಂದೆ ಏರ್ಟೆಲ್ ಪೇಮೆಂಟ್ ಬ್ಯಾಂಕ್ ಸ್ಮಾರ್ಟ್ವಾಚ್ನದ್ದೇ ಹವಾ! ಟ್ಯಾಪ್-ಟು-ಪೇ ಫೀಚರ್ಸ್..
- Finance ಬಾಬಾ ರಾಮ್ದೇವ್ಗೆ ಖುದ್ದು ಹಾಜರಾಗುವಂತೆ ಖಡಕ್ ಸೂಚನೆ ನೀಡಿದ ಸುಪ್ರೀಂ ಕೋರ್ಟ್
- Lifestyle ಈರುಳ್ಳಿ ಹಾಕದೆ 3 ಪದಾರ್ಥ ಹಾಕಿ 5 ನಿಮಿಷದಲ್ಲಿ ಚಟ್ನಿ ಮಾಡಬಹುದು.! ಇಲ್ಲಿದೆ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟರಿಗೆ ಅಪಮಾನ: ಹೈಕೋರ್ಟ್ ನ್ಯಾಯಮೂರ್ತಿ ಆದೇಶಕ್ಕೆ ವಿಜಯ್ ತಗಾದೆ
ನಟ ವಿಜಯ್ ವಿದೇಶದಿಂದ ಆಮದು ಮಾಡಿಕೊಂಡ ರೋಲ್ಸ್ ರಾಯ್ಸ್ ಘೋಸ್ಟ್ ಕಾರಿನ ತೆರಿಗೆ ವಿನಾಯಿತಿ ನೀಡಬೇಕೆಂಬ ನ್ಯಾಯಾಲಯಕ್ಕೆ ಹಾಕಿಕೊಂಡಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಮದ್ರಾಸ್ ಹೈಕೋರ್ಟ್ ಏಕ ಸದಸ್ಯ ಪೀಠದ ನ್ಯಾಯಮೂರ್ತಿಗಳ ಕಟುವಾದ ಮಾತುಗಳನ್ನಾಡಿದ್ದುದು ಕೆಲವು ದಿನಗಳ ಹಿಂದಷ್ಟೆ ವರದಿ ಆಗಿತ್ತು.
ಆದರೆ ವಿಜಯ್ ವಿರುದ್ಧ ಕಟುವಾದ ಮಾತುಗಳನ್ನಾಡಿ ಒಂದು ಲಕ್ಷ ದಂಡ ಹಾಕಿದ್ದ ನ್ಯಾಯಮೂರ್ತಿಗಳು ನೀಡಿದ್ದ ಆದೇಶಕ್ಕೆ ಮದ್ರಾಸ್ ಹೈಕೋರ್ಟ್ನ ದ್ವಿಸದಸ್ಯ ಪೀಠವು ತಡೆ ನೀಡಿದೆ.
ನಟ ವಿಜಯ್ ಕಾರಿನ ಸಂಪೂರ್ಣ ತೆರಿಗೆ ಪಾವತಿಸಲು ತಯಾರಾಗಿದ್ದಾರೆ. ಆದರೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಜಯ್ ವಿರುದ್ಧ ಕಟುವಾದ ಮಾತುಗಳನ್ನಾಡಿದ್ದಾರೆ ಜೊತೆಗೆ ನಟರ ಸಮುದಾಯವನ್ನು ಅಪಮಾನಿಸುವ ರೀತಿಯ ಉಲ್ಲೇಖಗಳನ್ನು ಮಾಡಿದ್ದಾರೆ ಎಂದು ವಿಜಯ್ ಪರ ವಕೀಲರು ಮದ್ರಾಸ್ ಹೈಕೋರ್ಟ್ನಲ್ಲಿ ವಾದಿಸಿದ್ದಾರೆ.
ವಿಜಯ್ ಪರ ವಕೀಲರ ವಾದ ಆಲಿಸಿದ ದ್ವಿಸದಸ್ಯ ಪೀಠದ ಎಂ.ದೊರೆಸ್ವಾಮಿ ಮತ್ತು ಹೇಮಲತಾ ಈ ಹಿಂದಿನ ಆದೇಶಕ್ಕೆ ತಡೆ ನೀಡಿದ್ದಾರೆ.
ವಿಜಯ್ 2012 ರಲ್ಲಿ ಇಂಗ್ಲೆಂಡ್ನಿಂದ ರಾಲ್ಸ್ ರಾಯ್ಸ್ ಗೋಸ್ಟ್ ಕಾರು ಆಮದು ಮಾಡಿಕೊಂಡಿದ್ದರು. ಮೂಲ ಬೆಲೆಯ 20% ತೆರಿಗೆಯನ್ನು ವಿಜಯ್ ಪಾವತಿಸಬೇಕಾಗುತ್ತಿತ್ತು. ಹಾಗಾಗಿ ತೆರಿಗೆ ವಿನಾಯಿತಿ ನೀಡುವಂತೆ ವಿಜಯ್ ಮನವಿ ಮಾಡಿದ್ದರು.
ಬಾಕಿ ಉಳಿದಿದ್ದ ಆ ಪ್ರಕರಣದ ವಿಚಾರಣೆಯನ್ನು ಇತ್ತೀಚೆಗಷ್ಟೆ ಕೈಗೆತ್ತಿಕೊಂಡ ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ, ತೆರಿಗೆ ವಿನಾಯಿತಿ ಕೇಳಿದ್ದಕ್ಕೆ ವಿಜಯ್ಗೆ 1 ಲಕ್ಷ ದಂಡ ವಿಧಿಸಿದ್ದರು. ಅಲ್ಲದೆ, 'ರೀಲ್ ಹೀರೊಗಳು ರಿಯಲ್ ಲೈಫ್ನಲ್ಲಿ ಹೀರೋಗಳಂತೆ ವರ್ತಿಸಲಿ' ಎಂದು ಕಟುವಾಗಿ ಮಾತನಾಡಿದ್ದರು. ವಿಜಯ್ ಸಲ್ಲಿಸಿರುವ ಅಫಿಡಿವಿಟ್ನಲ್ಲಿ ತಮ್ಮ ಉದ್ಯೋಗ ನಮೂದು ಮಾಡದೇ ಇರುವುದಕ್ಕೂ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.
''ತಮಿಳುನಾಡಿನಲ್ಲಿ ಸಿನಿಮಾ ನಟರು ರಾಜ್ಯ ಆಳುವ ನಾಯಕರಾಗಿ ಹೊರಹೊಮ್ಮಿದ್ದಾರೆ ಹಾಗಾಗಿ ಅವರನ್ನು ಜನರು ಅನುಸರಿಸುತ್ತಾರೆ. ಹಾಗಾಗಿ ಅವರು ರೀಲ್ ಹೀರೋಗಳಾಗಿ ಮಾತ್ರವೇ ಉಳಿಯದೇ ನಿಜ ಜೀವನದ ಹೀರೋಗಳಾಗಿ ವರ್ತಿಸಬೇಕು'' ಎಂದಿದ್ದರು. ವಿಜಯ್ ಪ್ರಕರಣದಲ್ಲಿ ನ್ಯಾಯಮೂರ್ತಿಗಳ ಈ ರೀತಿಯ ಮಾತುಗಳನ್ನಾಡಿದ್ದು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು.