Don't Miss!
- News ಮೋದಿ ಯಾರ ಪರ; ಪ್ರಧಾನಿಯಾಗಿ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದು ಯಾರದ್ದು? ಸಿದ್ದರಾಮಯ್ಯ
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Technology ಡೇಟಾ ಬಳಕೆಯಲ್ಲಿ ಚೀನಾ ಮೊಬೈಲ್ ಹಿಂದಿಕ್ಕಿದ ಜಿಯೋ, ಈಗ ವಿಶ್ವದಲ್ಲೇ ದೊಡ್ಡಣ್ಣ!
- Automobiles ಕ್ರ್ಯಾಶ್ಟೆಸ್ಟ್ನಲ್ಲಿ ಈ ಹೋಂಡಾ ಕಾರಿಗೆ ಕೇವಲ 2 ಸ್ಟಾರ್: ಆದರೂ ಭಾರತೀಯರಿಗೆ ಈ ಕಾರು ಅಚ್ಚುಮೆಚ್ಚು!
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಲೈವಿ ಸಿನಿಮಾ ನಿಷೇಧಿಸಿ ಎಂದು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಮದ್ರಾಸ್ ಕೋರ್ಟ್
ಕಂಗನಾ ರಣಾವತ್ ನಟಿಸಿರುವ ತಲೈವಿ ಸಿನಿಮಾ ಬಿಡುಗಡೆಯನ್ನು ನಿಷೇಧಿಸಿ ಎಂದು ಮದ್ರಾಸ್ ಹೈ ಕೋರ್ಟ್ನಲ್ಲಿ ಅರ್ಜಿಯೊಂದು ಸಲ್ಲಿಕೆಯಾಗಿತ್ತು. ದೂರುದಾರರ ಮನವಿ ಸ್ವೀಕರಿಸಿದ್ದ ನ್ಯಾಯಾಲಯ ಶುಕ್ರವಾರ ಈ ಅರ್ಜಿಯನ್ನು ವಜಾಗೊಳಿಸಿದೆ.
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಸಂಬಂಧಿ ಎಂದು ಹೇಳಲಾಗುತ್ತಿರುವ ಜೆ ದೀಪಾ ಎನ್ನುವವರು ನ್ಯಾಯಾಲಯದಲ್ಲಿ ತಲೈವಿ ಚಿತ್ರಕ್ಕೆ ನಿರ್ಬಂಧ ಹೇರುವಂತೆ ಅರ್ಜಿ ಸಲ್ಲಿಸಿದ್ದರು.
ದಿವಂಗತ ಸಿಎಂ ಜಯಲಲಿತಾ ಅವರ ಜೀವನದ ಬಗ್ಗೆ ತಲೈವಿ ಸಿನಿಮಾ ನಕಾರಾತ್ಮಕವಾಗಿ ಬಿಂಬಿಸುವ ಉದ್ದೇಶ ಹೊಂದಿದೆ. ಹಾಗಾಗಿ, ಈ ಚಿತ್ರ ಬಿಡುಗಡೆ ಮಾಡಲು ಅನುಮತಿ ನೀಡಬಾರದು ಎಂದು ಮನವಿ ಮಾಡಿದ್ದರು.
ಸಿನಿಮಾ ಮಾಡುವ ಮುಂಚೆ ಜಯಲಲಿತಾ ಅವರ ಕುಟುಂಬದ ಸದಸ್ಯರೊಂದಿಗೆ ಯಾವುದೇ ಒಪ್ಪಂದ ಹಾಗೂ ಮಾತುಕತೆ ಮಾಡಿಲ್ಲ, ಅವರಿಂದ ಅನುಮತಿಯೂ ಪಡೆದಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.
ಎಎಲ್ ವಿಜಯ್ ಈ ಚಿತ್ರ ನಿರ್ದೇಶನ ಮಾಡಿದ್ದು, ಜಯಲಲಿತಾ ಅವರ ಬಗ್ಗೆ ಕೆಟ್ಟದಾಗಿ ಬಿಂಬಿಸುವ ಯಾವ ಅಂಶಗಳು ಚಿತ್ರದಲ್ಲಿ ಇಲ್ಲ. ಜೆ ದೀಪಾ ಅವರು ತಲೈವಿ ರಿಲೀಸ್ಗೂ ಮುಂಚೆ ಖಾಸಗಿಯಾಗಿ ವಿಶೇಷ ಪ್ರದರ್ಶನ ತೋರಿಸುವಂತೆ ಬೇಡಿಕೆ ಇಟ್ಟಿದ್ದರು. ಅದಕ್ಕೆ ಒಪ್ಪದ ಕಾರಣ ಕೋರ್ಟ್ ಮೊರೆ ಹೋಗಿದ್ದಾರೆ. ತಲೈವಿ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಅನುಮತಿ ಸಿಕ್ಕಿದೆ. ಸಿನಿಮಾ ರಿಲೀಸ್ಗೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ.
ಇನ್ನು ಏಪ್ರಿಲ್ 23 ರಂದು ತಲೈವಿ ಸಿನಿಮಾ ತೆರೆಕಾಣಬೇಕಿತ್ತು. ಕೋವಿಡ್ ಎರಡನೇ ಅಲೆಯ ಭೀತಿಯಿಂದ ಬಿಡುಗಡೆ ದಿನಾಂಕ ಮುಂದೂಡಲಾಗಿದೆ. ಮುಂದಿನ ದಿನಾಂಕದ ಬಗ್ಗೆ ಸದ್ಯಕ್ಕೆ ಮಾಹಿತಿ ಇಲ್ಲ.
Recommended Video
ಕಂಗನಾ ರಣಾವತ್ ಅವರು ಜಯಲಲಿತಾ ಪಾತ್ರದಲ್ಲಿ ನಟಿಸಿದ್ದಾರೆ. ಎಂಜಿಆರ್ ಪಾತ್ರದಲ್ಲಿ ಅರವಿಂದ್ ಸ್ವಾಮಿ ಹಾಗೂ ಕರುಣಾನಿಧಿ ಪಾತ್ರದಲ್ಲಿ ಪ್ರಕಾಶ್ ರಾಜ್ ಬಣ್ಣ ಹಚ್ಚಿದ್ದಾರೆ.