Don't Miss!
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- News ಎನ್ಡಿಎ ಸೇರಿದ ಪ್ರಫುಲ್ ಪಟೇಲ್ ಮೇಲಿದ್ದ ಭ್ರಷ್ಟಾಚಾರ ಪ್ರಕರಣಕ್ಕೆ ಸಿಬಿಐ ಎಳ್ಳುನೀರು!
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಲೈವಿ ಸಿನಿಮಾ ನಿಷೇಧಿಸಿ ಎಂದು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಮದ್ರಾಸ್ ಕೋರ್ಟ್
ಕಂಗನಾ ರಣಾವತ್ ನಟಿಸಿರುವ ತಲೈವಿ ಸಿನಿಮಾ ಬಿಡುಗಡೆಯನ್ನು ನಿಷೇಧಿಸಿ ಎಂದು ಮದ್ರಾಸ್ ಹೈ ಕೋರ್ಟ್ನಲ್ಲಿ ಅರ್ಜಿಯೊಂದು ಸಲ್ಲಿಕೆಯಾಗಿತ್ತು. ದೂರುದಾರರ ಮನವಿ ಸ್ವೀಕರಿಸಿದ್ದ ನ್ಯಾಯಾಲಯ ಶುಕ್ರವಾರ ಈ ಅರ್ಜಿಯನ್ನು ವಜಾಗೊಳಿಸಿದೆ.
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಸಂಬಂಧಿ ಎಂದು ಹೇಳಲಾಗುತ್ತಿರುವ ಜೆ ದೀಪಾ ಎನ್ನುವವರು ನ್ಯಾಯಾಲಯದಲ್ಲಿ ತಲೈವಿ ಚಿತ್ರಕ್ಕೆ ನಿರ್ಬಂಧ ಹೇರುವಂತೆ ಅರ್ಜಿ ಸಲ್ಲಿಸಿದ್ದರು.
ದಿವಂಗತ ಸಿಎಂ ಜಯಲಲಿತಾ ಅವರ ಜೀವನದ ಬಗ್ಗೆ ತಲೈವಿ ಸಿನಿಮಾ ನಕಾರಾತ್ಮಕವಾಗಿ ಬಿಂಬಿಸುವ ಉದ್ದೇಶ ಹೊಂದಿದೆ. ಹಾಗಾಗಿ, ಈ ಚಿತ್ರ ಬಿಡುಗಡೆ ಮಾಡಲು ಅನುಮತಿ ನೀಡಬಾರದು ಎಂದು ಮನವಿ ಮಾಡಿದ್ದರು.
ಸಿನಿಮಾ ಮಾಡುವ ಮುಂಚೆ ಜಯಲಲಿತಾ ಅವರ ಕುಟುಂಬದ ಸದಸ್ಯರೊಂದಿಗೆ ಯಾವುದೇ ಒಪ್ಪಂದ ಹಾಗೂ ಮಾತುಕತೆ ಮಾಡಿಲ್ಲ, ಅವರಿಂದ ಅನುಮತಿಯೂ ಪಡೆದಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.
ಎಎಲ್ ವಿಜಯ್ ಈ ಚಿತ್ರ ನಿರ್ದೇಶನ ಮಾಡಿದ್ದು, ಜಯಲಲಿತಾ ಅವರ ಬಗ್ಗೆ ಕೆಟ್ಟದಾಗಿ ಬಿಂಬಿಸುವ ಯಾವ ಅಂಶಗಳು ಚಿತ್ರದಲ್ಲಿ ಇಲ್ಲ. ಜೆ ದೀಪಾ ಅವರು ತಲೈವಿ ರಿಲೀಸ್ಗೂ ಮುಂಚೆ ಖಾಸಗಿಯಾಗಿ ವಿಶೇಷ ಪ್ರದರ್ಶನ ತೋರಿಸುವಂತೆ ಬೇಡಿಕೆ ಇಟ್ಟಿದ್ದರು. ಅದಕ್ಕೆ ಒಪ್ಪದ ಕಾರಣ ಕೋರ್ಟ್ ಮೊರೆ ಹೋಗಿದ್ದಾರೆ. ತಲೈವಿ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಅನುಮತಿ ಸಿಕ್ಕಿದೆ. ಸಿನಿಮಾ ರಿಲೀಸ್ಗೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ.
ಇನ್ನು ಏಪ್ರಿಲ್ 23 ರಂದು ತಲೈವಿ ಸಿನಿಮಾ ತೆರೆಕಾಣಬೇಕಿತ್ತು. ಕೋವಿಡ್ ಎರಡನೇ ಅಲೆಯ ಭೀತಿಯಿಂದ ಬಿಡುಗಡೆ ದಿನಾಂಕ ಮುಂದೂಡಲಾಗಿದೆ. ಮುಂದಿನ ದಿನಾಂಕದ ಬಗ್ಗೆ ಸದ್ಯಕ್ಕೆ ಮಾಹಿತಿ ಇಲ್ಲ.
Recommended Video
ಕಂಗನಾ ರಣಾವತ್ ಅವರು ಜಯಲಲಿತಾ ಪಾತ್ರದಲ್ಲಿ ನಟಿಸಿದ್ದಾರೆ. ಎಂಜಿಆರ್ ಪಾತ್ರದಲ್ಲಿ ಅರವಿಂದ್ ಸ್ವಾಮಿ ಹಾಗೂ ಕರುಣಾನಿಧಿ ಪಾತ್ರದಲ್ಲಿ ಪ್ರಕಾಶ್ ರಾಜ್ ಬಣ್ಣ ಹಚ್ಚಿದ್ದಾರೆ.