Don't Miss!
- Sports ಪಾಕಿಸ್ತಾನ್ ಸ್ಮೋಕಿಂಗ್ ಲೀಗ್; PSL ಫೈನಲ್ನಲ್ಲಿ ಬೀಡಿ ಸೇದಿದ ಇಮಾದ್ ವಾಸಿಮ್; ವಿಡಿಯೋ ವೈರಲ್
- News ಲೋಕಸಭಾ ಚುನಾವಣೆ 2024: ಹಾಸನದಲ್ಲಿ ಪುತ್ರನ ಪರ ಮತಯಾಚನೆಗಿಳಿದ ಭವಾನಿ ರೇವಣ್ಣ
- Lifestyle ಮೂರು ಮಕ್ಕಳು ನನ್ನದ್ದಲ್ಲ ಎಂದು ಆತನಿಗೆ ತಿಳಿದಾಗ.... ಹೆಂಡತಿಯ ಮಹಾಮೋಸ
- Technology ಬಹುನಿರೀಕ್ಷಿತ ರಿಯಲ್ಮಿ ನಾರ್ಜೋ 70 ಪ್ರೊ 5G ಲಾಂಚ್!..ಇಯರ್ಬಡ್ಸ್ ಉಚಿತ!
- Automobiles ನಟ ವಿಜಯ್ ನೋಡಲು ಬಂದ ಜನಸಾಗರ: ಅಭಿಮಾನಿಗಳಿಂದ ನಟನ ಕಾರಿಗೆ ಹಾನಿ!
- Finance ಬೆಂಗಳೂರಿನ ಮೇಘನಾ ಫುಡ್ಸ್ ಹೋಟೆಲ್ ಮಳಿಗೆಗಳ ಮೇಲೆ ಐಟಿ ದಾಳಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ನನ್ನನ್ನು ಕೇಸರಿ ಮಾಡಲು ಅನೇಕ ಪ್ರಯತ್ನಗಳು ನಡೆದವು, ಆದರೆ ಅವರ ಬಲೆಗೆ ಬೀಳಲಿಲ್ಲ: ರಜನಿಕಾಂತ್
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ವಿಚಾರಕ್ಕೆ ಮತ್ತೆ ಸುದ್ದಿಯಾಗಿದ್ದಾರೆ. ತಲೈವ ಬಿಜೆಪಿ ಸೇರಿಕೊಳ್ಳುತ್ತಾರಾ ಎನ್ನುವ ಮಾತುಗಳು ಆಗಾಗ ಕೇಳಿಬರುತ್ತಿದ್ದವು. ಈ ವಿಚಾರವಾಗಿ ಮಾತನಾಡಿದ ಸೂಪರ್ ಸ್ಟಾರ್ "ನನ್ನನ್ನು ಕೇಸರಿ ಮಾಡಲು ಅನೇಕ ಪ್ರಯತ್ನಗಳು ನಡೆದವು, ಆದರೆ ಅವರ ಬಲೆಗೆ ಬೀಳಲಿಲ್ಲ" ಎಂದು ಹೇಳಿದ್ದಾರೆ. ಈ ಮೂಲಕ ರಜಿನಿಕಾಂತ್ ಬಿಜೆಪಿ ಸೇರುವುದಿಲ್ಲ ಎನ್ನುವುದನ್ನು ಪರೋಕ್ಷವಾಗಿ ಸ್ಪಷ್ಟಪಡಿಸಿದ್ದಾರೆ. ರಜನಿಯ ಈ ಮಾತು ಬಿಜೆಪಿಗೆ ದೊಡ್ಡ ಶಾಕ್ ನೀಡಿದೆ.
ಬಿಜೆಪಿ ಮುಖಂಡ ರಾಧಕೃಷ್ಣನ್ ಜೊತೆಗಿನ ಸಭೆ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ರಜನಿಕಾಂತ್, ತಮಿಳಿನ ಖ್ಯಾತ ಕವಿ ತಿರುವಳ್ಳುವರ್ ಗೆ ಕೇಸರಿ ಶಾಲು ಧರಿಸಿದ್ದ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ. "ತಿರುವಳ್ಳುವರ್ ಹಾಗೆ ನನ್ನನ್ನೂ ಕೇಸರಿ ಮಾಡಲು ಅನೇಕ ಪ್ರಯತ್ನಗಳು ನಡೆದವು, ಆದರೆ ನಾನು ಅವರ ಬಲೆಗೆ ಬೀಳಲಿಲ್ಲ" ಎಂದು ಹೇಳಿದ್ದಾರೆ.
'ದರ್ಬಾರ್' ಮೋಷನ್ ಪೋಸ್ಟರ್ ರಿಲೀಸ್ ಬಳಿಕ ಕನ್ನಡಿಗರು ಬೇಸರ
ಇತ್ತೀಚಿಗೆ ಬಿಜೆಪಿ ಮುಖಂಡರು ತಮಿಳಿನ ಖ್ಯಾತ ಕವಿ ತಿರುವಳ್ಳುವರ್ ಪ್ರತಿಮೆಗೆ ಕೇಸರಿ ಶಾಲು ಹೊದಿಸಿದ ಫೋಟೋವನ್ನು ಟ್ವೀಟ್ ಮಾಡಿ ವಿವಾದಕ್ಕೀಡಾಗಿದ್ದರು. ರಜನಿಕಾಂತ್ ಮಾತು ಮೋದಿ ಸೇರಿದಂತೆ ಬಿಜೆಪಿ ಹಿರಿಯ ನಾಯಕರು ಪಕ್ಷ ಸೇರುವಂತೆ ಮಾಡುತ್ತಿರುವ ಪ್ರಯತ್ನಕ್ಕೆ ಮಣಿಯುವುದಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ. ರಜನಿಕಾಂತ್ ಈ ಮಾತು ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವ ಪ್ಲಾನ್ ನಲ್ಲಿದ್ದ ಬಿಜೆಪಿಗೆ ನಿರಾಸೆ ಮೂಡಿಸಿದೆ.
ಸೂಪರ್ ಸ್ಟಾರ್ ಸದ್ಯ ದರ್ಬಾರ್ ಸಿನಿಮಾ ರಿಲೀಸ್ ನ ಬ್ಯುಸಿಯಲ್ಲಿದ್ದಾರೆ. ಇತ್ತೀಚಿಗಷ್ಟೆ ದರ್ಬಾರ್ ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ. ದರ್ಬಾರ್ ಐದು ಭಾಷೆಯಲ್ಲಿ ತೆರೆಗೆ ಬರುತ್ತಿದೆ. ಚಿತ್ರದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಪೊಲೀಸ್ ಪಾತ್ರದಲ್ಲಿ ಮಿಂಚಿದ್ದಾರೆ.