Just In
Don't Miss!
- News
ಬೆಂಗಳೂರು: 20 ವಾರ್ಡ್ಗಳಲ್ಲಿ 104 ಬೋರ್ವೆಲ್ ಕೊರೆಯಲಿದೆ ಬಿಬಿಎಂಪಿ
- Lifestyle
ಶುಕ್ರವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್
- Sports
ಐಎಸ್ಎಲ್: ಈಸ್ಟ್ ಬೆಂಗಾಲ್ ಅಜೇಯ ನಡೆಗೆ ಬೆಸ್ಟ್ ಮುಂಬೈ ಸವಾಲು
- Finance
ಬಜೆಟ್ 2021: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಜನವರಿ 30ರಂದು ಸರ್ವ ಪಕ್ಷಗಳ ಸಭೆ
- Automobiles
ಬಿಡುಗಡೆಗೆ ಸಜ್ಜಾದ ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ ಬೈಕುಗಳು
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಚಿತ್ರಮಂದಿರ ನಿಯಮ ಸಡಿಲಿಕೆ: ಕೂಡಲೇ ಆದೇಶ ಹಿಂಪಡೆಯಿರಿ ಎಂದ ಕೇಂದ್ರ
ಕೊರೊನಾ ಕಾರಣದಿಂದ ಚಿತ್ರಮಂದಿರಗಳ ಮೇಲೆ ವಿಧಿಸಲಾಗಿದ್ದ ನಿಯಮವಾಳಿಗಳಲ್ಲಿ ಕೆಲವು ಸಡಿಲಿಕೆ ಮಾಡಿ ತಮಿಳುನಾಡು ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಇದಕ್ಕೆ ಕೇಂದ್ರದ ಗೃಹ ಇಲಾಖೆ ಆಕ್ಷೇಪಣೆ ಎತ್ತಿದೆ.
ಚಿತ್ರಮಂದಿರಗಳಲ್ಲಿ ಕೇವಲ 50% ಸೀಟುಗಳಷ್ಟೆ ಭರ್ತಿ ಮಾಡಿ ಸಿನಿಮಾ ಪ್ರದರ್ಶಿಸಬೇಕು ಎಂಬ ನಿಯಮ ಬಹುತೇಕ ಎಲ್ಲ ರಾಜ್ಯಗಳಲ್ಲಿಯೂ ಇದೆ. ಆದರೆ ತಮಿಳುನಾಡು ಸರ್ಕಾರವು, ಚಿತ್ರಮಂದಿರಗಳು 100% ಪ್ರೇಕ್ಷಕರಿಗೆ ಅವಕಾಶ ಮಾಡಿಕೊಡಬಹುದು ಎಂಬ ನಿಯಮವನ್ನು ಕೆಲವು ದಿನಗಳ ಹಿಂದಷ್ಟೆ ಹೊರಡಿಸಿದೆ.
ಥಿಯೇಟರ್ನಲ್ಲಿ 100ರಷ್ಟು ಅನುಮತಿ: ನಟಿ ಖುಷ್ಬೂ ಟ್ವೀಟ್ ವಿರುದ್ಧ ಟೀಕೆ
ಆದರೆ ಇದಕ್ಕೆ ಆಕ್ಷೇಪಿಸಿ ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ಅಜಯ್ ಭಲ್ಲ ಅವರು ತಮಿಳುನಾಡು ಮುಖ್ಯ ಕಾರ್ಯದರ್ಶಿ ಕೆ ಷಣ್ಮುಗನ್ ಅವರಿಗೆ ಪತ್ರ ಬರೆದಿದ್ದು, 'ಚಿತ್ರಮಂದಿರಗಳಲ್ಲಿ 100% ಪ್ರೇಕ್ಷಕರಿಗೆ ಅವಕಾಶ ನೀಡಿರುವ ತಮಿಳುನಾಡು ಸರ್ಕಾರದ ಆದೇಶವು ಕೇಂದ್ರ ಗೃಹ ಇಲಾಖೆಯ ಡಿಸೆಂಬರ್ 28 ರ ಆದೇಶದ ಉಲ್ಲಂಘನೆಯಾಗಿದೆ' ಎಂದು ಹೇಳಿದ್ದಾರೆ.

ಶಿಸ್ತಿನಿಂದ ಪಾಲನೆ ಮಾಡಬೇಕು: ಗೃಹ ಇಲಾಖೆ ತಾಕೀತು
'ವಿಪತ್ತು ನಿರ್ವಹಣೆ ಕಾಯ್ದೆಯ ಅಡಿಯಲ್ಲಿ ಈ ಆದೇಶಗಳನ್ನು ಗೃಹ ಇಲಾಖೆಯು ಹೊರಡಿಸಿದ್ದು, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಕೇಂದ್ರದ ನಿಯಮಗಳನ್ನು ದುರ್ಬಲಗೊಳಿಸಬಾರದು. ಬದಲಾಗಿ ಅವುಗಳನ್ನು ಶಿಸ್ತಿನಿಂದ ಪಾಲನೆ ಮಾಡಬೇಕು' ಎಂದು ಪತ್ರದಲ್ಲಿ ತಾಕೀತು ಮಾಡಲಾಗಿದೆ.

ಸುಪ್ರೀಂಕೋರ್ಟ್ ಆದೇಶ ನೆನಪಿಸಿದ ಗೃಹ ಇಲಾಖೆ ಕಾರ್ಯದರ್ಶಿ
ವಿಪತ್ತು ನಿರ್ವಹಣೆ ಕಾಯ್ದೆಯ ಅಡಿ ಕೇಂದ್ರ ಹೊರಡಿಸಿರುವ ಆದೇಶಗಳನ್ನು ರಾಜ್ಯ ಮತ್ತು ಕೇಂದ್ರಾಡಳಿ ಪ್ರದೇಶಗಳು ಪಾಲಿಸಬೇಕು ಎಂದು ಸುಪ್ರೀಂಕೋರ್ಟ್ ಸಹ ಹೇಳಿದೆ ಎಂದು ಉಲ್ಲೇಖಿಸಿದ್ದಾರೆ ಗೃಹ ಇಲಾಖೆ ಕಾರ್ಯದರ್ಶಿ ಅಜಯ್ ಭಲ್ಲ.
'ಚಿತ್ರಮಂದಿರದಲ್ಲಿ 100ರಷ್ಟು ಅವಕಾಶ ಕೊಡಿ': ಸಿಎಂಗೆ ಮನವಿ ಮಾಡಿದ ವಿಜಯ್

ಕೂಡಲೇ ಹೊಸ ಆದೇಶ ಹೊರಡಿಸಿ ಎಂದ ಕೇಂದ್ರ ಗೃಹ ಇಲಾಖೆ
'ಈ ಕೂಡಲೇ ತಮಿಳುನಾಡು ಸರ್ಕಾರವು ತನ್ನ ಆದೇಶವನ್ನು ಹಿಂಪಡೆದು, ಕೇಂದ್ರದ ನಿಯಮವಾಳಿಗಳು ಜಾರಿಯಾಗುವಂತೆ ಪುನರ್ಆದೇಶ ಹೊರಡಿಸಿ, ಅದರ ಮಾಹಿತಿಯನ್ನು ಕೇಂದ್ರ ಗೃಹ ಇಲಾಖೆಯೊಂದಿಗೆ ಹಂಚಿಕೊಳ್ಳಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ನಟ ವಿಜಯ್ ಮನವಿ ಮಾಡಿದ್ದರು
ಚಿತ್ರಮಂದಿರಗಳಲ್ಲಿ 100% ಪ್ರೇಕ್ಷಕರಿಗೆ ಅವಕಾಶ ನೀಡಬೇಕು ಎಂದು ನಟ ವಿಜಯ್ ಕೆಲವು ದಿನಗಳ ಹಿಂದಷ್ಟೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದರು. ಅದರ ಬೆನ್ನಲ್ಲೇ ತಮಿಳುನಾಡು ಸರ್ಕಾರವು 100% ಪ್ರೇಕ್ಷಕರಿಗೆ ಅವಕಾಶ ಮಾಡಿ ಆದೇಶ ಹೊರಡಿಸಿತ್ತು. ವಿಜಯ್ ನಟನೆಯ ಮಾಸ್ಟರ್ ಸಿನಿಮಾವು ಜನವರಿ 12 ರಂದು ತೆರೆಗೆ ಬರುತ್ತಿದೆ.