Don't Miss!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Automobiles Mahindra Thar: ಸುಲಭವಾಗಿ ಆಫ್ರೋಡ್ ಕಿಂಗ್ ಖರೀದಿಸಬೇಕೆ?: ಆನ್ರೊಡ್ ಬೆಲೆ, EMI ಸಂಪೂರ್ಣ ಮಾಹಿತಿ!
- News ನೇಹಾ ಕೊಲೆಗೆ ಸಿಎಂ ತೀವ್ರ ಖಂಡನೆ: ಕೊಲೆಗಾರನಿಗೆ ಶಿಕ್ಷೆ ಕುರಿತು ಸಿದ್ದರಾಮಯ್ಯ ಹೇಳಿದ್ದೇನು?
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಷ್ಟ್ರಪ್ರಶಸ್ತಿ ಪುರಸ್ಕೃತ ಖ್ಯಾತ ನಿರ್ದೇಶಕ ಎಸ್.ಪಿ ಜನನಾಥನ್ ನಿಧನ
ತಮಿಳು ಸಿನಿಮಾರಂಗದ ಖ್ಯಾತ ನಿರ್ದೇಶಕರಲ್ಲಿ ಒಬ್ಬರಾಗಿದ್ದ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕ ಎಸ್.ಪಿ ಜನನಾಥನ್ ನಿಧನಹೊಂದಿದ್ದಾರೆ. ಚೆನ್ನೈನ ಆಸ್ಪತ್ರೆಯಲ್ಲಿ ಇಂದು (ಮಾರ್ಚ್ 14) ಬೆಳಗ್ಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
61 ವರ್ಷದ ಹಿರಿಯ ನಿರ್ದೇಶಕ ಜನನಾಥನ್, ತನ್ನ 5ನೇ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದರು. ಆದರೆ ಸಿನಿಮಾ ಬಿಡುಗಡೆಗೂ ಮೊದಲೇ ಬಾರದ ಲೋಕಕ್ಕೆ ಹೊರಟು ಹೋಗಿದ್ದಾರೆ.
ಮರಾಠಿ ಚಿತ್ರರಂಗದ ಖ್ಯಾತ ನಟ ಶ್ರೀಕಾಂತ್ ಮೊಘೆ ನಿಧನ
ಎರಡು ದಿನಗಳ ಹಿಂದೆ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದ ಜನನಾಥನ್ ಅವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಗಿತ್ತು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಜನನಾಥನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ಇಂದು ನಿಧನಹೊಂದಿದ್ದಾರೆ. ಜನನಾಥನ್ ನಿಧನಕ್ಕೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಎಸ್ ಪಿ ಜನನಾಥನ್ ನಿರ್ದೇಶನದ ಮೊದಲ ಸಿನಿಮಾ ಐಯ್ಯರ್ಕೈ ಚಿತ್ರ ರಾಷ್ಟ್ರಮಟ್ಟದ ಪ್ರಶಂಸೆ ಜೊತೆಗೆ ರಾಷ್ಟ್ರಪ್ರಶಸ್ತಿಯನ್ನು ತಂದುಕೊಟ್ಟಿದೆ. ಇದುವರೆಗೂ ಜನನಾಥನ್ 4 ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಸದ್ಯ 5ನೇ ಸಿನಿಮಾ ಲಾಬಮ್ ಶೂಟಿಂಗ್ ಪೂರ್ಣಗೊಳಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತರಾಗಿದ್ದರು.
ಜನನಾಥನ್ ನಿರ್ದೇಶನದ ಕೊನೆಯ ಸಿನಿಮಾ ಲಾಬಮ್ ಚಿತ್ರದಲ್ಲಿ ವಿಜಯ್ ಸೇತುಪತಿ, ಶ್ರುತಿ ಹಾಸನ್, ಜಗಪತಿ ಬಾಬು, ಸಾಯಿ ಧನ್ಶಿಕಾ, ರಮೇಶ್ ತಿಲಕ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಖ್ಯಾತ ನಟ ವಿಜಯ್ ಸೇತುಪತಿ ಪ್ರೊಡಕ್ಷನ್ ನಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ.
Recommended Video
ಜನನಾಥನ್ ನಿಧನಕ್ಕೆ ನಟಿ ಶ್ರುತಿ ಹಾಸನ್ ಟ್ವೀಟ್ ಮಾಡಿ, ಭಾರವಾದ ಹೃದಯದಿಂದ ಎಸ್ ಪಿ ಜನನಾಥನ್ ಸರ್ ಅವರಿಗೆ ವಿದಾಯ ಹೇಳುತ್ತಿದ್ದೇವೆ. ನಿಮ್ಮೊಂದಿಗೆ ಕೆಲಸ ಮಾಡಿದ್ದು ತುಂಬಾ ಸಂತೋಷವಾಗಿದೆ' ಎಂದು ಬರೆದುಕೊಂಡಿದ್ದಾರೆ.