Don't Miss!
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊರೊನಾ ನಡುವೆಯೂ ರಜನಿಕಾಂತ್ 'ಅಣ್ಣಾತೆ' ಶೂಟಿಂಗ್: ಹೈದರಾಬಾದ್ಗೆ ಆಗಮಿಸಿದ ನಯನತಾರಾ
ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಅಣ್ಣಾತೆ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಕೊರೊನಾ ಹೆಚ್ಚಾಗಿರುವ ಈ ಸಮಯದಲ್ಲೂ ಅಣ್ಣಾತೆ ಚಿತ್ರೀಕರಣಕ್ಕೆ ಬ್ರೇಕ್ ಹಾಕದೆ ಚಿತ್ರೀಕರಣ ಮಾಡಲಾಗುತ್ತಿದೆ. ಅನೇಕ ಕಾರಣಗಳಿಂದ ಅಣ್ಣಾತೆ ಚಿತ್ರೀಕರಣ ತಡವಾಗುತ್ತಲೇ ಬಂದಿದೆ ಹಾಗಾಗಿ ಆದಷ್ಟು ಬೇಗ ಚಿತ್ರೀಕರಣ ಮುಗಿಸಲು ಸಿನಿಮಾ ತಂಡ ನಿರ್ಧರಿಸಿದೆ.
ಸದ್ಯ ಚಿತ್ರೀಕರಣ ಹೈದರಾಬಾದ್ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆಯುತ್ತಿದೆ. ಇಂದು (ಏಪ್ರಿಲ್ 27) ನಟಿ ನಯನತಾರಾ ಚಿತ್ರೀಕರಣದಲ್ಲಿ ಭಾಗಿಯಾಗಲು ಹೈದರಾಬಾದ್ಗೆ ಬಂದಿಳಿದಿದ್ದಾರೆ. ಹೈದರಾಬಾದ್ ಏರ್ ಪೋರ್ಟ್ನಲ್ಲಿ ಬಂದಿಳಿದ ನಟಿ ನಯನತಾರಾ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಯನತಾರಾ ಹುಟ್ಟುಹಬ್ಬಕ್ಕೆ ಬಾಯ್ಫ್ರೆಂಡ್ ವಿಘ್ನೇಶ್ ಬಂದಿಲ್ಲವೇಕೆ?
ಹೈದರಾಬಾದ್ನಲ್ಲಿ 9 ದಿನಗಳು ನಯನತಾರಾ ಭಾಗದ ಚಿತ್ರೀಕರಣ ನಡೆಯಲಿದೆ. ಹೈದರಾಬಾದ್ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆಯುತ್ತಿರುವ ಚಿತ್ರೀಕರಣದಲ್ಲಿ ಭಾಗಿಯಾಗಿ ಮೇ 10ರೊಳಗೆ ಚಿತ್ರೀಕರಣ ಮುಗಿಸಿ ಚೆನ್ನೈಗೆ ವಾಪಸ್ ಆಗಲಿದ್ದಾರೆ.
ಬಹುನಿರೀಕ್ಷೆಯ ಸಿನಿಮಾ ಇದಾಗಿದ್ದು, ಚಿತ್ರದಲ್ಲಿ ರಜನಿಕಾಂತ್ ಕಾಂತ್ ಮತ್ತು ನಯನತಾರಾ ಜೊತೆ ನಟಿ ಕೀರ್ತಿ ಸುರೇಶ್ ಮತ್ತು ಹಿರಿಯ ನಟಿಯರಾದ ಮೀನಾ ಮತ್ತು ಖುಷ್ಬೂ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದ್ದು, ದೀಪಾವಳಿಗೆ ಸಿನಿಮಾ ರಿಲೀಸ್ ಆಗುತ್ತಿದೆ.
Recommended Video
ಈ ಮೊದಲು ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆಯುತ್ತಿದ್ದ ಸಮಯದಲ್ಲಿ ಚಿತ್ರತಂಡದ ಅನೇಕರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಬಳಿಕ ಚಿತ್ರೀಕರಣ ಸ್ಥಗಿತಮಾಡಲಾಗಿತ್ತು. ಆದರೀಗ ಕೆಲವು ದಿನಗಳಿಂದ ಮತ್ತೆ ಚಿತ್ರೀಕರಣ ಪ್ರಾರಂಭ ಮಾಡಿದ್ದು, ನಟಿ ನಯನತಾರಾ ಕೂಡ ಭಾಗಿಯಾಗಿದ್ದಾರೆ.