Don't Miss!
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- News ಉಚಿತ ಉಪಹಾರದಿಂದ ಉಚಿತ ದಂತ ತಪಾಸಣೆವರೆಗೆ; ಮತದಾನ ಮಾಡಿದವರಿಗೆ ಭರ್ಜರಿ ಆಫರ್ ಕೊಟ್ಟ ಮೈಸೂರು ವ್ಯಾಪಾರಸ್ಥರು
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾಂಸಾಹಾರ ತ್ಯಜಿಸಿ 40 ದಿನ ಉಪವಾಸ ಕೈಗೊಂಡ ನಯನತಾರಾ: ಯಾಕೆ.?
ಸಿನಿಮಾದಲ್ಲಿ ಅಭಿನಯ ಮಾಡೋದು ಸುಲಭದ ಮಾತಲ್ಲ. ಕೆಲವೊಂದು ಪಾತ್ರಗಳನ್ನು ಪೋಷಿಸಬೇಕು ಅಂದ್ರೆ ಶ್ರದ್ಧೆ, ಭಯ, ಭಕ್ತಿ ತುಂಬಾ ಮುಖ್ಯ. ಅದರಲ್ಲೂ, ಭಕ್ತಿ ಪ್ರಧಾನ ಚಿತ್ರಗಳನ್ನು ಚಿತ್ರೀಕರಣ ಮಾಡುವಾಗ ಇಡೀ ತಂಡವೇ ಕಟ್ಟುನಿಟ್ಟಿನ ವ್ರತ ಕೈಗೊಳ್ಳಬೇಕಾಗುತ್ತದೆ. ಇದಕ್ಕೆ ಲೇಟೆಸ್ಟ್ ಉದಾಹರಣೆ ಅಂದ್ರೆ ನಯನತಾರಾ ಅಭಿನಯಿಸಲು ಒಪ್ಪಿಕೊಂಡಿರುವ ತಮಿಳಿನ 'ಮೂಕುತಿ ಅಮ್ಮನ್' ಸಿನಿಮಾ.
'ಸೈರಾ ನರಸಿಂಹ ರೆಡ್ಡಿ' ಮತ್ತು 'ಬಿಗಿಲ್' ಚಿತ್ರಗಳ ಸೂಪರ್ ಸಕ್ಸಸ್ ಬಳಿಕ ನಟಿ ನಯನತಾರಾ ಗ್ರೀನ್ ಸಿಗ್ನಲ್ ಕೊಟ್ಟಿರುವುದು 'ಮೂಕುತಿ ಅಮ್ಮನ್' ಚಿತ್ರಕ್ಕೆ. ಭಿನ್ನ-ವಿಭಿನ್ನ ಪಾತ್ರಗಳನ್ನು ನಿರ್ವಹಿಸಿಕೊಂಡು ಬಂದಿರುವ ನಯನತಾರಾ 'ಮೂಕುತಿ ಅಮ್ಮನ್' ಚಿತ್ರದಲ್ಲಿ ದೇವಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪಾತ್ರವನ್ನು ಪೋಷಿಸುವ ಸಲುವಾಗಿ ನಟಿ ನಯನತಾರಾ ಮಾಂಸಾಹಾರ ತ್ಯಜಿಸಲು ನಿರ್ಧಾರ ಮಾಡಿದ್ದಾರೆ.
'ಮೂಕುತಿ ಅಮ್ಮನ್' ಪಾತ್ರಕ್ಕೆ ಜೀವ ತುಂಬಲು ನಟಿ ನಯನತಾರಾ 40 ದಿನಗಳ ಕಾಲ ಉಪವಾಸ ಕೈಗೊಂಡಿದ್ದಾರೆ. ಚಿತ್ರದ ಶೂಟಿಂಗ್ ಕಂಪ್ಲೀಟ್ ಆಗುವವರೆಗೂ ಬರೀ ಸಸ್ಯಹಾರ ಮಾತ್ರ ಸೇವಿಸಲು ನಯನತಾರಾ ಮನಸ್ಸು ಮಾಡಿದ್ದಾರೆ.
ಪ್ರಚಾರಕ್ಕೆ ಬಾರದ ನಯನತಾರಾಗೆ 'ಸೈರಾ' ನಿರ್ಮಾಪಕರಿಂದ ಸಿಕ್ಕ ಸಂಭಾವನೆ ಎಷ್ಟು.?
ನಯನತಾರಾ ಈ ರೀತಿ ಮಾಂಸಾಹಾರ ಬಿಟ್ಟಿರುವುದು, ಉಪವಾಸ ಕೈಗೊಂಡಿರುವುದು ಇದೇ ಮೊದಲ ಬಾರಿಗೆ ಅಲ್ಲ. 2011 ರಲ್ಲಿ ಬಿಡುಗಡೆ ಆದ ತೆಲುಗಿನ 'ಶ್ರೀ ರಾಮ ರಾಜ್ಯಂ' ಚಿತ್ರದ ಚಿತ್ರೀಕರಣ ಸಂದರ್ಭದಲ್ಲೂ ನಯನತಾರಾ ಮಾಂಸಾಹಾರವನ್ನ ಮುಟ್ಟಿರಲಿಲ್ಲ.
ಬಾಯ್ ಫ್ರೆಂಡ್ ಜೊತೆ ಹಸೆಮಣೆ ಏರಲು ಸಜ್ಜಾದ ನಟಿ ನಯನತಾರಾ
ಅಂದ್ಹಾಗೆ, 'ಮೂಕುತಿ ಅಮ್ಮನ್' ಚಿತ್ರಕ್ಕೆ ನಿರ್ದೇಶನ ಮಾಡುತ್ತಿರುವವರು ಆರ್.ಜೆ.ಬಾಲಾಜಿ. ಡಿಸೆಂಬರ್ ನಿಂದ ಈ ಚಿತ್ರದ ಶೂಟಿಂಗ್ ಶುರುವಾಗಲಿದೆ. ಕನ್ಯಾಕುಮಾರಿಯ 'ಮೂಕುತಿ ಅಮ್ಮನ್' ದೇವಾಲಯದಲ್ಲೇ ಚಿತ್ರದ ಮುಹೂರ್ತ ಸಮಾರಂಭ ನಡೆಯಲಿದೆ.