Don't Miss!
- News Karnataka Lok Sabha Election 2024: ಮೊದಲ ದಿನ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿ
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Technology ಬಿಎಸ್ಎನ್ಎಲ್ ಗ್ರಾಹಕರಿಗೆ ಸಿಹಿಸುದ್ದಿ!..ಬಜೆಟ್ ದರದಲ್ಲಿ ಹೊಸ ಪ್ಲ್ಯಾನ್ ಲಾಂಚ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಸ್ಲಾಂಗೆ ಮತಾಂತರಗೊಳ್ಳುತ್ತಿರುವ ಖ್ಯಾತ ದಕ್ಷಿಣ ಭಾರತದ ನಟ
ದೇಶದಲ್ಲಿ ಈಗ ಎಲ್ಲೆಲ್ಲೂ ಪೌರತ್ವ ತಿದ್ದುಪಡಿ ಮಸೂದೆಯ ಸದ್ದು. ಕೆಲವಡೆ ಶಾಂತಿಯುತ ಪ್ರತಿಭಟನೆಯಾದರೆ, ಮತ್ತೊಂದೆಡೆ ಭಾರೀ ಹಿಂಸಾಚಾರ.
ಈ ನಡುವೆ, ದೇಶದ ಬಾಲಿವುಡ್, ಕಾಲಿವುಡ್, ಟಾಲಿವುಡ್ ಉದ್ಯಮದ ಕಲಾವಿದರು, ಮಸೂದೆಯ ವಿಚಾರದಲ್ಲಿ ತಮ್ಮತಮ್ಮ ಅಭಿಪ್ರಾಯಗಳನ್ನು ಮಂಡಿಸುತ್ತಿದ್ದಾರೆ.
ಹಿರಿಯ ನಟರುಗಳಾದ ಅಮಿತಾಬ್ ಬಚ್ಚನ್, ಕಮಲ್ ಹಾಸನ್, ರಜನೀಕಾಂತ್ ಮುಂತಾದವರು, ಮಸೂದೆಯ ವಿಚಾರದಲ್ಲಿ ಹೇಳಿಕೆಯನ್ನು ನೀಡುತ್ತಿದ್ದಾರೆ.
ರಾಷ್ಟ್ರಪತಿಗಳಿಂದ ಈಗಾಗಲೇ ಅನುಮೋದನೆ ಪಡೆದುಕೊಂಡಿರುವ ಈ ಮಸೂದೆ, ಮುಸ್ಲಿಂ ಸಮುದಾಯಕ್ಕೆ ಮಾರಕವೇ ಎನ್ನುವ ಚರ್ಚೆಯ ನಡುವೆ, ಖ್ಯಾತ ನಟರೊಬ್ಬರು ಇಸ್ಲಾಂಗೆ ಮತಾಂತರಗೊಳ್ಳುತ್ತಿರುವ ಸುದ್ದಿ, ಅಧಿಕೃತಗೊಂಡಿದೆ.
ಇಳಯರಾಜ ಅವರ ಪುತ್ರ ಯುವನ್ ಶಂಕರ್ ರಾಜ
ಖ್ಯಾತ ಸಂಗೀತ ನಿರ್ದೇಶಕ ಮತ್ತು ಇಳಯರಾಜ ಅವರ ಪುತ್ರ ಯುವನ್ ಶಂಕರ್ ರಾಜ, ಆಗಸ್ಟ್ 2014ರಲ್ಲಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದರು. ಈ ವಿಚಾರ, ಅವರ ಕುಟುಂಬದಲ್ಲಿ ಮತ್ತು ಚಿತ್ರೋದ್ಯಮದಲ್ಲಿ ಭಾರೀ ಸದ್ದನ್ನು ಮಾಡಿತ್ತು. ಈಗ, ಇನ್ನೊಬ್ಬ, ತಮಿಳಿನ ನಟ, ಇಸ್ಲಾಂ ಧರ್ಮಕ್ಕೆ ಕನ್ವರ್ಟ್ ಆಗಲಿದ್ದಾರೆ.
ಸಂಗೀತ ನಿರ್ದೇಶಕ ದೇವ ಅವರ ಸೋದರಳಿಯ
ತಮಿಳಿನ ಖ್ಯಾತ ನಟ, ಸಂಗೀತ ನಿರ್ದೇಶಕ ದೇವ ಅವರ ಸೋದರಳಿಯ ಜೈ ಸಂಪತ್ ಆಲಿಯಾಸ್ ಜೈ, ಇಸ್ಲಾಂಗೆ ಮತಾಂತರಗೊಂಡಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಈಗ, ಅವರೇ ಇದಕ್ಕೆ ಸ್ಪಷ್ಟನೆಯನ್ನು ನೀಡುವ ಮೂಲಕ, ಎಲ್ಲಾ ಗೊಂದಲಗಳಿಗೆ ತೆರೆಯೆಳೆದಿದ್ದಾರೆ. (ಚಿತ್ರದಲ್ಲಿ ದೇವಾ)
ಜೈ ಸಂಪತ್ ಆಲಿಯಾಸ್ ಜೈ
ಸಣ್ಣ ವಯಸ್ಸಿನಲ್ಲೇ ಚಿತ್ರೋದ್ಯಮಕ್ಕೆ ಕಾಲಿಟ್ಟ ಜೈ, ಮೊದಮೊದಲು ನಾಯಕನ ತಮ್ಮ/ಸ್ನೇಹಿತನ ಪಾತ್ರದಲ್ಲಿ ನಟಿಸಿದ್ದರು. 2002ರಲ್ಲಿ ಭಗವತಿ ಎನ್ನುವ ಸಿನಿಮಾದ ಮೂಲಕ, ಚಿತ್ರೋದ್ಯಮಕ್ಕೆ ಪಾದಾರ್ಪಣೆ ಮಾಡಿದ್ದರು. ತಮಿಳು, ಮಲಯಾಳಂನಲ್ಲಿ ಇದುವರೆಗೆ 35ಕ್ಕೂ ಹೆಚ್ಚಿ ಸಿನಿಮಾಗಳಲ್ಲಿ ಜೈ ನಟಿಸಿದ್ದಾರೆ.
ಇಸ್ಲಾಂಗೆ ಮತಾಂತರಗೊಂಡ ಜೈ
"ಏಳು ವರ್ಷದ ಹಿಂದೆಯೇ ಇಸ್ಲಾಂಗೆ ಮತಾಂತರಗೊಂಡಿದ್ದೆ, ಈಗ ಹೆಸರು ಬದಲಾಯಿಸಿಕೊಳ್ಳಲಿದ್ದೇನೆ" ಎಂದು ಜೈ ಹೇಳುವ ಮೂಲಕ, ಎಲ್ಲಾ ಊಹಾಪೋಹ ಸುದ್ದಿಗಳಿಗೆ ಫುಲ್ ಸ್ಟಾಪ್ ಇಟ್ಟಿದ್ದಾರೆ. "ನಮ್ಮ ಮನೆಯಲ್ಲಿ ಇದಕ್ಕೆ ಯಾರೂ ಅಡ್ಡಿ ಮಾಡಲಿಲ್ಲ. ಅವರಿಗೆ, ನಾನು ಯಾವುದಾರು ಒಂದು ದೇವರಲ್ಲಿ ನಂಬಿಕೆ ಇಟ್ಟರೆ ಸಾಕು ಎನ್ನುವ ಅಭಿಪ್ರಾಯವನ್ನು ಹೊಂದಿದ್ದರು" ಎಂದು ಜೈ ಹೇಳಿದ್ದಾರೆ.
2013ರಲ್ಲಿ ಬಿಡುಗಡೆಯಾದ 'ರಾಜರಾಣಿ' ಚಿತ್ರ
2013ರಲ್ಲಿ ಬಿಡುಗಡೆಯಾದ 'ರಾಜರಾಣಿ' ಚಿತ್ರ ಜೈ ಅವರಿಗೆ ಒಳ್ಳೆಯ ಹೆಸರನ್ನು ತಂದುಕೊಟ್ಟು, ಫಿಲಂ ಫೇರ್ ಪ್ರಶಸ್ತಿಗೆ ನಾಮಿನೇಟ್ ಕೂಡಾ ಆಗಿದ್ದರು. ಇದಾದ ನಂತರ, ಬಿರಿಯಾನಿ, ಬ್ರಾಮಿಮನ್, ಚೆನ್ನೈ 600028 ಮುಂತಾದ ಸಿನಿಮಾಗಳು ಜೈ ಸಂಪತ್ ಅವರಿಗೆ ಒಳ್ಳೆಯ ಹೆಸರನ್ನು ತಂದುಕೊಟ್ಟಿತ್ತು.