Don't Miss!
- News Bank Holidays in April: ಏಪ್ರಿಲ್ನಲ್ಲಿ 14 ದಿನಗಳ ಕಾಲ ಬ್ಯಾಂಕ್ ರಜೆ, ಪಟ್ಟಿ ಇಲ್ಲಿದೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಜನಿ ನಿರ್ಧಾರ ಬೇಸರ ತಂದಿದೆ, ಆದರೆ ಅವರ ಆರೋಗ್ಯ ನನಗೆ ಮುಖ್ಯ: ಕಮಲ್ ಹಾಸನ್
ರಜನೀಕಾಂತ್ ತಮ್ಮ ಆರೋಗ್ಯ ಸಮಸ್ಯೆ ಮುಂದಿಟ್ಟು, ರಾಜಕೀಯ ಪ್ರವೇಶ ನಿರ್ಧಾರದಿಂದ ಹಿಂದೆ ಸರಿದ ವಿಷಯವನ್ನು ಇಂದು ಬೆಳಿಗ್ಗೆ ಘೋಷಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ತಮಿಳುನಾಡಿನ ಮತ್ತೊಬ್ಬ ಸೂಪರ್ ಸ್ಟಾರ್, ರಜನೀಕಾಂತ್ ಗೆಳೆಯ ಹಾಗೂ ರಾಜಕಾರಣಿ ಕಮಲ್ ಹಾಸನ್, 'ರಜನಿಕಾಂತ್ ನಿರ್ಧಾರ ಬೇಸರ ತಂದಿದೆ' ಎಂದಿದ್ದಾರೆ.
ಇಂದು ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಕಮಲ್ ಹಾಸನ್, 'ಪ್ರಚಾರ ಸಭೆ ಮುಗಿಯುವ ಒಳಗಾಗಿ ನಾನು ಅವರನ್ನು (ರಜನಿ) ಭೇಟಿ ಮಾಡುವೆ, ನನ್ನ ರಜನಿಯ ಆರೋಗ್ಯವೇ ನನಗೆ ಮುಖ್ಯ, ಆತ ಎಲ್ಲಿದ್ದರೂ ಚೆನ್ನಾಗಿಯೇ ಇರಬೇಕು' ಎಂದಿದ್ದಾರೆ ರಜನೀಕಾಂತ್.
ರಜನೀಕಾಂತ್ ರಾಜಕೀಯ ಪಕ್ಷ ಆರಂಭಿಸುತ್ತೇನೆ ಎಂದಾಗ ಕಮಲ್ ಹಾಸನ್ ಅದನ್ನು ಸ್ವಾಗತಿಸಿದ್ದರು, ಆದರೆ ತಾವು ರಜನೀಕಾಂತ್ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದೂ ಸಹ ರಜನೀಕಾಂತ್ ಹೇಳಿದ್ದರು.
ಈಗ ತಮ್ಮ ಗೆಳೆಯ ರಾಜಕೀಯ ಪಕ್ಷ ಸ್ಥಾಪಿಸುವುದರಿಂದ ಹಿಂದೆ ಉಳಿದಿರುವ ನಿರ್ಧಾರದ ಬಗ್ಗೆ ಬೇಸರ ವ್ಯಕ್ತಿಪಡಿಸಿದ್ದಾರೆ ಅಷ್ಟೇ ಅಲ್ಲದೆ, ಅವರೊಂದಿಗೆ ಈ ಬಗ್ಗೆ ಮಾತನಾಡುವುದಾಗಿ ಸಹ ಹೇಳಿದ್ದಾರೆ ಕಮಲ್ ಹಾಸನ್.
ರಜನೀಕಾಂತ್ ಅವರು, ಡಿಸೆಂಬರ್ 31 ರಂದು ತಮ್ಮ ಹೊಸ ಪಕ್ಷದ ಘೋಷಣೆ ಮಾಡುವುದಾಗಿ ಹೇಳಿದ್ದರು. ಆದರೆ ಆರೋಗ್ಯ ಸಮಸ್ಯೆ ಎದುರಾದ ಕಾರಣ ಸಕ್ರಿಯ ರಾಜಕೀಯ ಪ್ರವೇಶ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ಇಂದು ಬೆಳಿಗ್ಗೆ ಘೋಷಿಸಿದರು ರಜನೀಕಾಂತ್.