Don't Miss!
- News ಹಿಂದೂ ಯುವತಿ ಬರ್ಬರ ಹತ್ಯೆ ಪ್ರಕರಣ; ಇದೊಂದು ಲಬ್ ಜಿಹಾದ್ ಎಂದ ಜೋಶಿ: ಸಿದ್ದರಾಮಯ್ಯ ಹೇಳಿದ್ದೇನು?
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟನೆಯಿಂದ ನಿವೃತ್ತಿ ಪಡೆಯುತ್ತಾರಾ ರಜನಿಕಾಂತ್? ಭಾವುಕರಾಗಿದ್ದೇಕೆ ಸೂಪರ್ ಸ್ಟಾರ್?
ಭಾರತೀಯ ಸಿನಿಮಾರಂಗದ ಸೂಪರ್ ಸ್ಟಾರ್ ರಜನಿಕಾಂತ್ ಸದ್ಯ ಅಣ್ಣಾತೆ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಹೈದರಾಬಾದ್ ನಲ್ಲಿ ಚಿತ್ರೀಕರಣ ಮುಗಿಸಿ ಚೆನ್ನೈಗೆ ವಾಪಸ್ ಆಗಿರುವ ರಜನಿಕಾಂತ್ ಸದ್ಯ ಮನೆಯಲ್ಲಿ ಸಮಯ ಕಳೆಯುತ್ತಿದ್ದಾರೆ.
160ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಸೂಪರ್ ಸ್ಟಾರ್ 70ನೇ ವಯಸ್ಸಿನಲ್ಲೂ ಬಾಕ್ಸ್ ಆಫೀಸ್ ಕಿಂಗ್ ಆಗಿ ಮೆರೆಯುತ್ತಿದ್ದಾರೆ. ಆಗಾಗ ಅನಾರೋಗ್ಯಕ್ಕೆ ತುತ್ತಾಗುವ ರಜನಿಕಾಂತ್ ಇತ್ತೀಚಿಗೆ ನಟನೆಯಿಂದ ನಿವೃತ್ತಿ ಪಡೆಯುವ ಬಗ್ಗೆ ಮಾತನಾಡಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.
ಅಣ್ಣಾತೆ ಚಿತ್ರೀಕರಣ ಸಮಯದಲ್ಲಿ ತಲೈವ ಚಿತ್ರತಂಡದ ಜೊತೆ ನಿವೃತ್ತಿ ಬಗ್ಗೆ ಮಾತನಾಡಿ, ಭಾವುಕರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ನಿವೃತ್ತಿ ಪಡೆಯುವ ಮೊದಲು ಸೂಪರ್ ಸ್ಟಾರ್ ಇನ್ನು ಕೆಲವು ಸಿನಿಮಾಗಳಲ್ಲಿ ನಟಿಸುವ ಆಸೆ ವ್ಯಕ್ತಪಡಿಸಿದ್ದಾರಂತೆ. ಸಿನಿಮಾಗಳಲ್ಲಿ ನಟಿಸಬೇಕೆಂದರೆ ಆರೋಗ್ಯ ಉತ್ತಮವಾಗಿರಬೇಕು ಎಂದಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.
ಭಾರತೀಯ ಸಿನಿಮಾರಂಗದ ದೇವರೆಂದು ಕರೆಯಲ್ಪಡುವ ಸೂಪರ್ ಸ್ಟಾರ್ ಕೆಲಸ ನಿಜಕ್ಕೂ ಅಚ್ಚರಿ ಮೂಡಿಸುತ್ತದೆ. ಸಾಮಾನ್ಯ ಬಸ್ ಕಂಡಕ್ಟರ್ ಆಗಿದ್ದ ರಜನಿಕಾಂತ್ ಸೂಪರ್ ಸ್ಟಾರ್ ಪಟ್ಟಕ್ಕೆ ಏರುವವರೆಗಿನ ಪಯಣ ರೋಚಕವಾಗಿದೆ. ಅಭಿನಯದ ಜೊತೆಗೆ ಅವರ ಸರಳತೆ ಅಭಿಮಾನಿಗಳ ಹೃದಯ ಗೆದ್ದಿದೆ. ಇದೀಗ ನಿವೃತ್ತಿ ಪಡೆಯುತ್ತಾರಾ ಎನ್ನುವ ಮಾತು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ.
ಈ ಬಾರಿ ತಮಿಳುನಾಡು ವಿಧಾನಸಭೆ ಚುನಾವಣೆ ಸ್ಪರ್ಧಿಸಲು ತಯಾರಿ ನಡೆಸಿದ್ದ ರಜನಿಕಾಂತ್ ಅವರಿಗೆ ಆನಾರೋಗ್ಯ ಬಿಡಲಿಲ್ಲ. ಬಳಿಕ ರಾಜಕೀಯದಿಂದ ಹಿಂದೆ ಸರಿದ ತಲೈವ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಶಿವಾ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಅಣ್ಣಾತೆ ಚಿತ್ರದಲ್ಲಿ ಸೂಪರ್ ನಟಿಸುತ್ತಿದ್ದಾರೆ.
Recommended Video
ಅಣ್ಣಾತೆ ಚಿತ್ರದಲ್ಲಿ ನಯನತಾರಾ, ಮೀನಾ, ಖುಷ್ಬೂ, ಕೀರ್ತಿ ಸುರೇಶ್, ಜಾಕಿ ಶ್ರಾಫ್, ಜಗಪತಿ ಬಾಬು ಪ್ರಕಾಶ್ ರಾಜ್ ಸೇರಿದಂತೆ ಅನೇಕರು ಬಣ್ಣ ಹಚ್ಚಿದ್ದಾರೆ. ಸೂಪರ್ ವೈದ್ಯಕೀಯ ತಪಾಸಣೆಗಾಗಿ ಸದ್ಯದಲ್ಲೇ ಅಮೆರಿಕಗೆ ತೆರಳಲಿದ್ದಾರೆ ಎಂದು ಹೇಳಲಾಗುತ್ತಿದೆ.