Don't Miss!
- News ಮೋದಿ ಯಾರ ಪರ; ಪ್ರಧಾನಿಯಾಗಿ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದು ಯಾರದ್ದು? ಸಿದ್ದರಾಮಯ್ಯ
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Technology ಡೇಟಾ ಬಳಕೆಯಲ್ಲಿ ಚೀನಾ ಮೊಬೈಲ್ ಹಿಂದಿಕ್ಕಿದ ಜಿಯೋ, ಈಗ ವಿಶ್ವದಲ್ಲೇ ದೊಡ್ಡಣ್ಣ!
- Automobiles ಕ್ರ್ಯಾಶ್ಟೆಸ್ಟ್ನಲ್ಲಿ ಈ ಹೋಂಡಾ ಕಾರಿಗೆ ಕೇವಲ 2 ಸ್ಟಾರ್: ಆದರೂ ಭಾರತೀಯರಿಗೆ ಈ ಕಾರು ಅಚ್ಚುಮೆಚ್ಚು!
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಮೆರಿಕಾದಿಂದ ವೈರಮುತ್ತುಗೆ ರಜನಿ ಕರೆ: ಆರೋಗ್ಯ ವರದಿ ನೀಡಿದ ತಲೈವಾ
ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯ ತಪಾಸಣೆಗಾಗಿ ಅಮೆರಿಕಾ ತೆರಳಿರುವ ವಿಚಾರ ತಿಳಿದಿದೆ. ರಜನಿ ಜೊತೆ ಪತ್ನಿ ಲತಾ, ಮಗಳು ಐಶ್ವರ್ಯ ಧನುಶ್ ಯುಎಸ್ನಲ್ಲಿದ್ದಾರೆ. ಯುಎಸ್ನಿಂದ ಸ್ನೇಹಿತ, ಗೀತೆರಚನೆಕಾರ ವೈರಮುತ್ತು ಅವರಿಗೆ ದೂರವಾಣಿ ಕರೆ ಮಾಡಿದ ರಜನಿಕಾಂತ್ ಆರೋಗ್ಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ತಲೈವಾ ಫೋನ್ ಮಾಡಿದ ವಿಚಾರವನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡ ವೈರಮುತ್ತು, ''ರಜನಿ ಆರೋಗ್ಯವಾಗಿದ್ದಾರೆ, ತಪಾಸಣೆ ಚೆನ್ನಾಗಿದೆ ನಡೆದಿದೆ'' ಎಂದು ತಿಳಿಸಿದ್ದಾರೆ. ರಜನಿಕಾಂತ್ ಜೊತೆ ಮಾತನಾಡಿದ ಬಳಿಕ ಅವರ ಧ್ವನಿಯಲ್ಲಿ ವಿಶ್ವಾಸ ಕಾಣ್ತಿತ್ತು ಎಂದು ವೈರಮುತ್ತು ಟ್ವೀಟ್ ಮಾಡಿದ್ದಾರೆ.
ರಜನಿಕಾಂತ್ ಆರೋಗ್ಯ ರಹಸ್ಯ: ಚರ್ಚೆ ಹುಟ್ಟುಹಾಕಿದ ಕಸ್ತೂರಿ ಶಂಕರ್ ಪೋಸ್ಟ್
''ಯುಎಸ್ನಿಂದ ರಜನಿ ಫೋನ್ ಮಾಡಿದ್ರು. ಆರೋಗ್ಯ ತಪಾಸಣೆ ಚೆನ್ನಾಗಿ ಸಾಗಿದೆ ಎಂದು ಹೇಳಿದರು. ಅದನ್ನು ಕೇಳಿ ಬಹಳಷ್ಟು ಖುಷಿ ಕೊಟ್ಟಿದೆ. ಅವರ ಧ್ವನಿಯಲ್ಲಿ ವಿಶ್ವಾಸ ಮತ್ತು ಆರೋಗ್ಯವಾಗಿದ್ದಾರೆ ಎನ್ನುವುದು ಕಾಣ್ತಿತ್ತು. ಅಭಿಮಾನಿಗಳಿಗಾಗಿ ಇದನ್ನು ಟ್ವೀಟ್ ಮಾಡಿ ತಿಳಿಸುತ್ತಿದ್ದೇನೆ'' ಎಂದು ಪೋಸ್ಟ್ ಹಾಕಿದ್ದಾರೆ.
ಅಂದ್ಹಾಗೆ, ಜೂನ್ 19 ರಂದು ಚೆನ್ನೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಪತ್ನಿ ಲತಾ ಜೊತೆ ರಜನಿಕಾಂತ್ ಅಮೆರಿಕಾ ತೆರಳಿದ್ದರು.
ಇತ್ತೀಚಿಗಷ್ಟೆ ಯುಎಸ್ನ ಮೆಯೊ ಕ್ಲಿನಿಕ್ ಎದುರು ಮಗಳು ಐಶ್ವರ್ಯ ಜೊತೆ ರಜನಿಕಾಂತ್ ಕಾಣಿಸಿಕೊಂಡಿದ್ದರು. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
2016ರಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ಗೆ ಕಿಡ್ನಿ ಸಂಬಂಧಿತ ಶಸ್ತ್ರ ಚಿಕಿತ್ಸೆ ಆಗಿದೆ ಎಂದು ಹೇಳಲಾಗಿದೆ. ಆರೋಗ್ಯದ ಕಡೆ ಹೆಚ್ಚು ಗಮನ ಕೊಡುವ ಕಾರಣಕ್ಕಾಗಿಯೇ ರಜನಿಕಾಂತ್ ರಾಜಕೀಯಿಂದ ಹಿಂದೆ ಸರಿದರು.
ಅಣ್ಣಾತ್ತೆ ಚಿತ್ರದಲ್ಲಿ ರಜನಿಕಾಂತ್
ಸಿರುತೈ ಶಿವ ನಿರ್ದೇಶನದ 'ಅಣ್ಣಾತ್ತೆ' ಸಿನಿಮಾ ಚಿತ್ರೀಕರಣ ಮುಗಿಸಿದ್ದಾರೆ ರಜನಿಕಾಂತ್. ಸನ್ ಪಿಕ್ಚರ್ಸ್ ನಿರ್ಮಾಣ ಮಾಡಿರುವ ಈ ಚಿತ್ರದಲ್ಲಿ ಕೀರ್ತಿ ಸುರೇಶ್, ನಯನತಾರ, ಖುಷ್ಬೂ, ಮೀನಾ, ಪ್ರಕಾಶ್ ರಾಜ್ ಸೇರಿದಂತೆ ಹಲವರು ನಟಿಸಿದ್ದಾರೆ.
Recommended Video