ಕೊರೊನಾ ವಿರುದ್ಧದ ಹೋರಾಟಕ್ಕೆ 50 ಲಕ್ಷ ನೀಡಿದ ರಜನಿಕಾಂತ್

ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ತಮಿಳುನಾಡು ಸರ್ಕಾರದ ಜೊತೆ ಕೈ ಜೋಡಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ದೇಣಿಗೆ ನೀಡುವ ಮೂಲಕ ತಲೈವಾ ಸರ್ಕಾರಕ್ಕೆ ನೆರವಾಗಿದ್ದಾರೆ. ಸೋಮವಾರ (ಮೇ 17) ಖುದ್ದು ರಜನಿಕಾಂತ್ ಅವರೇ ಮುಖ್ಯಮಂತ್ರಿ ಸ್ಟಾಲಿನ್ ಅವರನ್ನು ಭೇಟಿ ಮಾಡಿ 50 ಲಕ್ಷ ಮೌಲ್ಯದ ಚೆಕ್‌ನ್ನು ಸರ್ಕಾರಕ್ಕೆ ಹಸ್ತಾಂತರಿಸಿದ್ದಾರೆ.

ಕೊರೊನಾ ಲಾಕ್‌ಡೌನ್‌ ನಿಯಮವನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲನೆ ಮೂಲಕ ಸರ್ಕಾರಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂದು ರಜನಿ ವಿನಂತಿಸಿದ್ದಾರೆ.

rajinikanth-has-donated-50-lakh-to-tn-cm-relief-fund-for-covid19-relief

ತಮಿಳಿನ ಮತ್ತೊಬ್ಬ ನಟ ಅಜಿತ್ ಕುಮಾರ್ ಸಹ ಸಿಎಂ ಪರಿಹಾರ ನಿಧಿಗೆ 25 ಲಕ್ಷ ದೇಣಿಗೆ ನೀಡಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಅಜಿತ್ ಮ್ಯಾನೇಜರ್ ಅಧಿಕೃತವಾಗಿ ತಿಳಿಸಿರುವುದಾಗಿ ವಿಶ್ಲೇಷಕ ರಮೇಶ್ ಬಾಲ ಟ್ವೀಟ್ ಮಾಡಿದ್ದಾರೆ.

ರಜನಿಕಾಂತ್ ಇತ್ತೀಚಿಗಷ್ಟೆ ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದುಕೊಂಡಿದ್ದಾರೆ. ಹೈದರಾಬಾದ್‌ನಲ್ಲಿ ಅಣ್ಣಾತ್ತೆ ಸಿನಿಮಾದ ಚಿತ್ರೀಕರಣ ಮುಗಿಸಿ ಚೆನ್ನೈಗೆ ಬಂದಿದ್ದ ರಜನಿ, ನಂತರ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ.

Recommended Video

ಸಂಜನಾ Vs ವಂದನಾ:ಹಳೇ ಕೇಸ್ ನಿಂದ ಸಂಜನಾಗೆ ಮತ್ತೆ ಸಂಕಷ್ಟ | Filmibeat Kannada

ಹೈದರಾಬಾದ್‌ ಶೆಡ್ಯೂಲ್ ಮುಗಿಸಿರುವ ರಜನಿ ಈಗ ಚೆನ್ನೈ ನಿವಾಸದಲ್ಲಿದ್ದಾರೆ. ಸಿರುತೈ ಶಿವ ನಿರ್ದೇಶನದ ಈ ಸಿನಿಮಾದಲ್ಲಿ ಕೀರ್ತಿ ಸುರೇಶ್, ನಯನತಾರ, ಖುಷ್ಬೂ, ಮೀನಾ, ಪ್ರಕಾಶ್ ರಾಜ್ ಸೇರಿದಂತೆ ಹಲವರು ನಟಿಸುತ್ತಿದ್ದಾರೆ. ನವೆಂಬರ್ 4 ರಂದು ಅಣ್ಣಾತ್ತೆ ಚಿತ್ರ ತೆರೆಕಾಣಲಿದೆ ಎಂದು ಪ್ರಕಟಿಸಲಾಗಿದೆ.

More from Filmibeat

English summary
Superstar Rajinikanth has donated 50 Lakh to the Tamilnadu CM relief fund for Covid19 Relief.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X